<p><strong>ವಾರಾಣಸಿ:</strong> ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ಎರಡು ಬಾರಿ ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.</p><p>ಬಂಧಿತ ಆರೋಪಿಯನ್ನು ಅದ್ವಾನ್ ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ (6E 185) ವಿಮಾನದ ಪ್ರಯಾಣಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಮಾನವು ಬೆಂಗಳೂರಿನಿಂದ ಟೇಕಾಫ್ ಆದ ಕೂಡಲೇ ಅದ್ವಾನ್ ಏಕಾಏಕಿ ವಿಮಾನದ ಬಾಗಿಲು ತೆರೆಯಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಆತನನ್ನು ತಡೆದು, ಕೂರಿಸಿದ್ದಾರೆ. ಬಳಿಕ ಮತ್ತೆ ವಿಮಾನವು ವಾರಾಣಸಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಮತ್ತೆ ಬಾಗಿಲು ತೆರೆಯಲು ಮುಂದಾಗಿದ್ದ. ಈ ವೇಳೆ ಸಿಬ್ಬಂದಿ ಆತನನ್ನು ಹಿಡಿದು ನಿಯಂತ್ರಿಸಿದ್ದಾರೆ.</p><p>ಬಂಧನದ ನಂತರ ಆರೋಪಿಯು ತಾನು ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುತ್ತಿದ್ದು, ಗಾಬರಿಗೊಂಡಿದ್ದೆ ಎಂದು ಪೊಲೀಸ್ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಇಂಡಿಗೋ ನೀಡಿದ ದೂರಿನ ಮೇರೆಗೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ಎರಡು ಬಾರಿ ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.</p><p>ಬಂಧಿತ ಆರೋಪಿಯನ್ನು ಅದ್ವಾನ್ ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ (6E 185) ವಿಮಾನದ ಪ್ರಯಾಣಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಮಾನವು ಬೆಂಗಳೂರಿನಿಂದ ಟೇಕಾಫ್ ಆದ ಕೂಡಲೇ ಅದ್ವಾನ್ ಏಕಾಏಕಿ ವಿಮಾನದ ಬಾಗಿಲು ತೆರೆಯಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಆತನನ್ನು ತಡೆದು, ಕೂರಿಸಿದ್ದಾರೆ. ಬಳಿಕ ಮತ್ತೆ ವಿಮಾನವು ವಾರಾಣಸಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಮತ್ತೆ ಬಾಗಿಲು ತೆರೆಯಲು ಮುಂದಾಗಿದ್ದ. ಈ ವೇಳೆ ಸಿಬ್ಬಂದಿ ಆತನನ್ನು ಹಿಡಿದು ನಿಯಂತ್ರಿಸಿದ್ದಾರೆ.</p><p>ಬಂಧನದ ನಂತರ ಆರೋಪಿಯು ತಾನು ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುತ್ತಿದ್ದು, ಗಾಬರಿಗೊಂಡಿದ್ದೆ ಎಂದು ಪೊಲೀಸ್ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಇಂಡಿಗೋ ನೀಡಿದ ದೂರಿನ ಮೇರೆಗೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>