<p><strong>ಜೌವಣಪುರ; ಉತ್ತರ ಪ್ರದೇಶ:</strong> ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ.</p><p>ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು ಕಂಡು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ವಿಫಲ ಆಗುತ್ತಿದ್ದಕ್ಕೆ ಕಡೆಗೆ ಅಂಗವಿಕಲ ಕೋಟಾದಡಿ ಆದರೂ ಸೀಟು ಗಿಟ್ಟಿಸಿಕೊಳ್ಳಬೇಕೆಂದು ತನ್ನ ಜೀವಕ್ಕೇ ಸಂಚು ತಂದುಕೊಂಡಿದ್ದಾನೆ.</p><p>ಉತ್ತರ ಪ್ರದೇಶದ ಲಖನೌದಿಂದ 228 ಕಿ.ಮೀ ದೂರದಲ್ಲಿರುವ ಜೌವಣಪುರ ನಗರದ ಸುರಾಜ್ ಭಾಸ್ಕರ್ ಎಂಬ 21 ವರ್ಷದ ಯುವಕ ಅಂಗವಿಕಲ ಕೋಟಾದಡಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಪಡೆಯುವುದಕ್ಕಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡಿದ್ದಾನೆ.</p><p><strong>ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?</strong></p><p>ಸುರಾಜ್ ಭಾಸ್ಕರ್ ವೈದ್ಯ ಆಗಬೇಕು ಎಂದು ಕನಸು ಕಂಡಿದ್ದ. ಇದಕ್ಕಾಗಿ ತಯಾರಿ ಕೂಡ ನಡೆಸುತ್ತಿದ್ದ. ಎರಡು ಸಾರಿ ನೀಟ್ ಪರೀಕ್ಷೆ ಬರೆದರೂ ಆತನಿಗೆ ಸೀಟು ಸಿಕ್ಕಿರಲಿಲ್ಲ. ಈ ನಡುವೆಯೇ ಆತ ಡೈರಿಯಲ್ಲಿ ‘ನಾನು ಡಾಕ್ಟರ್ ಆಗೇ ಆಗುತ್ತೇನೆ’ ಎಂದು ಬರೆದು ಇಡುತ್ತಿದ್ದನಂತೆ.</p><p>ಎರಡು ಸಾರಿಯೂ ನೀಟ್ನಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಹೇಗಾದರೂ ಮಾಡಿ ಡಾಕ್ಟರ್ ಆಗಬೇಕು ಎಂದು ನಿರ್ಧರಿಸಿ, ತನ್ನ ಎಡಗಾಲನ್ನು ಕತ್ತರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದ.</p><p>ಅಂದುಕೊಂಡಂತೆ ಸುರಾಜ್ ತನ್ನ ಕಾಲನ್ನು ಕತ್ತರಿಸಿಕೊಂಡು ಆಸ್ಪತ್ರೆಗೆ ಬಂದು ದಾಖಲಾಗಿದ್ದ. ಪೊಲೀಸರು ಬಂದು ಕೇಳಿದಾಗ ಏರಿಯಾದಲ್ಲಿ ಅಪರಚಿತರ ಗುಂಪು ಗಲಾಟೆ ವೇಳೆ ನನ್ನ ಕಾಲನ್ನು ಕತ್ತರಿಸಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಕಥೆ ಕಟ್ಟಿದ್ದ.</p><p>ತನಿಖೆಗೆ ಇಳಿದಾಗ ಪೊಲೀಸರಿಗೆ ಅಚ್ಚರಿ ಕಾದಿತ್ತು. ಸುರಾಜ್ ಸುಳ್ಳು ಹೇಳಿದ್ದಾನೆ ಎಂದು ಕಂಡುಕೊಂಡ ಪೊಲೀಸರು ಆತನ ಡೈರಿ ಹಾಗೂ ಆತನ ಸಹೋದರನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವೈದ್ಯಕೀಯ ಸೀಟು ಪಡೆಯಲೇ ಈತ ನಾಟಕ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ.</p><p>ಸದ್ಯ ತನ್ನ ಎಡಗಾಲನ್ನು ಕಳೆದುಕೊಂಡು ಜೌವಣಪುರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುರಾಜ್, ಸಾವು–ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.</p><p>‘ಸುರಾಜ್ ಪ್ರಕರಣ ನಮ್ಮೆಲ್ಲರನ್ನು ಬೆರುಗುಗೊಳಿಸಿದೆ. ಆತ ವೈದ್ಯಕೀಯ ಸೀಟು ಪಡೆಯಲು ಇಷ್ಟೆಲ್ಲಾ ಮಾಡಿರುವುದು ಗೊತ್ತಾಗಿದೆ. ಈತನ ವಿರುದ್ಧ ಯಾವ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಬೇಕು ಎಂಬುದನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಜೌವಣಪುರ ಎಸ್ಪಿ ಆಯುಷ್ ಶ್ರೀವಾಸ್ತವ್ ತಿಳಿಸಿದ್ದಾರೆ.</p>.ನೀಟ್–ಪಿಜಿ ಪರೀಕ್ಷೆ ಕೀ-ಉತ್ತರ ಪ್ರಕಟಿಸುವ ನೀತಿ ಬಹಿರಂಗಪಡಿಸಿ: ಸುಪ್ರೀಂ ಕೋರ್ಟ್.ನೀಟ್ ಕಟ್ ಆಫ್ ಅಂಕ ಇಳಿಕೆಗೆ ಎಐಡಿಎಸ್ಒ ಖಂಡನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೌವಣಪುರ; ಉತ್ತರ ಪ್ರದೇಶ:</strong> ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ.</p><p>ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು ಕಂಡು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ವಿಫಲ ಆಗುತ್ತಿದ್ದಕ್ಕೆ ಕಡೆಗೆ ಅಂಗವಿಕಲ ಕೋಟಾದಡಿ ಆದರೂ ಸೀಟು ಗಿಟ್ಟಿಸಿಕೊಳ್ಳಬೇಕೆಂದು ತನ್ನ ಜೀವಕ್ಕೇ ಸಂಚು ತಂದುಕೊಂಡಿದ್ದಾನೆ.</p><p>ಉತ್ತರ ಪ್ರದೇಶದ ಲಖನೌದಿಂದ 228 ಕಿ.ಮೀ ದೂರದಲ್ಲಿರುವ ಜೌವಣಪುರ ನಗರದ ಸುರಾಜ್ ಭಾಸ್ಕರ್ ಎಂಬ 21 ವರ್ಷದ ಯುವಕ ಅಂಗವಿಕಲ ಕೋಟಾದಡಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಪಡೆಯುವುದಕ್ಕಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡಿದ್ದಾನೆ.</p><p><strong>ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?</strong></p><p>ಸುರಾಜ್ ಭಾಸ್ಕರ್ ವೈದ್ಯ ಆಗಬೇಕು ಎಂದು ಕನಸು ಕಂಡಿದ್ದ. ಇದಕ್ಕಾಗಿ ತಯಾರಿ ಕೂಡ ನಡೆಸುತ್ತಿದ್ದ. ಎರಡು ಸಾರಿ ನೀಟ್ ಪರೀಕ್ಷೆ ಬರೆದರೂ ಆತನಿಗೆ ಸೀಟು ಸಿಕ್ಕಿರಲಿಲ್ಲ. ಈ ನಡುವೆಯೇ ಆತ ಡೈರಿಯಲ್ಲಿ ‘ನಾನು ಡಾಕ್ಟರ್ ಆಗೇ ಆಗುತ್ತೇನೆ’ ಎಂದು ಬರೆದು ಇಡುತ್ತಿದ್ದನಂತೆ.</p><p>ಎರಡು ಸಾರಿಯೂ ನೀಟ್ನಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಹೇಗಾದರೂ ಮಾಡಿ ಡಾಕ್ಟರ್ ಆಗಬೇಕು ಎಂದು ನಿರ್ಧರಿಸಿ, ತನ್ನ ಎಡಗಾಲನ್ನು ಕತ್ತರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದ.</p><p>ಅಂದುಕೊಂಡಂತೆ ಸುರಾಜ್ ತನ್ನ ಕಾಲನ್ನು ಕತ್ತರಿಸಿಕೊಂಡು ಆಸ್ಪತ್ರೆಗೆ ಬಂದು ದಾಖಲಾಗಿದ್ದ. ಪೊಲೀಸರು ಬಂದು ಕೇಳಿದಾಗ ಏರಿಯಾದಲ್ಲಿ ಅಪರಚಿತರ ಗುಂಪು ಗಲಾಟೆ ವೇಳೆ ನನ್ನ ಕಾಲನ್ನು ಕತ್ತರಿಸಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಕಥೆ ಕಟ್ಟಿದ್ದ.</p><p>ತನಿಖೆಗೆ ಇಳಿದಾಗ ಪೊಲೀಸರಿಗೆ ಅಚ್ಚರಿ ಕಾದಿತ್ತು. ಸುರಾಜ್ ಸುಳ್ಳು ಹೇಳಿದ್ದಾನೆ ಎಂದು ಕಂಡುಕೊಂಡ ಪೊಲೀಸರು ಆತನ ಡೈರಿ ಹಾಗೂ ಆತನ ಸಹೋದರನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವೈದ್ಯಕೀಯ ಸೀಟು ಪಡೆಯಲೇ ಈತ ನಾಟಕ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ.</p><p>ಸದ್ಯ ತನ್ನ ಎಡಗಾಲನ್ನು ಕಳೆದುಕೊಂಡು ಜೌವಣಪುರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುರಾಜ್, ಸಾವು–ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.</p><p>‘ಸುರಾಜ್ ಪ್ರಕರಣ ನಮ್ಮೆಲ್ಲರನ್ನು ಬೆರುಗುಗೊಳಿಸಿದೆ. ಆತ ವೈದ್ಯಕೀಯ ಸೀಟು ಪಡೆಯಲು ಇಷ್ಟೆಲ್ಲಾ ಮಾಡಿರುವುದು ಗೊತ್ತಾಗಿದೆ. ಈತನ ವಿರುದ್ಧ ಯಾವ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಬೇಕು ಎಂಬುದನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಜೌವಣಪುರ ಎಸ್ಪಿ ಆಯುಷ್ ಶ್ರೀವಾಸ್ತವ್ ತಿಳಿಸಿದ್ದಾರೆ.</p>.ನೀಟ್–ಪಿಜಿ ಪರೀಕ್ಷೆ ಕೀ-ಉತ್ತರ ಪ್ರಕಟಿಸುವ ನೀತಿ ಬಹಿರಂಗಪಡಿಸಿ: ಸುಪ್ರೀಂ ಕೋರ್ಟ್.ನೀಟ್ ಕಟ್ ಆಫ್ ಅಂಕ ಇಳಿಕೆಗೆ ಎಐಡಿಎಸ್ಒ ಖಂಡನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>