<p><strong>ತ್ರಿಶೂರ್ (ಕೇರಳ):</strong> ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಎಳನಾಡು ನಿವಾಸಿ ಅನೀಶ್ ಅಬ್ರಹಾಂ ಅವರನ್ನು ಕಸ್ಟಡಿಗೆ ಪಡೆದು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶನಿವಾರ ರಾತ್ರಿ 9.30ರ ಸುಮಾರಿಗೆ ಪ್ರಿಯಾಂಕಾ ಅವರು ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಳಿಕ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಂಸದರ ಬೆಂಗಾವಲು ವಾಹನದ ಹಾರ್ನ್ ಶಬ್ದದಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ಅಡ್ಡ ನಿಲ್ಲಿಸಿದ್ದಾನೆ. ಮನ್ನುತ್ತಿ ಸಬ್ ಇನ್ಸ್ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆಗೆಯುವಂತೆ ಸೂಚಿಸಿದಾಗ ಆತನ ವಾಗ್ವಾದಕ್ಕೆ ಮುಂದಾಗಿದ್ದಾನೆ ಎಂದು ವರದಿಯಾಗಿದೆ.</p>.<p>ಉದ್ದೇಶಪೂರ್ವಕವಾಗಿ ಬೆಂಗಾವಲು ವಾಹನ ತಡೆದು, ಜೀವಕ್ಕೆ ಅಪಾಯವನ್ನುಂಟು ಮಾಡುವುದು ಮತ್ತು ಪೊಲೀಸ್ ನಿರ್ದೇಶನಗಳನ್ನು ಪಾಲಿಸದಿರುವ ಆರೋಪದ ಮೇಲೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .3 ದಿನಗಳ ವಯನಾಡ್ ಪ್ರವಾಸ ಆರಂಭಿಸಿದ ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್ (ಕೇರಳ):</strong> ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಎಳನಾಡು ನಿವಾಸಿ ಅನೀಶ್ ಅಬ್ರಹಾಂ ಅವರನ್ನು ಕಸ್ಟಡಿಗೆ ಪಡೆದು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶನಿವಾರ ರಾತ್ರಿ 9.30ರ ಸುಮಾರಿಗೆ ಪ್ರಿಯಾಂಕಾ ಅವರು ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಳಿಕ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಂಸದರ ಬೆಂಗಾವಲು ವಾಹನದ ಹಾರ್ನ್ ಶಬ್ದದಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ಅಡ್ಡ ನಿಲ್ಲಿಸಿದ್ದಾನೆ. ಮನ್ನುತ್ತಿ ಸಬ್ ಇನ್ಸ್ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆಗೆಯುವಂತೆ ಸೂಚಿಸಿದಾಗ ಆತನ ವಾಗ್ವಾದಕ್ಕೆ ಮುಂದಾಗಿದ್ದಾನೆ ಎಂದು ವರದಿಯಾಗಿದೆ.</p>.<p>ಉದ್ದೇಶಪೂರ್ವಕವಾಗಿ ಬೆಂಗಾವಲು ವಾಹನ ತಡೆದು, ಜೀವಕ್ಕೆ ಅಪಾಯವನ್ನುಂಟು ಮಾಡುವುದು ಮತ್ತು ಪೊಲೀಸ್ ನಿರ್ದೇಶನಗಳನ್ನು ಪಾಲಿಸದಿರುವ ಆರೋಪದ ಮೇಲೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .3 ದಿನಗಳ ವಯನಾಡ್ ಪ್ರವಾಸ ಆರಂಭಿಸಿದ ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>