ಎ.ಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ಅತ್ಯಂತ ಆಕ್ಷೇಪಾರ್ಹ ಹಾಗೂ ಖಂಡನೀಯವಾಗಿದೆ..
–ಮಾಯಾವತಿ, ಬಿಎಸ್ಪಿ ಮುಖ್ಯಸ್ಥೆ
ಎ.ಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಯುವ ಕಾರ್ಯಕರ್ತರನ್ನು ಕಳುಹಿಸುವ ಮೂಲಕ ದೇಶದ ವಿರುದ್ಧ ಅತ್ಯಂತ ದೊಡ್ಡ ಪಾಪವೆಸಗಿದೆ. ದೇಶಕ್ಕೆ ಅಪಮಾನವೆಸಗಲು ಕಾಂಗ್ರೆಸ್ ಪಕ್ಷವು ಯುವಕರನ್ನು ಬಳಸಿಕೊಳ್ಳುತ್ತಿದ್ದು ಇದಕ್ಕಿಂತ ನಾಚಿಕೆಗೇಡಿನ ವಿಚಾರ ಇನ್ನೊಂದಿಲ್ಲ.
–ಕಿರಣ್ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ
ಅತ್ಯಂತ ಒಳ್ಳೆಯ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆಯಾಗಿ ಅಡ್ಡಿಪಡಿಸಿದರು. ನನಗೆ ಏನು ಹೇಳಬೇಕೆಂದು ತಿಳಿಯುತ್ತಿಲ್ಲ ನಿಜಕ್ಕೂ ದುಃಖದ ವಿಚಾರ. ಕಾಂಗ್ರೆಸ್ ಪಕ್ಷವು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದು ಇದನ್ನು ಬಲವಾಗಿ ಖಂಡಿಸುತ್ತೇನೆ.
–ಎನ್.ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಮುಖ್ಯಮಂತ್ರಿ
ಬಡ ಕುಟುಂಬದ ವ್ಯಕ್ತಿಯೊಬ್ಬರು ದೇಶದ ಪ್ರಧಾನಿಯಾಗಿರುವುದನ್ನು ಸಹಿಸಲು ಸಾಧ್ಯವಾಗದೇ ಕಾಂಗ್ರೆಸ್ ಪಕ್ಷವು ಕ್ರಿಮಿನಲ್ ಸಂಚು ರೂಪಿಸಿ ಪ್ರತಿಭಟನೆ ನಡೆಸಿದೆ