<p><strong>ಗುವಾಹಟಿ</strong>: ಗಾಯಕ ಜುಬೀನ್ ಗರ್ಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯ ಕುರಿತು ಚರ್ಚಿಸಲು ನಾಗರಿಕ ಸಮಾಜದ ಪ್ರಮುಖರನ್ನು ಆಹ್ವಾನಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಸೋಮವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಿಐಡಿಯ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಅವರು, ‘ವರದಿಯನ್ನು ಸಾರ್ವಜನಿಕರಿಗೆ ಬಹಿರಂಗ ಮಾಡುವುದಿಲ್ಲ. ಆದರೆ ಅಕ್ಟೋಬರ್ 14ರಂದು ಸಂಜೆ 4 ಗಂಟೆಗೆ ಪ್ರಮುಖರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು’ ಎಂದು ತಿಳಿಸಿದರು. ಆಹ್ವಾನಿತರು ಯಾರು ಎಂಬ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ.</p>.<p>ಸಿಂಗಪುರದಲ್ಲಿ ಅಯೋಜಿಸಲಾಗಿದ್ದ ಈಶಾನ್ಯ ಭಾರತ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ತೆರಳಿದ್ದರು. ಅಲ್ಲಿ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಸೆಪ್ಟೆಂಬರ್ 19ರಂದು ಜುಬೀನ್ ಮೃತಪಟ್ಟಿದ್ದರು. ಸಿಐಡಿಯ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ.</p>.<p><strong>ವಿಚಾರಣೆಗೆ ಎನ್ಆರ್ಐಗಳು ಹಾಜರು</strong></p><p>ಜುಬೀನ್ ಗರ್ಗ್ ಅವರ ನಿಧನಕ್ಕೆ ಸಾಕ್ಷಿಯಾಗಿದ್ದ ಸಿಂಗಪುದಲ್ಲಿ ನೆಲಸಿದ್ದ ಅಸ್ಸಾಂ ಮೂಲದ ಮೂವರು ಸೋಮವಾರ ಗುವಾಹಟಿಗೆ ಬಂದು ಪೊಲೀಸರ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.</p><p>ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು (ಎನ್ಆರ್ಐ) ಇಲ್ಲಿಗೆ ಬಂದು ಪೊಲೀಸರ ಎದುರು ಹೇಳಿಕೆ ದಾಖಲಿಸಲಿದ್ದಾರೆ ಎಂದು ತಿಳಿಸಿದರು.</p><p>ಜಿಯೊಲಾಂಗ್ಸತ್ ನರ್ಜರಿ ಪರೀಕ್ಷಿತ್ ಶರ್ಮಾ ಮತ್ತು ಸಿದ್ಧಾರ್ಥ ಬೋರಾ ಅವರು ಸೋಮವಾರ ಬೆಳಿಗ್ಗೆ ಸಿಐಡಿ ಮುಖ್ಯ ಕಚೇರಿಗೆ ಬಂದು ವಿಚಾರಣೆ ಎದುರಿಸಿದರು ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ತಿಳಿಸಿದರು.</p><p>ಸಿಂಗಪುರದ ಅಸ್ಸಾಂ ಅಸೋಸಿಯೇಷನ್ಗೆ ಸಂಬಂಧಿಸಿದ 10 ಜನರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿ ಅಕ್ಟೋಬರ್ 6ರ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಗಾಯಕ ಜುಬೀನ್ ಗರ್ಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯ ಕುರಿತು ಚರ್ಚಿಸಲು ನಾಗರಿಕ ಸಮಾಜದ ಪ್ರಮುಖರನ್ನು ಆಹ್ವಾನಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಸೋಮವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಿಐಡಿಯ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಅವರು, ‘ವರದಿಯನ್ನು ಸಾರ್ವಜನಿಕರಿಗೆ ಬಹಿರಂಗ ಮಾಡುವುದಿಲ್ಲ. ಆದರೆ ಅಕ್ಟೋಬರ್ 14ರಂದು ಸಂಜೆ 4 ಗಂಟೆಗೆ ಪ್ರಮುಖರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು’ ಎಂದು ತಿಳಿಸಿದರು. ಆಹ್ವಾನಿತರು ಯಾರು ಎಂಬ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ.</p>.<p>ಸಿಂಗಪುರದಲ್ಲಿ ಅಯೋಜಿಸಲಾಗಿದ್ದ ಈಶಾನ್ಯ ಭಾರತ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ತೆರಳಿದ್ದರು. ಅಲ್ಲಿ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಸೆಪ್ಟೆಂಬರ್ 19ರಂದು ಜುಬೀನ್ ಮೃತಪಟ್ಟಿದ್ದರು. ಸಿಐಡಿಯ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ.</p>.<p><strong>ವಿಚಾರಣೆಗೆ ಎನ್ಆರ್ಐಗಳು ಹಾಜರು</strong></p><p>ಜುಬೀನ್ ಗರ್ಗ್ ಅವರ ನಿಧನಕ್ಕೆ ಸಾಕ್ಷಿಯಾಗಿದ್ದ ಸಿಂಗಪುದಲ್ಲಿ ನೆಲಸಿದ್ದ ಅಸ್ಸಾಂ ಮೂಲದ ಮೂವರು ಸೋಮವಾರ ಗುವಾಹಟಿಗೆ ಬಂದು ಪೊಲೀಸರ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.</p><p>ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು (ಎನ್ಆರ್ಐ) ಇಲ್ಲಿಗೆ ಬಂದು ಪೊಲೀಸರ ಎದುರು ಹೇಳಿಕೆ ದಾಖಲಿಸಲಿದ್ದಾರೆ ಎಂದು ತಿಳಿಸಿದರು.</p><p>ಜಿಯೊಲಾಂಗ್ಸತ್ ನರ್ಜರಿ ಪರೀಕ್ಷಿತ್ ಶರ್ಮಾ ಮತ್ತು ಸಿದ್ಧಾರ್ಥ ಬೋರಾ ಅವರು ಸೋಮವಾರ ಬೆಳಿಗ್ಗೆ ಸಿಐಡಿ ಮುಖ್ಯ ಕಚೇರಿಗೆ ಬಂದು ವಿಚಾರಣೆ ಎದುರಿಸಿದರು ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ತಿಳಿಸಿದರು.</p><p>ಸಿಂಗಪುರದ ಅಸ್ಸಾಂ ಅಸೋಸಿಯೇಷನ್ಗೆ ಸಂಬಂಧಿಸಿದ 10 ಜನರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿ ಅಕ್ಟೋಬರ್ 6ರ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>