<p><strong>ನವದೆಹಲಿ</strong>: ಸಿಂಗಪುರದಲ್ಲಿ ಮೃತಪಟ್ಟ ಅಸ್ಸಾಂ ಗಾಯಕ ಜುಬಿನ್ ಗರ್ಗ್ ಅವರ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದರು. ಅವರ ಸಾವಿನ ತನಿಖೆ ಮುಕ್ತ ಮತ್ತು ನ್ಯಾಯಯುತವಾಗಿರಬೇಕು ಎಂದರು.</p><p>ಗರ್ಗ್ ಭಾರತದ ಪ್ರೀತಿಯ ಸಾಂಸ್ಕೃತಿಕ ಹೆಗ್ಗುರುತಾಗಿದ್ದು, ಅವರ ನಿಧನವು ಲಕ್ಷಾಂತರ ಅಭಿಮಾನಿಗಳ ಮೇಲೆ, ವಿಶೇಷವಾಗಿ ಅಸ್ಸಾಂ ಜನರಲ್ಲಿ ಆಳವಾದ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.</p><p>‘ಕಾಂಗ್ರೆಸ್ ಪಕ್ಷವು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತದೆ. ಅವರ ಸಾವಿನ ತನಿಖೆ ಮುಕ್ತ ಮತ್ತು ನ್ಯಾಯಯುತವಾಗಿರಬೇಕು. ಅವರ ನಿಧನಕ್ಕೆ ಕಾರಣರಾದವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು’ ಎಂದೂ ಒತ್ತಾಯಿಸಿದ್ದಾರೆ.</p><p>ಜುಬಿನ್ ಮತ್ತು ಅವರ ಧ್ವನಿ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಶಾಶ್ವತವಾಗಿದೆ ಎಂದು ಖರ್ಗೆ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>52 ವರ್ಷದ ಜುಬಿನ್ ಗರ್ಗ್ ಅವರು 4ನೇ ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಪುರಕ್ಕೆ ತೆರಳಿದ್ದಾಗ ಸೆಪ್ಟೆಂಬರ್ 19ರಂದು ಸಿಂಗಪುರದ ಸಮುದ್ರದಲ್ಲಿ ಈಜುವಾಗ ನಿಧನರಾದರು ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. </p><p>ಪ್ರಕರಣ ಕುರಿತಂತೆ ಅಸ್ಸಾಂನ ಸಿಐಡಿಯ 10 ಸದಸ್ಯರ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸುತ್ತಿದ್ದು, ತಂಡ ಮುಂದಿನ ವಾರ ಸಿಂಗಪುರಕ್ಕೆ ತೆರಳಲಿದೆ.</p><p>ಇಂದು ಗುವಾಹಟಿಯ ಕಹಿಲಿಪಾರಾದಲ್ಲಿರುವ ಗರ್ಗ್ ಮನೆಗೆ ಭೇಟಿ ನಿಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಜುಬಿನ್ ಸಾವಿನ ಸತ್ಯ ಹೊರಬರಬೇಕೆಂದು ಕುಟುಂಬ ಒತ್ತಾಯಿಸಿದೆ ಎಂದು ರಾಹುಲ್ ತಿಳಿಸಿದರು.</p><p>‘ಜುಬಿನ್ ಕುಟುಂಬ ಮತ್ತು ಅಸ್ಸಾಂ ಜನರು ಸತ್ಯ ಮತ್ತು ನ್ಯಾಯ ಪಡೆಯಲು ಅರ್ಹರು. ಸರ್ಕಾರವು ಶೀಘ್ರ ಪಾದರ್ಶಕ ತನಿಖೆ ನಡೆಸಬೇಕು’ ಎಂದು ಖರ್ಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಿಂಗಪುರದಲ್ಲಿ ಮೃತಪಟ್ಟ ಅಸ್ಸಾಂ ಗಾಯಕ ಜುಬಿನ್ ಗರ್ಗ್ ಅವರ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದರು. ಅವರ ಸಾವಿನ ತನಿಖೆ ಮುಕ್ತ ಮತ್ತು ನ್ಯಾಯಯುತವಾಗಿರಬೇಕು ಎಂದರು.</p><p>ಗರ್ಗ್ ಭಾರತದ ಪ್ರೀತಿಯ ಸಾಂಸ್ಕೃತಿಕ ಹೆಗ್ಗುರುತಾಗಿದ್ದು, ಅವರ ನಿಧನವು ಲಕ್ಷಾಂತರ ಅಭಿಮಾನಿಗಳ ಮೇಲೆ, ವಿಶೇಷವಾಗಿ ಅಸ್ಸಾಂ ಜನರಲ್ಲಿ ಆಳವಾದ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.</p><p>‘ಕಾಂಗ್ರೆಸ್ ಪಕ್ಷವು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತದೆ. ಅವರ ಸಾವಿನ ತನಿಖೆ ಮುಕ್ತ ಮತ್ತು ನ್ಯಾಯಯುತವಾಗಿರಬೇಕು. ಅವರ ನಿಧನಕ್ಕೆ ಕಾರಣರಾದವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು’ ಎಂದೂ ಒತ್ತಾಯಿಸಿದ್ದಾರೆ.</p><p>ಜುಬಿನ್ ಮತ್ತು ಅವರ ಧ್ವನಿ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಶಾಶ್ವತವಾಗಿದೆ ಎಂದು ಖರ್ಗೆ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>52 ವರ್ಷದ ಜುಬಿನ್ ಗರ್ಗ್ ಅವರು 4ನೇ ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಪುರಕ್ಕೆ ತೆರಳಿದ್ದಾಗ ಸೆಪ್ಟೆಂಬರ್ 19ರಂದು ಸಿಂಗಪುರದ ಸಮುದ್ರದಲ್ಲಿ ಈಜುವಾಗ ನಿಧನರಾದರು ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. </p><p>ಪ್ರಕರಣ ಕುರಿತಂತೆ ಅಸ್ಸಾಂನ ಸಿಐಡಿಯ 10 ಸದಸ್ಯರ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸುತ್ತಿದ್ದು, ತಂಡ ಮುಂದಿನ ವಾರ ಸಿಂಗಪುರಕ್ಕೆ ತೆರಳಲಿದೆ.</p><p>ಇಂದು ಗುವಾಹಟಿಯ ಕಹಿಲಿಪಾರಾದಲ್ಲಿರುವ ಗರ್ಗ್ ಮನೆಗೆ ಭೇಟಿ ನಿಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಜುಬಿನ್ ಸಾವಿನ ಸತ್ಯ ಹೊರಬರಬೇಕೆಂದು ಕುಟುಂಬ ಒತ್ತಾಯಿಸಿದೆ ಎಂದು ರಾಹುಲ್ ತಿಳಿಸಿದರು.</p><p>‘ಜುಬಿನ್ ಕುಟುಂಬ ಮತ್ತು ಅಸ್ಸಾಂ ಜನರು ಸತ್ಯ ಮತ್ತು ನ್ಯಾಯ ಪಡೆಯಲು ಅರ್ಹರು. ಸರ್ಕಾರವು ಶೀಘ್ರ ಪಾದರ್ಶಕ ತನಿಖೆ ನಡೆಸಬೇಕು’ ಎಂದು ಖರ್ಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>