<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರವು ಅಮೆರಿಕದೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದದಿಂದ ಭಾರತಕ್ಕೆ ಕೇಡಾಗಲಿದೆ’ ಎಂದು ಆರೋಪಿಸಿರುವ ಯುವ ಕಾಂಗ್ರೆಸ್, ಮಾರ್ಚ್ 16ರಂದು ದೆಹಲಿಯ ಜಂತರ್ ಮಂತರ್ನಲ್ಲಿ ‘ಸಂಸದರ ಘೇರಾವ್’ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಘೋಷಿಸಿದೆ.</p>.<p>‘ದೇಶದಾದ್ಯಂತ ಇರುವ ಕಾಂಗ್ರೆಸ್ನ ಯುವ ಘಟಕದ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಯುವ ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅಕ್ಷಯ್ ಲಾಖ್ರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಈ ವ್ಯಾಪಾರ ಒಪ್ಪಂದದಿಂದಾಗಿ ದೇಶದ ರೈತರು, ಜವಳಿ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ. ಜೊತೆಗೆ, ದೇಶದ ದತ್ತಾಂಶ ಭದ್ರತೆಗೆ ಕೂಡ ಈ ಒಪ್ಪಂದವು ಮಾರಕವಾಗಲಿದೆ. ಈ ಎಲ್ಲ ಅಂಶಗಳನ್ನು ಪ್ರತಿಭಟನೆ ಮೂಲಕ ಜನರಿಗೆ ತಿಳಿಸುವುದು ನಮ್ಮ ಉದ್ದೇಶ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರವು ಅಮೆರಿಕದೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದದಿಂದ ಭಾರತಕ್ಕೆ ಕೇಡಾಗಲಿದೆ’ ಎಂದು ಆರೋಪಿಸಿರುವ ಯುವ ಕಾಂಗ್ರೆಸ್, ಮಾರ್ಚ್ 16ರಂದು ದೆಹಲಿಯ ಜಂತರ್ ಮಂತರ್ನಲ್ಲಿ ‘ಸಂಸದರ ಘೇರಾವ್’ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಘೋಷಿಸಿದೆ.</p>.<p>‘ದೇಶದಾದ್ಯಂತ ಇರುವ ಕಾಂಗ್ರೆಸ್ನ ಯುವ ಘಟಕದ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಯುವ ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅಕ್ಷಯ್ ಲಾಖ್ರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಈ ವ್ಯಾಪಾರ ಒಪ್ಪಂದದಿಂದಾಗಿ ದೇಶದ ರೈತರು, ಜವಳಿ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ. ಜೊತೆಗೆ, ದೇಶದ ದತ್ತಾಂಶ ಭದ್ರತೆಗೆ ಕೂಡ ಈ ಒಪ್ಪಂದವು ಮಾರಕವಾಗಲಿದೆ. ಈ ಎಲ್ಲ ಅಂಶಗಳನ್ನು ಪ್ರತಿಭಟನೆ ಮೂಲಕ ಜನರಿಗೆ ತಿಳಿಸುವುದು ನಮ್ಮ ಉದ್ದೇಶ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>