<p><strong>ಲಖನೌ:</strong> ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಲಖನೌದ ಜನಭವನದಲ್ಲಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿದ್ದು, ಭಾನುವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. </p><p>ಯೋಗಿ ಆದಿತ್ಯನಾಥ ಸಂಪುಟದ ವಿಸ್ತರಣೆ ಭಾನುವಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಜನಭವನದಲ್ಲಿ ಹೊಸ ಸಚಿವರ ಪ್ರಯಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ಪಿಟಿಐಗೆ ದೃಢಪಡಿಸಿವೆ. </p><p>ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಸರ್ಕಾರದಿಂದ ಈವರೆಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. </p><p>ಸಂಪುಟ ವಿಸ್ತರಣೆ ಬಗ್ಗೆ ದೀರ್ಘಕಾಲದ ಊಹಾಪೋಹಗಳ ನಡುವೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಪಂಚರಾಜ್ಯ ಚುನಾವಣೆಗಳ ಬೆನ್ನಲ್ಲೇ ರಾಜ್ಯದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. </p><p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸಚಿವ ಸಂಪುಟದ ಗರಿಷ್ಠ ಸಂಖ್ಯೆ 60 ಆಗಿದೆ. ಸದ್ಯ ಆರು ಸ್ಥಾನಗಳು ಖಾಲಿ ಇವೆ. </p><p>ರಾಜ್ಯದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸಂಪುಟದ ವಿಸ್ತರಣೆಯು ಜಾತಿ ಹಾಗೂ ಪ್ರಾದೇಶಿಕ ಸಮೀಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ. </p><p>ಮತ್ತೊಂದೆಡೆ ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟ ವಿಸ್ತರಣೆಯ ಕುರಿತು ಸಮಾಜವಾದಿ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತರಾಟೆಗೆ ತೆಗೆದುಕೊಂಡಿದ್ದು, 'ದೆಹಲಿಯಿಂದ ಸ್ಲಿಪ್ ಬಂದಿದೆಯೇ' ಎಂದು ಪ್ರಶ್ನಿಸಿದ್ದಾರೆ.</p>.ಯೋಗಿ ಆದಿತ್ಯನಾಥ ಭೇಟಿಯಾದ ಅದಾನಿ: 1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿಗೆ ಬೆಂಬಲ.ಬಿಹಾರ-ಯುಪಿ ನಡುವೆ ರಾಮ-ಸೀತೆಯಂತೆ ಮುರಿಯಲಾಗದ ಬಾಂಧವ್ಯವಿದೆ: ಯೋಗಿ ಆದಿತ್ಯನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಲಖನೌದ ಜನಭವನದಲ್ಲಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿದ್ದು, ಭಾನುವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. </p><p>ಯೋಗಿ ಆದಿತ್ಯನಾಥ ಸಂಪುಟದ ವಿಸ್ತರಣೆ ಭಾನುವಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಜನಭವನದಲ್ಲಿ ಹೊಸ ಸಚಿವರ ಪ್ರಯಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ಪಿಟಿಐಗೆ ದೃಢಪಡಿಸಿವೆ. </p><p>ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಸರ್ಕಾರದಿಂದ ಈವರೆಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. </p><p>ಸಂಪುಟ ವಿಸ್ತರಣೆ ಬಗ್ಗೆ ದೀರ್ಘಕಾಲದ ಊಹಾಪೋಹಗಳ ನಡುವೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಪಂಚರಾಜ್ಯ ಚುನಾವಣೆಗಳ ಬೆನ್ನಲ್ಲೇ ರಾಜ್ಯದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. </p><p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸಚಿವ ಸಂಪುಟದ ಗರಿಷ್ಠ ಸಂಖ್ಯೆ 60 ಆಗಿದೆ. ಸದ್ಯ ಆರು ಸ್ಥಾನಗಳು ಖಾಲಿ ಇವೆ. </p><p>ರಾಜ್ಯದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸಂಪುಟದ ವಿಸ್ತರಣೆಯು ಜಾತಿ ಹಾಗೂ ಪ್ರಾದೇಶಿಕ ಸಮೀಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ. </p><p>ಮತ್ತೊಂದೆಡೆ ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟ ವಿಸ್ತರಣೆಯ ಕುರಿತು ಸಮಾಜವಾದಿ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತರಾಟೆಗೆ ತೆಗೆದುಕೊಂಡಿದ್ದು, 'ದೆಹಲಿಯಿಂದ ಸ್ಲಿಪ್ ಬಂದಿದೆಯೇ' ಎಂದು ಪ್ರಶ್ನಿಸಿದ್ದಾರೆ.</p>.ಯೋಗಿ ಆದಿತ್ಯನಾಥ ಭೇಟಿಯಾದ ಅದಾನಿ: 1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿಗೆ ಬೆಂಬಲ.ಬಿಹಾರ-ಯುಪಿ ನಡುವೆ ರಾಮ-ಸೀತೆಯಂತೆ ಮುರಿಯಲಾಗದ ಬಾಂಧವ್ಯವಿದೆ: ಯೋಗಿ ಆದಿತ್ಯನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>