<p><strong>ವಯನಾಡ್</strong>: ಕೇರಳದ ವಯನಾಡ್ನಲ್ಲಿ ಬುಧವಾರ ಮುಂಜಾನೆ ಕಾಡಾನೆ ದಾಳಿಯಲ್ಲಿ 27 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಳೆದ ವರ್ಷ ಜುಲೈನಲ್ಲಿ ಭೂಕುಸಿತ ಸಂಭವಿಸಿ ಹಲವಾರು ಜೀವಗಳು ಬಲಿಯಾದ ಚೂರಲ್ಮಲ ಬಳಿಯ ಅಟ್ಟಮಲದಲ್ಲಿರುವ ಬುಡಕಟ್ಟು ಜನರು ವಾಸವಿರುವ ಪ್ರದೇಶದಲ್ಲಿ ಘಟನೆ ನಡೆದಿದೆ.</p>.ವಯನಾಡ್ | ಮಾನವ–ಪ್ರಾಣಿ ಸಂಘರ್ಷ: ಗ್ರಾಮಸ್ಥರಿಗೆ ಪ್ರಿಯಾಂಕಾ ಬೆಂಬಲ.<p>ಬುಡಕಟ್ಟು ಸಮುದಾಯದ ಸದಸ್ಯ ಬಾಲಕೃಷ್ಣನ್ ಮೃತಪಟ್ಟ ವ್ಯಕ್ತಿ. ಬುಧವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.</p><p>ಘಟನೆಯಿಂದ ಸ್ಥಳೀಯ ನಿವಾಸಿಗಳು ಆಕ್ರೋಶಿತರಾಗಿದ್ದು, ಕಾಡು ಪ್ರಾಣಿಗಳ ದಾಳಿಯಿಂದ ನಾಗರಿಕರನ್ನು ರಕ್ಷಿಸಲು ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.</p><p>ಮಾನವ–ಪ್ರಾಣಿ ಸಂಘರ್ಷ ತಡೆಯಲು ಕ್ರಮ ತೆಗೆದುಕೊಳ್ಳಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಅನುಮತಿಸಲಿಲ್ಲ.</p>.ವಯನಾಡ್ | ಕಾಫಿ ಕೊಯ್ಯಲು ಹೋಗಿದ್ದ ಆದಿವಾಸಿ ಮಹಿಳೆಯ ಕೊಂದ ಹುಲಿ: ಸೆರೆಗೆ ಆದೇಶ.<p>₹ 10 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಮತ್ತು ಅಂತ್ಯಕ್ರಿಯೆಗೆ ಆರ್ಥಿಕ ನೆರವು ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.</p><p>ಮೊದಲ ಹಂತವಾಗಿ, ಸಂತ್ರಸ್ತರ ಕುಟುಂಬಕ್ಕೆ ₹ 5 ಲಕ್ಷ ಅರಣ್ಯ ಇಲಾಖೆ ಬುಧವಾರವೇ ಹಸ್ತಾಂತರಿಸಲಿದೆ. ಅಂತ್ಯಕ್ರಿಯೆ ನಡೆಸಲು ಅಗತ್ಯವಿರುವ ಎಲ್ಲಾ ಸಹಾಯವನ್ನು ಬುಡಕಟ್ಟು ಇಲಾಖೆ ಒದಗಿಸಲಿದೆ ಎಂದು ವೈತಿರಿ ತಾಲ್ಲೂಕಿನ ತಹಶೀಲ್ದಾರ್ ತಿಳಿಸಿದ್ದಾರೆ.</p><p>ಉಳಿದ ₹ 5 ಲಕ್ಷ ಶೀಘ್ರದಲ್ಲೇ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p> .ವಯನಾಡ್ ಭೂಕುಸಿತ: ನಾಪತ್ತೆಯಾದವರನ್ನು ಮೃತರು ಎಂದು ಘೋಷಿಸಲು ಮುಂದಾದ ಕೇರಳ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್</strong>: ಕೇರಳದ ವಯನಾಡ್ನಲ್ಲಿ ಬುಧವಾರ ಮುಂಜಾನೆ ಕಾಡಾನೆ ದಾಳಿಯಲ್ಲಿ 27 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಳೆದ ವರ್ಷ ಜುಲೈನಲ್ಲಿ ಭೂಕುಸಿತ ಸಂಭವಿಸಿ ಹಲವಾರು ಜೀವಗಳು ಬಲಿಯಾದ ಚೂರಲ್ಮಲ ಬಳಿಯ ಅಟ್ಟಮಲದಲ್ಲಿರುವ ಬುಡಕಟ್ಟು ಜನರು ವಾಸವಿರುವ ಪ್ರದೇಶದಲ್ಲಿ ಘಟನೆ ನಡೆದಿದೆ.</p>.ವಯನಾಡ್ | ಮಾನವ–ಪ್ರಾಣಿ ಸಂಘರ್ಷ: ಗ್ರಾಮಸ್ಥರಿಗೆ ಪ್ರಿಯಾಂಕಾ ಬೆಂಬಲ.<p>ಬುಡಕಟ್ಟು ಸಮುದಾಯದ ಸದಸ್ಯ ಬಾಲಕೃಷ್ಣನ್ ಮೃತಪಟ್ಟ ವ್ಯಕ್ತಿ. ಬುಧವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.</p><p>ಘಟನೆಯಿಂದ ಸ್ಥಳೀಯ ನಿವಾಸಿಗಳು ಆಕ್ರೋಶಿತರಾಗಿದ್ದು, ಕಾಡು ಪ್ರಾಣಿಗಳ ದಾಳಿಯಿಂದ ನಾಗರಿಕರನ್ನು ರಕ್ಷಿಸಲು ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.</p><p>ಮಾನವ–ಪ್ರಾಣಿ ಸಂಘರ್ಷ ತಡೆಯಲು ಕ್ರಮ ತೆಗೆದುಕೊಳ್ಳಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಅನುಮತಿಸಲಿಲ್ಲ.</p>.ವಯನಾಡ್ | ಕಾಫಿ ಕೊಯ್ಯಲು ಹೋಗಿದ್ದ ಆದಿವಾಸಿ ಮಹಿಳೆಯ ಕೊಂದ ಹುಲಿ: ಸೆರೆಗೆ ಆದೇಶ.<p>₹ 10 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಮತ್ತು ಅಂತ್ಯಕ್ರಿಯೆಗೆ ಆರ್ಥಿಕ ನೆರವು ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.</p><p>ಮೊದಲ ಹಂತವಾಗಿ, ಸಂತ್ರಸ್ತರ ಕುಟುಂಬಕ್ಕೆ ₹ 5 ಲಕ್ಷ ಅರಣ್ಯ ಇಲಾಖೆ ಬುಧವಾರವೇ ಹಸ್ತಾಂತರಿಸಲಿದೆ. ಅಂತ್ಯಕ್ರಿಯೆ ನಡೆಸಲು ಅಗತ್ಯವಿರುವ ಎಲ್ಲಾ ಸಹಾಯವನ್ನು ಬುಡಕಟ್ಟು ಇಲಾಖೆ ಒದಗಿಸಲಿದೆ ಎಂದು ವೈತಿರಿ ತಾಲ್ಲೂಕಿನ ತಹಶೀಲ್ದಾರ್ ತಿಳಿಸಿದ್ದಾರೆ.</p><p>ಉಳಿದ ₹ 5 ಲಕ್ಷ ಶೀಘ್ರದಲ್ಲೇ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p> .ವಯನಾಡ್ ಭೂಕುಸಿತ: ನಾಪತ್ತೆಯಾದವರನ್ನು ಮೃತರು ಎಂದು ಘೋಷಿಸಲು ಮುಂದಾದ ಕೇರಳ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>