<p><strong>ಗುವಾಹಟಿ:</strong> ಅಸ್ಸಾಂನ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ಭಾಸ್ಕರ್ ಜ್ಯೋತಿ ಮಹಂತ ಅವರು ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.</p>.<p>ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಂತ ಅವರ ಕಿರಿಯ ಸಹೋದರ ಶ್ಯಾಮಕಾನು ಅವರನ್ನು ಬಂಧಿಸಲಾಗಿದೆ. ಶ್ಯಾಮಕಾನು ಅವರಿಗೆ ಸರ್ಕಾರ ನೀಡಿರುವ ಅನುದಾನದ ಮಾಹಿತಿ ಕೋರಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p class="title">ಅಸ್ಸಾಂನ ಮಾಜಿ ಡಿಜಿಪಿ ಕೂಡ ಆಗಿರುವ ಮಹಂತ ಅವರು ತಮ್ಮ ರಾಜೀನಾಮೆಯ ಕುರಿತು ಫೇಸ್ಬುಕ್ನಲ್ಲಿ ತಿಳಿಸಿದ್ದು, ಈಗಾಗಲೇ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾಗಿ ಹೇಳಿದ್ದಾರೆ. </p>.<p class="title">‘ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವಿನೊಂದಿಗೆ ಶ್ಯಾಮಕಾನು ಮಹಂತ ಹೆಸರು ತಳಕುಹಾಕಲಾಗಿದೆ. ಶ್ಯಾಮಕಾನು ಕುರಿತು ಯಾವುದೇ ಮಾಹಿತಿ ಕೇಳಿ ಯಾರಾದರೂ ಅರ್ಜಿ ಸಲ್ಲಿಸಿದರೆ, ಅವರ ಮನಸ್ಸಿನಲ್ಲಿ ಯಾವುದೇ ಅನುಮಾನ ಮೂಡಬಾರದು ಎಂಬ ಉದ್ದೇಶದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ನನ್ನ ಆತ್ಮಸಾಕ್ಷಿ ಹೇಳುತ್ತಿತ್ತು’ ಎಂದು ತಿಳಿಸಿದ್ದಾರೆ.</p>.<p class="title">ರಾಜೀನಾಮೆ ನಿರ್ಧಾರದ ಕುರಿತು ಈ ಹಿಂದೆಯೇ ಮುಖ್ಯಮಂತ್ರಿ ಕಚೇರಿಗೆ ತಿಳಿಸಿರುವುದಾಗಿಯೂ ಮಹಂತ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂನ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ಭಾಸ್ಕರ್ ಜ್ಯೋತಿ ಮಹಂತ ಅವರು ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.</p>.<p>ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಂತ ಅವರ ಕಿರಿಯ ಸಹೋದರ ಶ್ಯಾಮಕಾನು ಅವರನ್ನು ಬಂಧಿಸಲಾಗಿದೆ. ಶ್ಯಾಮಕಾನು ಅವರಿಗೆ ಸರ್ಕಾರ ನೀಡಿರುವ ಅನುದಾನದ ಮಾಹಿತಿ ಕೋರಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p class="title">ಅಸ್ಸಾಂನ ಮಾಜಿ ಡಿಜಿಪಿ ಕೂಡ ಆಗಿರುವ ಮಹಂತ ಅವರು ತಮ್ಮ ರಾಜೀನಾಮೆಯ ಕುರಿತು ಫೇಸ್ಬುಕ್ನಲ್ಲಿ ತಿಳಿಸಿದ್ದು, ಈಗಾಗಲೇ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾಗಿ ಹೇಳಿದ್ದಾರೆ. </p>.<p class="title">‘ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವಿನೊಂದಿಗೆ ಶ್ಯಾಮಕಾನು ಮಹಂತ ಹೆಸರು ತಳಕುಹಾಕಲಾಗಿದೆ. ಶ್ಯಾಮಕಾನು ಕುರಿತು ಯಾವುದೇ ಮಾಹಿತಿ ಕೇಳಿ ಯಾರಾದರೂ ಅರ್ಜಿ ಸಲ್ಲಿಸಿದರೆ, ಅವರ ಮನಸ್ಸಿನಲ್ಲಿ ಯಾವುದೇ ಅನುಮಾನ ಮೂಡಬಾರದು ಎಂಬ ಉದ್ದೇಶದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ನನ್ನ ಆತ್ಮಸಾಕ್ಷಿ ಹೇಳುತ್ತಿತ್ತು’ ಎಂದು ತಿಳಿಸಿದ್ದಾರೆ.</p>.<p class="title">ರಾಜೀನಾಮೆ ನಿರ್ಧಾರದ ಕುರಿತು ಈ ಹಿಂದೆಯೇ ಮುಖ್ಯಮಂತ್ರಿ ಕಚೇರಿಗೆ ತಿಳಿಸಿರುವುದಾಗಿಯೂ ಮಹಂತ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>