<p><strong>ಅಮರಾವತಿ</strong>: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ವೈಎಸ್ಆರ್ಸಿಪಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. </p><p>ಈ ಕಾಯ್ದೆಯು ಸಂವಿಧಾನದ ಪ್ರಮುಖ ಆಶಯಗಳನ್ನು ಉಲ್ಲಂಘಿಸುತ್ತದೆ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಕ್ಷ ವಾದಿಸಿದೆ.</p><p>ಕಾಯ್ದೆಯು ಭಾರತೀಯ ಸಂವಿಧಾನದ 13, 14, 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳಾದ ಕಾನೂನಿನ ಮುಂದೆ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ಇರುವ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ವೈಎಸ್ಆರ್ಸಿಪಿ ಹೇಳಿದೆ.</p><p>ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದು ವಕ್ಫ್ ಮಂಡಳಿಗಳ ಆಂತರಿಕ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುತ್ತದೆ ಮತ್ತು ಅವುಗಳ ಧಾರ್ಮಿಕ ಸ್ವರೂಪವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p><p>ಧಾರ್ಮಿಕ ಸಂಸ್ಥೆಗಳು ಆಡಳಿತಾತ್ಮಕ ಸ್ವಾತಂತ್ರ್ಯ ಹೊಂದಿರಬೇಕು. ಬಾಹ್ಯ ಹಸ್ತಕ್ಷೇಪವು ಕೋಮು ಸಾಮರಸ್ಯ ಮತ್ತು ಸಾಂವಿಧಾನಿಕ ಭದ್ರತೆಯನ್ನು ಹಾಳು ಮಾಡಬಹುದು ಎಂದು ಪಕ್ಷ ವಾದಿಸಿದೆ.</p><p>ಏಪ್ರಿಲ್ 4ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ ಅನುಮೋದಿಸಿತ್ತು. 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಯನ್ನು ಅಂಗೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ವೈಎಸ್ಆರ್ಸಿಪಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. </p><p>ಈ ಕಾಯ್ದೆಯು ಸಂವಿಧಾನದ ಪ್ರಮುಖ ಆಶಯಗಳನ್ನು ಉಲ್ಲಂಘಿಸುತ್ತದೆ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಕ್ಷ ವಾದಿಸಿದೆ.</p><p>ಕಾಯ್ದೆಯು ಭಾರತೀಯ ಸಂವಿಧಾನದ 13, 14, 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳಾದ ಕಾನೂನಿನ ಮುಂದೆ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ಇರುವ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ವೈಎಸ್ಆರ್ಸಿಪಿ ಹೇಳಿದೆ.</p><p>ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದು ವಕ್ಫ್ ಮಂಡಳಿಗಳ ಆಂತರಿಕ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುತ್ತದೆ ಮತ್ತು ಅವುಗಳ ಧಾರ್ಮಿಕ ಸ್ವರೂಪವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p><p>ಧಾರ್ಮಿಕ ಸಂಸ್ಥೆಗಳು ಆಡಳಿತಾತ್ಮಕ ಸ್ವಾತಂತ್ರ್ಯ ಹೊಂದಿರಬೇಕು. ಬಾಹ್ಯ ಹಸ್ತಕ್ಷೇಪವು ಕೋಮು ಸಾಮರಸ್ಯ ಮತ್ತು ಸಾಂವಿಧಾನಿಕ ಭದ್ರತೆಯನ್ನು ಹಾಳು ಮಾಡಬಹುದು ಎಂದು ಪಕ್ಷ ವಾದಿಸಿದೆ.</p><p>ಏಪ್ರಿಲ್ 4ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ ಅನುಮೋದಿಸಿತ್ತು. 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಯನ್ನು ಅಂಗೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>