<p><strong>ಶ್ರೀನಗರ:</strong> ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್, ‘ನನ್ನ ಸ್ಥಿತಿ ರೇಪ್ಗೆ ಒಳಗಾದವರಂತಾಗಿದೆ’ ಎಂದು ಹೇಳಿದ್ದನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಖಂಡಿಸಿದ್ದಾರೆ.</p>.<p>'ಸರ್, ನಿಮಗೆ ಅತ್ಯಾಚಾರ ಸಂತ್ರಸ್ತೆಯ ನೋವು ಅರ್ಥವಾಗಲ್ಲ.ಮಹಿಳೆಯ ಯಾವ ರೀತಿ ಆ ನೋವನ್ನು ಅನುಭವಿಸುತ್ತಾಳೆ ಎಂಬುದರ ಬಗ್ಗೆ ನಿಮಗೆ ಕಲ್ಪನೆಯೇ ಇಲ್ಲ ಬಿಡಿ.ನೀವು ನೀಡಿದ ಹೋಲಿಕೆ ದುರದೃಷ್ಟಕರ.ನಿಮ್ಮ ಮಾತಿಗೆ ಅಲ್ಲಿದ್ದಶಾಸಕರೂ ನಕ್ಕಿದ್ದು ನೋಡಿ ಇನ್ನೂ ಬೇಸರವಾಯಿತು'ಎಂದು ಪಿಡಿಬಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ.</p>.<p>ಮಂಗಳವಾರ ಆಡಿಯೋ ಪ್ರಕರಣದ ಕುರಿತು ವಿಧಾಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಚರ್ಚೆಯ ವೇಳೆ ಮಾತನಾಡಿದ ಸಭಾಧ್ಯಕ್ಷ ರಮೇಶ್ ಕುಮಾರ್, ‘ನನ್ನ ಸ್ಥಿತಿ ರೇಪ್ಗೆ ಒಳಗಾದವರಂತಾಗಿದೆ’ ಎಂದಿದ್ದರು.</p>.<p>ಆಡಳಿತ ಮತ್ತು ಬಿಜೆಪಿ ಸದಸ್ಯರು ಪದೇ ಪದೆ ತಮ್ಮ ಹೆಸರು ಪ್ರಸ್ತಾಪ ಮಾಡುತ್ತಿರುವುದನ್ನು ನೋಡಿ ಸಭಾಧ್ಯಕ್ಷರು ಈ ರೀತಿ ಹೇಳಿದ್ದಾರೆ. ‘ರೇಪ್ ಒಂದೇ ಸಲ ಆಗಿ ಹೋಗಿರುತ್ತದೆ. ಆದರೆ ವಿಚಾರಣೆ ವೇಳೆ ಯಾರು ಮಾಡಿದರು, ಎಲ್ಲಿ ಮಾಡಿದರು, ಹೇಗೆ ಮಾಡಿದರು, ಎಷ್ಟೊತ್ತು ಮಾಡಿದರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಪದೇ ಪದೇ ಕೇಳಿ ಕಿರಿಕಿರಿ ಉಂಟು ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ನನ್ನ ಸ್ಥಿತಿಯೂ ಹಾಗೆಯೇ ಆಗಿದೆ’ ಎಂದು ರಮೇಶ್ ಕುಮಾರ್ ಹೇಳಿದಾಗ ಸದನದಲ್ಲಿ ಎಲ್ಲರೂ ನಕ್ಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್, ‘ನನ್ನ ಸ್ಥಿತಿ ರೇಪ್ಗೆ ಒಳಗಾದವರಂತಾಗಿದೆ’ ಎಂದು ಹೇಳಿದ್ದನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಖಂಡಿಸಿದ್ದಾರೆ.</p>.<p>'ಸರ್, ನಿಮಗೆ ಅತ್ಯಾಚಾರ ಸಂತ್ರಸ್ತೆಯ ನೋವು ಅರ್ಥವಾಗಲ್ಲ.ಮಹಿಳೆಯ ಯಾವ ರೀತಿ ಆ ನೋವನ್ನು ಅನುಭವಿಸುತ್ತಾಳೆ ಎಂಬುದರ ಬಗ್ಗೆ ನಿಮಗೆ ಕಲ್ಪನೆಯೇ ಇಲ್ಲ ಬಿಡಿ.ನೀವು ನೀಡಿದ ಹೋಲಿಕೆ ದುರದೃಷ್ಟಕರ.ನಿಮ್ಮ ಮಾತಿಗೆ ಅಲ್ಲಿದ್ದಶಾಸಕರೂ ನಕ್ಕಿದ್ದು ನೋಡಿ ಇನ್ನೂ ಬೇಸರವಾಯಿತು'ಎಂದು ಪಿಡಿಬಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ.</p>.<p>ಮಂಗಳವಾರ ಆಡಿಯೋ ಪ್ರಕರಣದ ಕುರಿತು ವಿಧಾಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಚರ್ಚೆಯ ವೇಳೆ ಮಾತನಾಡಿದ ಸಭಾಧ್ಯಕ್ಷ ರಮೇಶ್ ಕುಮಾರ್, ‘ನನ್ನ ಸ್ಥಿತಿ ರೇಪ್ಗೆ ಒಳಗಾದವರಂತಾಗಿದೆ’ ಎಂದಿದ್ದರು.</p>.<p>ಆಡಳಿತ ಮತ್ತು ಬಿಜೆಪಿ ಸದಸ್ಯರು ಪದೇ ಪದೆ ತಮ್ಮ ಹೆಸರು ಪ್ರಸ್ತಾಪ ಮಾಡುತ್ತಿರುವುದನ್ನು ನೋಡಿ ಸಭಾಧ್ಯಕ್ಷರು ಈ ರೀತಿ ಹೇಳಿದ್ದಾರೆ. ‘ರೇಪ್ ಒಂದೇ ಸಲ ಆಗಿ ಹೋಗಿರುತ್ತದೆ. ಆದರೆ ವಿಚಾರಣೆ ವೇಳೆ ಯಾರು ಮಾಡಿದರು, ಎಲ್ಲಿ ಮಾಡಿದರು, ಹೇಗೆ ಮಾಡಿದರು, ಎಷ್ಟೊತ್ತು ಮಾಡಿದರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಪದೇ ಪದೇ ಕೇಳಿ ಕಿರಿಕಿರಿ ಉಂಟು ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ನನ್ನ ಸ್ಥಿತಿಯೂ ಹಾಗೆಯೇ ಆಗಿದೆ’ ಎಂದು ರಮೇಶ್ ಕುಮಾರ್ ಹೇಳಿದಾಗ ಸದನದಲ್ಲಿ ಎಲ್ಲರೂ ನಕ್ಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>