<p><strong>ನವದೆಹಲಿ</strong>: ಸಂಸತ್ ಭವನದ ಆವರಣ ಗೋಡೆಯನ್ನು ಹತ್ತಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. </p>.<p>ಮುಂಜಾನೆ 5:50ಕ್ಕೆ ಈ ಘಟನೆ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಉತ್ತರಪ್ರದೇಶದ ರಾಮ್ಕುಮಾರ್ ಬಿಂಡ್ (20) ಎಂದು ಗುರುತಿಸಲಾಗಿದ್ದು, ಗುಜರಾತ್ನ ಸೂರತ್ನಲ್ಲಿರುವ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿದ್ದಾರೆ. </p>.<p class="title">‘ಆರೋಪಿಯು ಮಾನಸಿಕ ಅಸ್ವಸ್ಥರಂತೆ ಕಂಡುಬರುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ದೆಹಲಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p class="title">ಆವರಣ ಗೋಡೆಯ ಬದಿಯಲ್ಲಿರುವ ಮರವನ್ನು ಹತ್ತುವ ಮೂಲಕ ರಾಮ್ ಕುಮಾರ್ ಸಂಸತ್ ಭವನವನ್ನು ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕೃತ್ಯದ ಹಿಂದಿನ ಕಾರಣವನ್ನು ತಿಳಿಯುವ ಸಲುವಾಗಿ ಗುಪ್ತಚರ ವಿಭಾಗ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ರಾಮ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ ಭವನದ ಆವರಣ ಗೋಡೆಯನ್ನು ಹತ್ತಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. </p>.<p>ಮುಂಜಾನೆ 5:50ಕ್ಕೆ ಈ ಘಟನೆ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಉತ್ತರಪ್ರದೇಶದ ರಾಮ್ಕುಮಾರ್ ಬಿಂಡ್ (20) ಎಂದು ಗುರುತಿಸಲಾಗಿದ್ದು, ಗುಜರಾತ್ನ ಸೂರತ್ನಲ್ಲಿರುವ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿದ್ದಾರೆ. </p>.<p class="title">‘ಆರೋಪಿಯು ಮಾನಸಿಕ ಅಸ್ವಸ್ಥರಂತೆ ಕಂಡುಬರುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ದೆಹಲಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p class="title">ಆವರಣ ಗೋಡೆಯ ಬದಿಯಲ್ಲಿರುವ ಮರವನ್ನು ಹತ್ತುವ ಮೂಲಕ ರಾಮ್ ಕುಮಾರ್ ಸಂಸತ್ ಭವನವನ್ನು ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಕೃತ್ಯದ ಹಿಂದಿನ ಕಾರಣವನ್ನು ತಿಳಿಯುವ ಸಲುವಾಗಿ ಗುಪ್ತಚರ ವಿಭಾಗ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ರಾಮ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>