<p><strong>ಲಖನೌ</strong>: ‘ದಪ್ಪಗಿದ್ದೀಯ’ ಎಂದು ಗೇಲಿ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಇಬ್ಬರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿದೆ.</p>.<p>ಆರೋಪಿ ಅನಿಲ್ ಚೌಹಾಣ್ನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ಕೆಲ ದಿನಗಳ ಹಿಂದೆ ದೇವಾಲಯವೊಂದರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅನಿಲ್ ಕುಮಾರ್ ಮತ್ತು ಶುಭಮ್ ಯಾದವ್ ಅವರು ಅನಿಲ್ ಚೌಹಾಣ್ ಅವರಿಗೆ ‘ನೀನು ದಪ್ಪಗಿದ್ದೀಯ’ ಎಂದು ಹೇಳಿದ್ದರು. ಇದರಿಂದ ಚೌಹಾಣ್ ಕೋಪಗೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮೋಟಾರು ಬೈಕಿನಲ್ಲಿದ್ದ ಇಬ್ಬರನ್ನು ಆರೋಪಿಯು ಕಾರಿನಲ್ಲಿ ಬೆನ್ನಟ್ಟಿದ್ದು, ಸುಮಾರು 20 ಕಿ.ಮೀ. ಕ್ರಮಿಸಿದ ಬಳಿಕ ಅವರನ್ನು ತಡೆದು ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ಅವರು ನನ್ನ ಬಗ್ಗೆ ಸಾರ್ವಜನಿಕವಾಗಿ ಗೇಲಿ ಮಾಡಿದ್ದರು. ಅವರ ಮಾತುಗಳಿಂದ ನನಗೆ ನೋವಾಗಿತ್ತು. ಬಳಿಕ ಅವರಿಗೆ ಪಾಠ ಕಲಿಸಲು ನಿರ್ಧರಿಸಿದ್ದೆ’ ಎಂದು ಚೌಹಾಣ್ ಪೊಲೀಸರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ದಪ್ಪಗಿದ್ದೀಯ’ ಎಂದು ಗೇಲಿ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಇಬ್ಬರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿದೆ.</p>.<p>ಆರೋಪಿ ಅನಿಲ್ ಚೌಹಾಣ್ನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ಕೆಲ ದಿನಗಳ ಹಿಂದೆ ದೇವಾಲಯವೊಂದರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅನಿಲ್ ಕುಮಾರ್ ಮತ್ತು ಶುಭಮ್ ಯಾದವ್ ಅವರು ಅನಿಲ್ ಚೌಹಾಣ್ ಅವರಿಗೆ ‘ನೀನು ದಪ್ಪಗಿದ್ದೀಯ’ ಎಂದು ಹೇಳಿದ್ದರು. ಇದರಿಂದ ಚೌಹಾಣ್ ಕೋಪಗೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮೋಟಾರು ಬೈಕಿನಲ್ಲಿದ್ದ ಇಬ್ಬರನ್ನು ಆರೋಪಿಯು ಕಾರಿನಲ್ಲಿ ಬೆನ್ನಟ್ಟಿದ್ದು, ಸುಮಾರು 20 ಕಿ.ಮೀ. ಕ್ರಮಿಸಿದ ಬಳಿಕ ಅವರನ್ನು ತಡೆದು ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ಅವರು ನನ್ನ ಬಗ್ಗೆ ಸಾರ್ವಜನಿಕವಾಗಿ ಗೇಲಿ ಮಾಡಿದ್ದರು. ಅವರ ಮಾತುಗಳಿಂದ ನನಗೆ ನೋವಾಗಿತ್ತು. ಬಳಿಕ ಅವರಿಗೆ ಪಾಠ ಕಲಿಸಲು ನಿರ್ಧರಿಸಿದ್ದೆ’ ಎಂದು ಚೌಹಾಣ್ ಪೊಲೀಸರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>