<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್ ತಂದೊಡ್ಡಿದ್ದ ಬಿಕ್ಕಟ್ಟಿನ ನಡುವೆ ವಿರಮಿಸಿಕೊಳ್ಳದೇ ಸೇವೆ ಸಲ್ಲಿಸಿದ ರೈಲ್ವೆ ಇಲಾಖೆಯ 13 ಲಕ್ಷ ಸಿಬ್ಬಂದಿಗೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಪತ್ರದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.</p>.<p>‘ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಇಡೀ ವಿಶ್ವವೇ ಸ್ತಬ್ಧವಾಗಿದ್ದಾಗ ರೈಲ್ವೆ ಸಿಬ್ಬಂದಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೇ ಕರ್ತವ್ಯ ನಿರ್ವಹಿಸಿದ್ದಾರೆ. ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ‘ ಎಂದು ಗೋಯಲ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ್ದಾರೆ</p>.<p>‘ದೇಶ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದಾಗಲೂ ರೈಲ್ವೆ ಇಲಾಖೆ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು, ರೈತರಿಗಾಗಿ ಗೊಬ್ಬರ ಮತ್ತು ಗ್ರಾಹಕರಿಗೆ ಆಹಾರ–ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಲು ನೆರವಾಗಿದೆ. ಸಿಬ್ಬಂದಿಯ ಇಚ್ಛಾಶಕ್ತಿ ಮತ್ತು ತಾಳ್ಮೆಯಿಂದಾಗಿ ಈ ಬಿಕ್ಕಟ್ಟನ್ನು ನಾವು ಎದುರಿಸಲು ಸಾಧ್ಯವಾಯಿತು’ ಎಂದು ಅವರು ಇಲಾಖೆ ಸಿಬ್ಬಂದಿಯ ಸೇವೆಯನ್ನು ಸ್ಮರಿಸಿದ್ದಾರೆ.</p>.<p>‘ಲಾಕ್ಡೌನ್ ಸಮಯಲ್ಲಿ 4,621 ಶ್ರಮಿಕ ವಿಶೇಷ ರೈಲುಗಳು ಸಂಚರಿಸಿವೆ. ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ 63 ಲಕ್ಷಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಗೆ ತಲುಪಿಸಲು ಈ ರೈಲುಗಳು ನೆರವಾಗಿವೆ. ಕಿಸಾನ್ ರೈಲ್ವೆ ಸೇವೆಯು ‘ಅನ್ನದಾತ’ನಿಗೆ ನೇರವಾಗಿ ದೊಡ್ಡ ಮಾರುಕಟ್ಟೆಗಳೊಂದಿಗೆ ಸಂಪರ್ಕ ಕಲ್ಪಿಸಲು ಸಹಾಯ ಮಾಡಿದೆ. ರೈಲ್ವೆ ಸಿಬ್ಬಂದಿ ದೇಶದ ಲಕ್ಷಾಂತರ ಜನರ ಮನಸ್ಸು ಗೆದ್ದಿದ್ದಾರೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್ ತಂದೊಡ್ಡಿದ್ದ ಬಿಕ್ಕಟ್ಟಿನ ನಡುವೆ ವಿರಮಿಸಿಕೊಳ್ಳದೇ ಸೇವೆ ಸಲ್ಲಿಸಿದ ರೈಲ್ವೆ ಇಲಾಖೆಯ 13 ಲಕ್ಷ ಸಿಬ್ಬಂದಿಗೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಪತ್ರದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.</p>.<p>‘ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಇಡೀ ವಿಶ್ವವೇ ಸ್ತಬ್ಧವಾಗಿದ್ದಾಗ ರೈಲ್ವೆ ಸಿಬ್ಬಂದಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೇ ಕರ್ತವ್ಯ ನಿರ್ವಹಿಸಿದ್ದಾರೆ. ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ‘ ಎಂದು ಗೋಯಲ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ್ದಾರೆ</p>.<p>‘ದೇಶ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದಾಗಲೂ ರೈಲ್ವೆ ಇಲಾಖೆ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು, ರೈತರಿಗಾಗಿ ಗೊಬ್ಬರ ಮತ್ತು ಗ್ರಾಹಕರಿಗೆ ಆಹಾರ–ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಲು ನೆರವಾಗಿದೆ. ಸಿಬ್ಬಂದಿಯ ಇಚ್ಛಾಶಕ್ತಿ ಮತ್ತು ತಾಳ್ಮೆಯಿಂದಾಗಿ ಈ ಬಿಕ್ಕಟ್ಟನ್ನು ನಾವು ಎದುರಿಸಲು ಸಾಧ್ಯವಾಯಿತು’ ಎಂದು ಅವರು ಇಲಾಖೆ ಸಿಬ್ಬಂದಿಯ ಸೇವೆಯನ್ನು ಸ್ಮರಿಸಿದ್ದಾರೆ.</p>.<p>‘ಲಾಕ್ಡೌನ್ ಸಮಯಲ್ಲಿ 4,621 ಶ್ರಮಿಕ ವಿಶೇಷ ರೈಲುಗಳು ಸಂಚರಿಸಿವೆ. ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ 63 ಲಕ್ಷಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಗೆ ತಲುಪಿಸಲು ಈ ರೈಲುಗಳು ನೆರವಾಗಿವೆ. ಕಿಸಾನ್ ರೈಲ್ವೆ ಸೇವೆಯು ‘ಅನ್ನದಾತ’ನಿಗೆ ನೇರವಾಗಿ ದೊಡ್ಡ ಮಾರುಕಟ್ಟೆಗಳೊಂದಿಗೆ ಸಂಪರ್ಕ ಕಲ್ಪಿಸಲು ಸಹಾಯ ಮಾಡಿದೆ. ರೈಲ್ವೆ ಸಿಬ್ಬಂದಿ ದೇಶದ ಲಕ್ಷಾಂತರ ಜನರ ಮನಸ್ಸು ಗೆದ್ದಿದ್ದಾರೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>