<p><strong>ಗೋರಖಪುರ:</strong> ಉತ್ತರ ಪ್ರದೇಶ ಮುಖ್ಯಮಂತ್ರಿ, ಗೋರಖ ಪೀಠಾಧೀಶ್ವರ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಗೋರಖನಾಥ ದೇಗುಲದಲ್ಲಿ ಹೋಳಿ ಆಚರಿಸಿದರು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ:ಶಾಶ್ವತ ಕ್ರಮಕ್ಕೆ ಯೋಗಿ ಆದಿತ್ಯನಾಥ್ ಕರೆ. <p>ಗೋರಖನಾಥ ದೇಗುಲದ ಮೇಳ ಮೈದಾನಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಹೋಳಿಕವನ್ನು ಸುಟ್ಟರಲ್ಲದೆ, ವೈದಿಕ ಮಂತ್ರ ಪಠಿಸಿ ಭಸ್ಮಕ್ಕೆ ಪೂಜೆ ಸಲ್ಲಿಸಿ, ಆರತಿ ನೆರವೇರಿಸಿದರು. ಈ ಆಚರಣೆ ಬಳಿಕ ಸ್ವಾಮಿಗಳು ಹಾಗೂ ಭಕ್ತರು ಯೋಗಿ ಅದಿತ್ಯನಾಥ್ ಅವರ ಹಣೆಗೆ ಭಸ್ಮ ಹಚ್ಚಿ ಆಶೀರ್ವಾದ ಪಡೆದರು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p><p>ಹೋಳಿಕ ದಹನದ ಸ್ಥಳದಿಂದ ಆದಿತ್ಯನಾಥ್ ಅವರು ಶ್ರೀನಾಥ್ಜಿ ದೇಗುಲಕ್ಕೆ ಭೇಟಿ ನೀಡಿದರು. ಅಲ್ಲಿ ಭಕ್ತಾಧಿಗಳಿಗೆ ಭಸ್ಮ ವಿತರಿಸಿದರು. ಶ್ರೀನಾಥ್ಜಿ ದೇವಾಲಯದ ವೇದಿಕೆಯಲ್ಲಿ ಆಯೋಜಿಸಲಾದ ಗಾಯನ ಕಾರ್ಯಕ್ರಮವನ್ನು ಅವರು ಆನಂದಿಸಿದರು ಎಂದು ಅದು ಹೇಳಿದೆ.</p><p>ಬಳಿಕ ದೇಗುಲದ ಗೋಶಾಲೆಗೆ ಭೇಟಿ ನೀಡಿ, ಅವುಗಳಿಗೆ ಭಸ್ಮ ಹಾಗೂ ಬಣ್ಣ ಹಚ್ಚಿದರು. ಅವುಗಳಿಗೆ ಬೆಲ್ಲ ತಿನ್ನಿಸಿದರು. ಸ್ಥಳದಲ್ಲಿ ಓಡಾಡುತ್ತಿದ್ದ ನವಿಲು ಹಾಗೂ ಬಾತುಕೋಳಿಗಳಿಗೆ ಧಾನ್ಯಗಳನ್ನು ಹಾಕಿದರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p>.ಸನಾತನ ಧರ್ಮದಂತೆ ಹಬ್ಬಗಳ ಶ್ರೀಮಂತ ಪರಂಪರೆ ಬೇರೆ ಧರ್ಮದಲ್ಲಿ ಇಲ್ಲ: ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖಪುರ:</strong> ಉತ್ತರ ಪ್ರದೇಶ ಮುಖ್ಯಮಂತ್ರಿ, ಗೋರಖ ಪೀಠಾಧೀಶ್ವರ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಗೋರಖನಾಥ ದೇಗುಲದಲ್ಲಿ ಹೋಳಿ ಆಚರಿಸಿದರು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ:ಶಾಶ್ವತ ಕ್ರಮಕ್ಕೆ ಯೋಗಿ ಆದಿತ್ಯನಾಥ್ ಕರೆ. <p>ಗೋರಖನಾಥ ದೇಗುಲದ ಮೇಳ ಮೈದಾನಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಹೋಳಿಕವನ್ನು ಸುಟ್ಟರಲ್ಲದೆ, ವೈದಿಕ ಮಂತ್ರ ಪಠಿಸಿ ಭಸ್ಮಕ್ಕೆ ಪೂಜೆ ಸಲ್ಲಿಸಿ, ಆರತಿ ನೆರವೇರಿಸಿದರು. ಈ ಆಚರಣೆ ಬಳಿಕ ಸ್ವಾಮಿಗಳು ಹಾಗೂ ಭಕ್ತರು ಯೋಗಿ ಅದಿತ್ಯನಾಥ್ ಅವರ ಹಣೆಗೆ ಭಸ್ಮ ಹಚ್ಚಿ ಆಶೀರ್ವಾದ ಪಡೆದರು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p><p>ಹೋಳಿಕ ದಹನದ ಸ್ಥಳದಿಂದ ಆದಿತ್ಯನಾಥ್ ಅವರು ಶ್ರೀನಾಥ್ಜಿ ದೇಗುಲಕ್ಕೆ ಭೇಟಿ ನೀಡಿದರು. ಅಲ್ಲಿ ಭಕ್ತಾಧಿಗಳಿಗೆ ಭಸ್ಮ ವಿತರಿಸಿದರು. ಶ್ರೀನಾಥ್ಜಿ ದೇವಾಲಯದ ವೇದಿಕೆಯಲ್ಲಿ ಆಯೋಜಿಸಲಾದ ಗಾಯನ ಕಾರ್ಯಕ್ರಮವನ್ನು ಅವರು ಆನಂದಿಸಿದರು ಎಂದು ಅದು ಹೇಳಿದೆ.</p><p>ಬಳಿಕ ದೇಗುಲದ ಗೋಶಾಲೆಗೆ ಭೇಟಿ ನೀಡಿ, ಅವುಗಳಿಗೆ ಭಸ್ಮ ಹಾಗೂ ಬಣ್ಣ ಹಚ್ಚಿದರು. ಅವುಗಳಿಗೆ ಬೆಲ್ಲ ತಿನ್ನಿಸಿದರು. ಸ್ಥಳದಲ್ಲಿ ಓಡಾಡುತ್ತಿದ್ದ ನವಿಲು ಹಾಗೂ ಬಾತುಕೋಳಿಗಳಿಗೆ ಧಾನ್ಯಗಳನ್ನು ಹಾಕಿದರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p>.ಸನಾತನ ಧರ್ಮದಂತೆ ಹಬ್ಬಗಳ ಶ್ರೀಮಂತ ಪರಂಪರೆ ಬೇರೆ ಧರ್ಮದಲ್ಲಿ ಇಲ್ಲ: ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>