<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಾಕ ಪ್ರತಿಭಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.</p><p>ಈ ಸಂದರ್ಭದಲ್ಲಿ ಇದೇ ಜಿಲ್ಲೆಗೆ ಸೇರಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿರುವ ಪೋಸ್ಟ್ ವಿಪಕ್ಷವಾದ ಬಿಜೆಪಿಯನ್ನು ಕೆರಳಿಸಿದೆ. </p><p>ಎರಡು ದಿನಗಳ ಹಿಂದೆ ಯೂಸುಫ್ ಪಠಾಣ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದರು. 'ನೆಮ್ಮದಿಯ ಮಧ್ಯಾಹ್ನ, ಒಳ್ಳೆಯ ಚಹಾ, ಪ್ರಶಾಂತವಾದ ವಾತಾವರಣ. ಈ ಕ್ಷಣವನ್ನು ಆನಂದಿಸುತ್ತಿದ್ದೇನೆ' ಎಂದು ಅಡಿಬರಹ ಹಾಕಿದ್ದರು. </p><p>ಮುರ್ಶಿದಾಬಾದ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಠಾಣ್ ಅವರನ್ನು ಬಿಜೆಪಿ ನಾಯಕರು ಟೀಕೆಗೆ ಗುರಿಯಾಗಿಸಿದ್ದಾರೆ. </p>. <p>'ಬಂಗಾಳವು ಹೊತ್ತಿ ಉರಿಯುತ್ತಿದೆ. ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಪಡೆಯನ್ನು ನಿಯೋಜಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಪೊಲೀಸರು ಮೌನ ತಾಳಿದ್ದು, ಸಿಎಂ ಮಮತಾ ಬ್ಯಾನರ್ಜಿ ಸರ್ಕಾರವು ರಾಜ್ಯದಲ್ಲಿ ಹಿಂಸಾಚಾರವನ್ನು ಉತ್ತೇಜಿಸುತ್ತಿದೆ. ಈ ಮಧ್ಯೆ ಸಂಸದ ಯೂಸುಫ್ ಪಠಾಣ್ ಚಹಾ ಕುಡಿಯುತ್ತಾ ಹಿಂದೂಗಳ ಹತ್ಯೆಯ ಕ್ಷಣಗಳನ್ನು ನೆನೆಯುತ್ತಿದ್ದಾರೆ. ಇದುವೇ ಟಿಎಂಸಿ' ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ. </p><p>ಈ ಪೋಸ್ಟ್ಗೆ ಸಂಬಂಧಿಸಿದಂತೆ ಯೂಸುಫ್ ಪಠಾಣ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಡಪಕ್ಷಗಳ ನಾಯಕರೂ ಪಠಾಣ್ ಅವರನ್ನು ಟೀಕಿಸಿದ್ದಾರೆ. </p><p>ಮುರ್ಶಿದಾಬಾದ್ ಜಿಲ್ಲೆಯ ಬಹರಾಂಪುರ ಕ್ಷೇತ್ರವನ್ನು ಯೂಸುಫ್ ಪಠಾಣ್ ಪ್ರತಿನಿಧಿಸುತ್ತಿದ್ದಾರೆ. </p>.West Bengal Waqf Protest: ಪ.ಬಂಗಾಳದಲ್ಲಿ ಹಿಂಸಾಚಾರ, ಮತ್ತೆ 12 ಮಂದಿಯ ಬಂಧನ.ವಕ್ಫ್ (ತಿದ್ದುಪಡಿ) ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಯಾಗುವುದಿಲ್ಲ: ಮಮತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಾಕ ಪ್ರತಿಭಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.</p><p>ಈ ಸಂದರ್ಭದಲ್ಲಿ ಇದೇ ಜಿಲ್ಲೆಗೆ ಸೇರಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿರುವ ಪೋಸ್ಟ್ ವಿಪಕ್ಷವಾದ ಬಿಜೆಪಿಯನ್ನು ಕೆರಳಿಸಿದೆ. </p><p>ಎರಡು ದಿನಗಳ ಹಿಂದೆ ಯೂಸುಫ್ ಪಠಾಣ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದರು. 'ನೆಮ್ಮದಿಯ ಮಧ್ಯಾಹ್ನ, ಒಳ್ಳೆಯ ಚಹಾ, ಪ್ರಶಾಂತವಾದ ವಾತಾವರಣ. ಈ ಕ್ಷಣವನ್ನು ಆನಂದಿಸುತ್ತಿದ್ದೇನೆ' ಎಂದು ಅಡಿಬರಹ ಹಾಕಿದ್ದರು. </p><p>ಮುರ್ಶಿದಾಬಾದ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಠಾಣ್ ಅವರನ್ನು ಬಿಜೆಪಿ ನಾಯಕರು ಟೀಕೆಗೆ ಗುರಿಯಾಗಿಸಿದ್ದಾರೆ. </p>. <p>'ಬಂಗಾಳವು ಹೊತ್ತಿ ಉರಿಯುತ್ತಿದೆ. ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಪಡೆಯನ್ನು ನಿಯೋಜಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಪೊಲೀಸರು ಮೌನ ತಾಳಿದ್ದು, ಸಿಎಂ ಮಮತಾ ಬ್ಯಾನರ್ಜಿ ಸರ್ಕಾರವು ರಾಜ್ಯದಲ್ಲಿ ಹಿಂಸಾಚಾರವನ್ನು ಉತ್ತೇಜಿಸುತ್ತಿದೆ. ಈ ಮಧ್ಯೆ ಸಂಸದ ಯೂಸುಫ್ ಪಠಾಣ್ ಚಹಾ ಕುಡಿಯುತ್ತಾ ಹಿಂದೂಗಳ ಹತ್ಯೆಯ ಕ್ಷಣಗಳನ್ನು ನೆನೆಯುತ್ತಿದ್ದಾರೆ. ಇದುವೇ ಟಿಎಂಸಿ' ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ. </p><p>ಈ ಪೋಸ್ಟ್ಗೆ ಸಂಬಂಧಿಸಿದಂತೆ ಯೂಸುಫ್ ಪಠಾಣ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಡಪಕ್ಷಗಳ ನಾಯಕರೂ ಪಠಾಣ್ ಅವರನ್ನು ಟೀಕಿಸಿದ್ದಾರೆ. </p><p>ಮುರ್ಶಿದಾಬಾದ್ ಜಿಲ್ಲೆಯ ಬಹರಾಂಪುರ ಕ್ಷೇತ್ರವನ್ನು ಯೂಸುಫ್ ಪಠಾಣ್ ಪ್ರತಿನಿಧಿಸುತ್ತಿದ್ದಾರೆ. </p>.West Bengal Waqf Protest: ಪ.ಬಂಗಾಳದಲ್ಲಿ ಹಿಂಸಾಚಾರ, ಮತ್ತೆ 12 ಮಂದಿಯ ಬಂಧನ.ವಕ್ಫ್ (ತಿದ್ದುಪಡಿ) ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಯಾಗುವುದಿಲ್ಲ: ಮಮತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>