<p><strong>ಗುವಾಹಟಿ:</strong> ಕಳೆದ ತಿಂಗಳು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಸ್ಸಾಂ ಗಾಯಕ ಜುಬೀನ್ ಗರ್ಗ್ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ಗರ್ಗ್ ಅವರ ಭದ್ರತೆಗೆ ನೇಮಕಗೊಂಡಿದ್ದ ಇಬ್ಬರು ಭದ್ರತಾ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. </p><p>ಗರ್ಗ್ ಭದ್ರತೆಗೆಂದು ಸರ್ಕಾರದಿಂದ ನೇಮಕಗೊಂಡಿದ್ದ ನಂದೇಶ್ವರ್ ಬೋರಾ ಮತ್ತು ಪರೇಶ್ ಬೈಶ್ಯ ಎನ್ನುವವರನ್ನು ವಿಚಾರಣೆ ನಡೆಸಿದ ಅಸ್ಸಾಂ ಪೊಲೀಸರು ಹುದ್ದೆಯಿಂದ ಅಮಾನತುಗೊಳಿಸಿದ್ದಾರೆ.</p><p>ಈ ಇಬ್ಬರ ಬ್ಯಾಂಕ್ ಖಾತೆಗಳ ಮೂಲಕ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗರ್ಗ್ ಅವರ ಸಾವಿನ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈ ಹಿಂದೆ ಈಶಾನ್ಯ ಭಾರತ ಉತ್ಸವದ ಆಯೋಜಕ ಶ್ಯಮಕನು ಮಹಾಂತ ಗರ್ಗ್ ಅವರ ಸೋದರ ಸಂಬಂಧಿ ಹಾಗೂ ಅಸ್ಸಾಂ ಪೊಲೀಸ್ ಡಿಎಸ್ಪಿ ಸಂದೀಪನ್ ಗರ್ಗ್, ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ, ಗಾಯಕ ಅಮೃತಪ್ರವ ಮಹಂತಾ ಸೇರಿ ಶೇಖರ ಜ್ಯೋತಿ ಗೋಸ್ವಾಮಿ ಎನ್ನುವವರನ್ನು ಬಂಧಿಸಿದ್ದಾರೆ.</p><p>ಸೆ.19ರಂದು ಸಿಂಗಪುರಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಸ್ಕೂಬ್ ಡೈವಿಂಗ್ ಮಾಡುವಾಗ ಗರ್ಗ್ ಮೃತಪಟ್ಟಿದ್ದರು. ಗರ್ಗ್ ಸಾವಿನ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆ, ಅಸ್ಸಾಂ ಸರ್ಕಾರ ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿತ್ತು. </p>.ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ: ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು.ಜುಬೀನ್ ಸಾವು: ಈಶಾನ್ಯ ಭಾರತ ಉತ್ಸವದ ಆಯೋಜಕ ಮಹಾಂತ,ವ್ಯವಸ್ಥಾಪಕ ಸಿದ್ಧಾರ್ಥ ಬಂಧನ.ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ: ತನಿಖೆಗೆ ನ್ಯಾಯಾಂಗ ಆಯೋಗ ರಚನೆ.ಗಾಯಕ ಜುಬೀನ್: ಮತ್ತೆ ಮರಣೋತ್ತರ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಕಳೆದ ತಿಂಗಳು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಸ್ಸಾಂ ಗಾಯಕ ಜುಬೀನ್ ಗರ್ಗ್ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ಗರ್ಗ್ ಅವರ ಭದ್ರತೆಗೆ ನೇಮಕಗೊಂಡಿದ್ದ ಇಬ್ಬರು ಭದ್ರತಾ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. </p><p>ಗರ್ಗ್ ಭದ್ರತೆಗೆಂದು ಸರ್ಕಾರದಿಂದ ನೇಮಕಗೊಂಡಿದ್ದ ನಂದೇಶ್ವರ್ ಬೋರಾ ಮತ್ತು ಪರೇಶ್ ಬೈಶ್ಯ ಎನ್ನುವವರನ್ನು ವಿಚಾರಣೆ ನಡೆಸಿದ ಅಸ್ಸಾಂ ಪೊಲೀಸರು ಹುದ್ದೆಯಿಂದ ಅಮಾನತುಗೊಳಿಸಿದ್ದಾರೆ.</p><p>ಈ ಇಬ್ಬರ ಬ್ಯಾಂಕ್ ಖಾತೆಗಳ ಮೂಲಕ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗರ್ಗ್ ಅವರ ಸಾವಿನ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈ ಹಿಂದೆ ಈಶಾನ್ಯ ಭಾರತ ಉತ್ಸವದ ಆಯೋಜಕ ಶ್ಯಮಕನು ಮಹಾಂತ ಗರ್ಗ್ ಅವರ ಸೋದರ ಸಂಬಂಧಿ ಹಾಗೂ ಅಸ್ಸಾಂ ಪೊಲೀಸ್ ಡಿಎಸ್ಪಿ ಸಂದೀಪನ್ ಗರ್ಗ್, ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ, ಗಾಯಕ ಅಮೃತಪ್ರವ ಮಹಂತಾ ಸೇರಿ ಶೇಖರ ಜ್ಯೋತಿ ಗೋಸ್ವಾಮಿ ಎನ್ನುವವರನ್ನು ಬಂಧಿಸಿದ್ದಾರೆ.</p><p>ಸೆ.19ರಂದು ಸಿಂಗಪುರಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಸ್ಕೂಬ್ ಡೈವಿಂಗ್ ಮಾಡುವಾಗ ಗರ್ಗ್ ಮೃತಪಟ್ಟಿದ್ದರು. ಗರ್ಗ್ ಸಾವಿನ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆ, ಅಸ್ಸಾಂ ಸರ್ಕಾರ ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿತ್ತು. </p>.ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ: ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು.ಜುಬೀನ್ ಸಾವು: ಈಶಾನ್ಯ ಭಾರತ ಉತ್ಸವದ ಆಯೋಜಕ ಮಹಾಂತ,ವ್ಯವಸ್ಥಾಪಕ ಸಿದ್ಧಾರ್ಥ ಬಂಧನ.ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ: ತನಿಖೆಗೆ ನ್ಯಾಯಾಂಗ ಆಯೋಗ ರಚನೆ.ಗಾಯಕ ಜುಬೀನ್: ಮತ್ತೆ ಮರಣೋತ್ತರ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>