<p><strong>ದರ್ಬಾಂಗ್:</strong> ‘ಕಾಂಗ್ರೆಸ್, ಆರ್ಜೆಡಿ ಮತ್ತು ಸಮಾಜವಾದಿ ಪಕ್ಷಗಳು ಅಪರಾಧಿಗಳನ್ನು ಬೆಂಬಲಿಸುತ್ತಿವೆ. ಈ ಮೂಲಕ ಬಿಹಾರ ರಾಜ್ಯದ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿವೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದರ್ಬಾಂಗ್ನಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಸಿಎಂ ಯೋಗಿ, ಆರ್ಜೆಡಿ-ಕಾಂಗ್ರೆಸ್ ಆಳ್ವಿಕೆಯಲ್ಲಿ, ರಾಜ್ಯದಲ್ಲಿ ಬಡವರಿಗೆ ಸಿಗುತ್ತಿದ್ದ ಪಡಿತರವನ್ನು ಲೂಟಿ ಮಾಡಲಾಯಿತು ಎಂದು ಆರೋಪಿಸಿದರು.</p><p>ಇದೇ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಪಪ್ಪು’, ಆರ್ಜೆಡಿಯ ತೇಜಸ್ವಿ ಯಾದವ್ ‘ತಪ್ಪು’ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ‘ಅಕ್ಕು’ ಎಂದು ಲೇವಡಿ ಮಾಡಿದರು. ಜತೆಗೆ, ಇವರು ಮಹಾತ್ಮಾ ಗಾಂಧಿಯವರ ಮೂರು ಹೊಸ ಕೋತಿಗಳು ಎಂದು ವ್ಯಂಗ್ಯವಾಡಿದರು.</p><p>ಈ ಮೂರು ಜನ ಜಾತಿ ಮತ್ತು ಗಲಭೆಗಳ ಮೂಲಕ ದೇಶದ ಜನರನ್ನು ವಿಭಜನೆಗೊಳಿಸಿದ್ದಾರೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದರ್ಬಾಂಗ್:</strong> ‘ಕಾಂಗ್ರೆಸ್, ಆರ್ಜೆಡಿ ಮತ್ತು ಸಮಾಜವಾದಿ ಪಕ್ಷಗಳು ಅಪರಾಧಿಗಳನ್ನು ಬೆಂಬಲಿಸುತ್ತಿವೆ. ಈ ಮೂಲಕ ಬಿಹಾರ ರಾಜ್ಯದ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿವೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದರ್ಬಾಂಗ್ನಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಸಿಎಂ ಯೋಗಿ, ಆರ್ಜೆಡಿ-ಕಾಂಗ್ರೆಸ್ ಆಳ್ವಿಕೆಯಲ್ಲಿ, ರಾಜ್ಯದಲ್ಲಿ ಬಡವರಿಗೆ ಸಿಗುತ್ತಿದ್ದ ಪಡಿತರವನ್ನು ಲೂಟಿ ಮಾಡಲಾಯಿತು ಎಂದು ಆರೋಪಿಸಿದರು.</p><p>ಇದೇ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಪಪ್ಪು’, ಆರ್ಜೆಡಿಯ ತೇಜಸ್ವಿ ಯಾದವ್ ‘ತಪ್ಪು’ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ‘ಅಕ್ಕು’ ಎಂದು ಲೇವಡಿ ಮಾಡಿದರು. ಜತೆಗೆ, ಇವರು ಮಹಾತ್ಮಾ ಗಾಂಧಿಯವರ ಮೂರು ಹೊಸ ಕೋತಿಗಳು ಎಂದು ವ್ಯಂಗ್ಯವಾಡಿದರು.</p><p>ಈ ಮೂರು ಜನ ಜಾತಿ ಮತ್ತು ಗಲಭೆಗಳ ಮೂಲಕ ದೇಶದ ಜನರನ್ನು ವಿಭಜನೆಗೊಳಿಸಿದ್ದಾರೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>