<p><strong>ತಿರುವನಂತಪುರ:</strong> ದಲಿತ ಸಮುದಾಯಕ್ಕೆ ಸೇರಿದ ಶಾಸಕಿ ಧರಣಿ ನಡೆಸಿದ ಸ್ಥಳವನ್ನು ಶುದ್ಧೀಕರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಮುಂದಾಗಬೇಕು ಎಂದು ಆಗ್ರಹಿಸಿ ತ್ರಿಶ್ಯೂರ್ ಜಿಲ್ಲೆಯ ಚೇರ್ಪು ಗ್ರಾಮದ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ಸಿಪಿಐನ ಸ್ಥಳೀಯ ಶಾಸಕಿ ಗೀತಾ ಗೋಪಿ ಅವರು ಶನಿವಾರ ಧರಣಿ ನಡೆಸಿದ್ದರು.</p>.<p>ಧರಣಿ ಅಂತ್ಯಗೊಂಡ ಬಳಿಕ ಸ್ಥಳಕ್ಕೆ ಬಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಮಿಶ್ರಿತ ನೀರಿನಿಂದ ನೆಲವನ್ನು ಸಾರಿಸಿ</p>.<p>ಸಾಂಕೇತಿಕವಾಗಿ ಶುದ್ಧೀಕರಣ ನಡೆಸಿದ್ದರು. ’ಜನರನ್ನು ಮರುಳು ಮಾಡಲು ಶಾಸಕಿ ನಾಟಕವಾಡಿದ್ದಾರೆ’ ಎಂದೂ ಆರೋಪಿಸಿದ್ದರು. ಈ ಸಂಬಂಧ ಶಾಸಕಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಖಂಡಿಸಿರುವ ಕೇರಳದ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಎ.ಕೆ.ಬಾಲನ್ ಮತ್ತು ಆರೋಗ್ಯ ಸಚಿವೆ ಶೈಲಜಾ ಟೀಚರ್, ಈ ಕುರಿತು ತನಿಖೆಗೆ ಆಗ್ರಹಿಸಿದ್ದಾರೆ. ಹದಗೆಟ್ಟಿರುವ ರಸ್ತೆಗಳ ಚಿತ್ರವನ್ನು ಧರಣಿ ನಡೆಸಿದ ಬಳಿಕ ಶಾಸಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ದಲಿತ ಸಮುದಾಯಕ್ಕೆ ಸೇರಿದ ಶಾಸಕಿ ಧರಣಿ ನಡೆಸಿದ ಸ್ಥಳವನ್ನು ಶುದ್ಧೀಕರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಮುಂದಾಗಬೇಕು ಎಂದು ಆಗ್ರಹಿಸಿ ತ್ರಿಶ್ಯೂರ್ ಜಿಲ್ಲೆಯ ಚೇರ್ಪು ಗ್ರಾಮದ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ಸಿಪಿಐನ ಸ್ಥಳೀಯ ಶಾಸಕಿ ಗೀತಾ ಗೋಪಿ ಅವರು ಶನಿವಾರ ಧರಣಿ ನಡೆಸಿದ್ದರು.</p>.<p>ಧರಣಿ ಅಂತ್ಯಗೊಂಡ ಬಳಿಕ ಸ್ಥಳಕ್ಕೆ ಬಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಮಿಶ್ರಿತ ನೀರಿನಿಂದ ನೆಲವನ್ನು ಸಾರಿಸಿ</p>.<p>ಸಾಂಕೇತಿಕವಾಗಿ ಶುದ್ಧೀಕರಣ ನಡೆಸಿದ್ದರು. ’ಜನರನ್ನು ಮರುಳು ಮಾಡಲು ಶಾಸಕಿ ನಾಟಕವಾಡಿದ್ದಾರೆ’ ಎಂದೂ ಆರೋಪಿಸಿದ್ದರು. ಈ ಸಂಬಂಧ ಶಾಸಕಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಖಂಡಿಸಿರುವ ಕೇರಳದ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಎ.ಕೆ.ಬಾಲನ್ ಮತ್ತು ಆರೋಗ್ಯ ಸಚಿವೆ ಶೈಲಜಾ ಟೀಚರ್, ಈ ಕುರಿತು ತನಿಖೆಗೆ ಆಗ್ರಹಿಸಿದ್ದಾರೆ. ಹದಗೆಟ್ಟಿರುವ ರಸ್ತೆಗಳ ಚಿತ್ರವನ್ನು ಧರಣಿ ನಡೆಸಿದ ಬಳಿಕ ಶಾಸಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>