<p><strong>ಮುಂಬೈ</strong>: ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಯೂಸುಫ್ ಪಠಾಣ್ ಅವರ ಮಾವ, ಅವರ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಕಾರು ಚಲಿಸುವಾಗ ರಸ್ತೆಗುಂಡಿಯಲ್ಲಿದ್ದ ನೀರು ಸಿಡಿಸಿದರು ಎಂಬ ಕಾರಣಕ್ಕೆ ಮೂವರ ಮೇಲೆ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ ನಡೆಸಿದ ಆರೋಪ ಇವರ ಮೇಲಿದೆ.</p><p><strong>ಪ್ರಕರಣವೇನು: </strong></p><p>ಎರಡು ದಿನಗಳ ಹಿಂದೆ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ಕಾರು ಚಲಿಸುವಾಗ ಆರೋಪಿಗಳ ಪೈಕಿ ಒಬ್ಬರ ಮೇಲೆ ನೀರು ಚಿಮ್ಮಿತ್ತು. ಈ ಘಟನೆಯ ನಂತರ ಆರೋಪಿಗಳ ಗುಂಪು ಕಾರಿನಲ್ಲಿದ್ದ ವ್ಯಕ್ತಿ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.</p><p>ಭಾರತೀಯ ದಂಡ ಸಂಹಿತೆ ಸೆಕ್ಷನ್ 118(2), 115(2), 324, 352, 351(2) ಮತ್ತು 3(5) ಸೇರಿದಂತೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾರೆ ಎಂದು ಬೈಕುಲ್ಲಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p><p>ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ ಅನ್ನು ವಶಪಡಿಸಿಕೊಳ್ಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಯೂಸುಫ್ ಪಠಾಣ್ ಅವರ ಮಾವ, ಅವರ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಕಾರು ಚಲಿಸುವಾಗ ರಸ್ತೆಗುಂಡಿಯಲ್ಲಿದ್ದ ನೀರು ಸಿಡಿಸಿದರು ಎಂಬ ಕಾರಣಕ್ಕೆ ಮೂವರ ಮೇಲೆ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ ನಡೆಸಿದ ಆರೋಪ ಇವರ ಮೇಲಿದೆ.</p><p><strong>ಪ್ರಕರಣವೇನು: </strong></p><p>ಎರಡು ದಿನಗಳ ಹಿಂದೆ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ಕಾರು ಚಲಿಸುವಾಗ ಆರೋಪಿಗಳ ಪೈಕಿ ಒಬ್ಬರ ಮೇಲೆ ನೀರು ಚಿಮ್ಮಿತ್ತು. ಈ ಘಟನೆಯ ನಂತರ ಆರೋಪಿಗಳ ಗುಂಪು ಕಾರಿನಲ್ಲಿದ್ದ ವ್ಯಕ್ತಿ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.</p><p>ಭಾರತೀಯ ದಂಡ ಸಂಹಿತೆ ಸೆಕ್ಷನ್ 118(2), 115(2), 324, 352, 351(2) ಮತ್ತು 3(5) ಸೇರಿದಂತೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾರೆ ಎಂದು ಬೈಕುಲ್ಲಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p><p>ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ ಅನ್ನು ವಶಪಡಿಸಿಕೊಳ್ಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>