<p><strong>ಅಮರಾವತಿ (ಆಂಧ್ರಪ್ರದೇಶ):</strong> ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಶನಿವಾರ ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.</p> <p>ಕಡಪ ಜಿಲ್ಲೆಯ ಇಡುಪುಲಪಾಯದಲ್ಲಿ ಪಕ್ಷದ ವರಿಷ್ಠ ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿ ಹಾಗೂ ಹಿರಿಯ ನಾಯಕರ ಸಮ್ಮುಖದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಸಮಾಧಿಯ ಸಮೀಪ ಆಡಳಿತಾರೂಢ ವೈಎಸ್ಆರ್ಸಿಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತು.</p> <p>ಬಾಪಟ್ಲ ಸಂಸದ ನಂದಿಗಂ ಸುರೇಶ್ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಓದಿದರೆ, ಕಂದಾಯ ಸಚಿವ ಡಿ. ಪ್ರಸಾದ ರಾವ್ ಅವರು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ವಾಚಿಸಿದರು.</p>. <p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಸಾದ ರಾವ್, '2019 ರಲ್ಲಿ ಜಗನ್ ಅಧಿಕಾರಕ್ಕೆ ಬಂದ ನಂತರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಬಡ ಮತ್ತು ಅಲ್ಪಸಂಖ್ಯಾತ ವರ್ಗದ ಜನರಿಗೆ ರಾಜಕೀಯ ಅಧಿಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಲಾಗಿದೆ' ಎಂದು ಹೇಳಿದರು. </p> <p>ಶೇ 50 ರಷ್ಟು ಸ್ಥಾನಗಳನ್ನು ಎಸ್ಸಿ, ಎಸ್ಟಿ, ಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಂಚಿಕೆ ಮಾಡಲಾಗಿದೆ.</p> <p>175 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಪೈಕಿ 29 ಎಸ್ಸಿ ಸಮುದಾಯದವರು, 7 ಎಸ್ಟಿ, 48 ಬಿಸಿ, 91 ಒಸಿ, ಜತೆಗೆ 19 ಮಹಿಳಾ ಅಭ್ಯರ್ಥಿಗಳಿದ್ದಾರೆ. ಎಸ್ಸಿ, ಎಸ್ಟಿ, ಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ 84 ಎಂಎಲ್ಎ ಮತ್ತು 16 ಎಂಪಿ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.</p> <p>ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಸ್ಸಿ ಸಮುದಾಯದ ನಾಲ್ವರು, ಒಬ್ಬರು ಎಸ್ಟಿ, 11 ಬಿಸಿ ಮತ್ತು 9 ಒಸಿ ಹಾಗೂ ಐವರು ಮಹಿಳೆಯರು ಇದ್ದಾರೆ.</p> <p>ಬಿ. ಝಾನ್ಸಿ ಲಕ್ಷ್ಮಿ ಅವರು ವಿಶಾಖಪಟ್ಟಣಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಜಿ. ಉಮಾ ಬಾಲಾ ನರಸಾಪುರಂನ ಅಭ್ಯರ್ಥಿಯಾಗಿದ್ದಾರೆ.</p> <p>ವಿ. ವಿಜಯಸಾಯಿ ರೆಡ್ಡಿ ನೆಲ್ಲೂರಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ನಿರೀಕ್ಷೆಯಂತೆ ಹಾಲಿ ಸಂಸದ ವೈ.ಎಸ್.ಅವಿನಾಶ್ ರೆಡ್ಡಿ ಕಡಪ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p> <p>ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದ ಪ್ರಮುಖ ಕ್ಷೇತ್ರ ಪುಲಿವೆಂದುಲ ವಿಧಾನಸಭಾ ಕ್ಷೇತ್ರ, ಕೃಷ್ಣ ರಾಘವ ಜಯೇಂದ್ರ ಭಾರತ್ ಕುಪ್ಪಂ ಕ್ಷೇತ್ರ ಮತ್ತು ಎಂ. ಲಾವಣ್ಯ ಮಂಗಳಗಿರಿಯಿಂದ ಸ್ಪರ್ಧಿಸಲಿದ್ದಾರೆ.</p> <p>ಮುಖ್ಯಮಂತ್ರಿಗಳ ಕಚೇರಿ (CMO)ಯ ಅಧಿಕೃತ ಹೇಳಿಕೆಯ ಪ್ರಕಾರ 77 ಪ್ರತಿಶತ ಅಥವಾ 153 ಸ್ಪರ್ಧಿಗಳು , ಪದವೀಧರರಾಗಿದ್ದಾರೆ. 58 ಅಭ್ಯರ್ಥಿಗಳು ಸ್ನಾತಕೋತ್ತರ ಪದವೀಧರರು ಮತ್ತು 6 ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ, 17 ವೈದ್ಯರು, 15 ವಕೀಲರು, 34 ಇಂಜಿನಿಯರ್ಗಳು, ಐವರು ಶಿಕ್ಷಕರು, ಇಬ್ಬರು ಮಾಜಿ ಅಧಿಕಾರಿಗಳು, ಒಬ್ಬ ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಇದ್ದಾರೆ.</p>.ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ (ಆಂಧ್ರಪ್ರದೇಶ):</strong> ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಶನಿವಾರ ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.</p> <p>ಕಡಪ ಜಿಲ್ಲೆಯ ಇಡುಪುಲಪಾಯದಲ್ಲಿ ಪಕ್ಷದ ವರಿಷ್ಠ ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿ ಹಾಗೂ ಹಿರಿಯ ನಾಯಕರ ಸಮ್ಮುಖದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಸಮಾಧಿಯ ಸಮೀಪ ಆಡಳಿತಾರೂಢ ವೈಎಸ್ಆರ್ಸಿಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತು.</p> <p>ಬಾಪಟ್ಲ ಸಂಸದ ನಂದಿಗಂ ಸುರೇಶ್ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಓದಿದರೆ, ಕಂದಾಯ ಸಚಿವ ಡಿ. ಪ್ರಸಾದ ರಾವ್ ಅವರು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ವಾಚಿಸಿದರು.</p>. <p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಸಾದ ರಾವ್, '2019 ರಲ್ಲಿ ಜಗನ್ ಅಧಿಕಾರಕ್ಕೆ ಬಂದ ನಂತರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಬಡ ಮತ್ತು ಅಲ್ಪಸಂಖ್ಯಾತ ವರ್ಗದ ಜನರಿಗೆ ರಾಜಕೀಯ ಅಧಿಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಲಾಗಿದೆ' ಎಂದು ಹೇಳಿದರು. </p> <p>ಶೇ 50 ರಷ್ಟು ಸ್ಥಾನಗಳನ್ನು ಎಸ್ಸಿ, ಎಸ್ಟಿ, ಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಂಚಿಕೆ ಮಾಡಲಾಗಿದೆ.</p> <p>175 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಪೈಕಿ 29 ಎಸ್ಸಿ ಸಮುದಾಯದವರು, 7 ಎಸ್ಟಿ, 48 ಬಿಸಿ, 91 ಒಸಿ, ಜತೆಗೆ 19 ಮಹಿಳಾ ಅಭ್ಯರ್ಥಿಗಳಿದ್ದಾರೆ. ಎಸ್ಸಿ, ಎಸ್ಟಿ, ಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ 84 ಎಂಎಲ್ಎ ಮತ್ತು 16 ಎಂಪಿ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.</p> <p>ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಸ್ಸಿ ಸಮುದಾಯದ ನಾಲ್ವರು, ಒಬ್ಬರು ಎಸ್ಟಿ, 11 ಬಿಸಿ ಮತ್ತು 9 ಒಸಿ ಹಾಗೂ ಐವರು ಮಹಿಳೆಯರು ಇದ್ದಾರೆ.</p> <p>ಬಿ. ಝಾನ್ಸಿ ಲಕ್ಷ್ಮಿ ಅವರು ವಿಶಾಖಪಟ್ಟಣಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಜಿ. ಉಮಾ ಬಾಲಾ ನರಸಾಪುರಂನ ಅಭ್ಯರ್ಥಿಯಾಗಿದ್ದಾರೆ.</p> <p>ವಿ. ವಿಜಯಸಾಯಿ ರೆಡ್ಡಿ ನೆಲ್ಲೂರಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ನಿರೀಕ್ಷೆಯಂತೆ ಹಾಲಿ ಸಂಸದ ವೈ.ಎಸ್.ಅವಿನಾಶ್ ರೆಡ್ಡಿ ಕಡಪ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p> <p>ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದ ಪ್ರಮುಖ ಕ್ಷೇತ್ರ ಪುಲಿವೆಂದುಲ ವಿಧಾನಸಭಾ ಕ್ಷೇತ್ರ, ಕೃಷ್ಣ ರಾಘವ ಜಯೇಂದ್ರ ಭಾರತ್ ಕುಪ್ಪಂ ಕ್ಷೇತ್ರ ಮತ್ತು ಎಂ. ಲಾವಣ್ಯ ಮಂಗಳಗಿರಿಯಿಂದ ಸ್ಪರ್ಧಿಸಲಿದ್ದಾರೆ.</p> <p>ಮುಖ್ಯಮಂತ್ರಿಗಳ ಕಚೇರಿ (CMO)ಯ ಅಧಿಕೃತ ಹೇಳಿಕೆಯ ಪ್ರಕಾರ 77 ಪ್ರತಿಶತ ಅಥವಾ 153 ಸ್ಪರ್ಧಿಗಳು , ಪದವೀಧರರಾಗಿದ್ದಾರೆ. 58 ಅಭ್ಯರ್ಥಿಗಳು ಸ್ನಾತಕೋತ್ತರ ಪದವೀಧರರು ಮತ್ತು 6 ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ, 17 ವೈದ್ಯರು, 15 ವಕೀಲರು, 34 ಇಂಜಿನಿಯರ್ಗಳು, ಐವರು ಶಿಕ್ಷಕರು, ಇಬ್ಬರು ಮಾಜಿ ಅಧಿಕಾರಿಗಳು, ಒಬ್ಬ ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಇದ್ದಾರೆ.</p>.ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>