<p><strong>ಗುಂಟೂರು ( ಆಂಧ್ರಪ್ರದೇಶ):</strong> ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವೈಎಸ್ಆರ್ಸಿಪಿಯ ಹಿರಿಯ ನಾಯಕ, ಮಾಜಿ ಸಚಿವ ಅಂಬಟಿ ರಾಂಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಹಿಂದಿನ ವೈಎಸ್ಆರ್ಸಿಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ರಾಂಬಾಬು ಅವರನ್ನು ಬಂಧಿಸಲಾಗಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಕುಲ್ ಜಿಂದಾಲ್ ಖಚಿತಪಡಿಸಿದ್ದಾರೆ.</p>.<p>ಸಿಎಂ ವಿರುದ್ಧದ ಅವಹೇಳನಕಾರಿ ಹೇಳಿಕೆ ನೀಡಿದ ರಾಂಬಾಬು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ, ಟಿಡಿಪಿಯ ನೂರಾರು ಕಾರ್ಯಕರ್ತರು ಅವರ ಮನೆ ಮುಂದೆ ಜಮಾಯಿಸಿ ಗಲಾಟೆ ಆರಂಭಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯ ನಡುವೆ ಅವರನ್ನು ಬಂಧಿಸಲಾಗಿದೆ.</p>.<p>ರಾಂಬಾಬು ಅವರ ಹೇಳಿಕೆಗೆ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಹಲವಾರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಂಬಾಬು ವಿರುದ್ಧ ಕೊಲೆ ಯತ್ನ ನಡೆದಿದೆ ಎಂದು ವೈ.ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ, ಆರೋಪಿಸಿದೆ.</p>.<p>ಆಂಧ್ರಪ್ರದೇಶದಲ್ಲಿ ಜಂಗಲ್ ರಾಜ್ ಆಡಳಿತವಿದೆ. ಸಿಎಂ ನಾಯ್ಡು ಅವರು ಕಾನೂನುಬಾಹಿರ ಮತ್ತು ರಾಜಕೀಯ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ.</p>.<p>ವಿರೋಧ ಪಕ್ಷದ ನಾಯಕರ ವಿರುದ್ಧ ಹಿಂಸಾಚಾರ ಮತ್ತು ಕೊಲೆ ಪ್ರಯತ್ನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸರ್ಕಾರವನ್ನು ಪ್ರಶ್ನಿಸುವ ಧ್ವನಿಗಳನ್ನು ಬೆದರಿಸಲು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂದು ವೈಎಸ್ಆರ್ಸಿಪಿ ಪತ್ರಿಕಾ ಪ್ರಕಟಣೆಯಲ್ಲಿ ಜಗನ್ ಮೋಹನ್ ರೆಡ್ಡಿ ದೂರಿದ್ದಾರೆ.</p>.<p>ಏತನ್ಮಧ್ಯೆ, ವೈಎಸ್ಆರ್ಸಿಪಿ ಸಂಸದೀಯ ಪಕ್ಷದ ನಾಯಕ ವೈ.ವಿ. ಸುಬ್ಬಾ ರೆಡ್ಡಿ ಅವರು ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಟೂರು ( ಆಂಧ್ರಪ್ರದೇಶ):</strong> ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವೈಎಸ್ಆರ್ಸಿಪಿಯ ಹಿರಿಯ ನಾಯಕ, ಮಾಜಿ ಸಚಿವ ಅಂಬಟಿ ರಾಂಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಹಿಂದಿನ ವೈಎಸ್ಆರ್ಸಿಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ರಾಂಬಾಬು ಅವರನ್ನು ಬಂಧಿಸಲಾಗಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಕುಲ್ ಜಿಂದಾಲ್ ಖಚಿತಪಡಿಸಿದ್ದಾರೆ.</p>.<p>ಸಿಎಂ ವಿರುದ್ಧದ ಅವಹೇಳನಕಾರಿ ಹೇಳಿಕೆ ನೀಡಿದ ರಾಂಬಾಬು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ, ಟಿಡಿಪಿಯ ನೂರಾರು ಕಾರ್ಯಕರ್ತರು ಅವರ ಮನೆ ಮುಂದೆ ಜಮಾಯಿಸಿ ಗಲಾಟೆ ಆರಂಭಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯ ನಡುವೆ ಅವರನ್ನು ಬಂಧಿಸಲಾಗಿದೆ.</p>.<p>ರಾಂಬಾಬು ಅವರ ಹೇಳಿಕೆಗೆ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಹಲವಾರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಂಬಾಬು ವಿರುದ್ಧ ಕೊಲೆ ಯತ್ನ ನಡೆದಿದೆ ಎಂದು ವೈ.ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ, ಆರೋಪಿಸಿದೆ.</p>.<p>ಆಂಧ್ರಪ್ರದೇಶದಲ್ಲಿ ಜಂಗಲ್ ರಾಜ್ ಆಡಳಿತವಿದೆ. ಸಿಎಂ ನಾಯ್ಡು ಅವರು ಕಾನೂನುಬಾಹಿರ ಮತ್ತು ರಾಜಕೀಯ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ.</p>.<p>ವಿರೋಧ ಪಕ್ಷದ ನಾಯಕರ ವಿರುದ್ಧ ಹಿಂಸಾಚಾರ ಮತ್ತು ಕೊಲೆ ಪ್ರಯತ್ನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸರ್ಕಾರವನ್ನು ಪ್ರಶ್ನಿಸುವ ಧ್ವನಿಗಳನ್ನು ಬೆದರಿಸಲು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂದು ವೈಎಸ್ಆರ್ಸಿಪಿ ಪತ್ರಿಕಾ ಪ್ರಕಟಣೆಯಲ್ಲಿ ಜಗನ್ ಮೋಹನ್ ರೆಡ್ಡಿ ದೂರಿದ್ದಾರೆ.</p>.<p>ಏತನ್ಮಧ್ಯೆ, ವೈಎಸ್ಆರ್ಸಿಪಿ ಸಂಸದೀಯ ಪಕ್ಷದ ನಾಯಕ ವೈ.ವಿ. ಸುಬ್ಬಾ ರೆಡ್ಡಿ ಅವರು ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>