<p><strong>ಗುವಾಹಟಿ:</strong> ಕಳೆದ ತಿಂಗಳು ಮೃತಪಟ್ಟ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವಿನ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ, ಸಿಂಗಪುರ ಪೊಲೀಸ್ ಅಧಿಕಾರಿಗಳು ಅಕ್ಟೋಬರ್ 21ರಂದು ಅಸ್ಸಾಂ ಪೊಲೀಸ್ ತಂಡವನ್ನು ಭೇಟಿ ಮಾಡಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.</p>.<p>ಅದಾಗ್ಯೂ, ಅಸ್ಸಾಂ ಪೊಲೀಸ್ ತಂಡ ಸಿಂಗಪುರಕ್ಕೆ ಹೋಗುತ್ತದೆಯೆ ಅಥವಾ ಇಲ್ಲವೆ ಎಂಬುವುದನ್ನು ಅವರು ಉಲ್ಲೇಖಿಸಿಲ್ಲ.</p>.<p>‘ನಮ್ಮ ಪ್ರೀತಿಯ ಜುಬೀನ್ಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ. ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಮುನ್ನಾ ಗುಪ್ತಾ ನೇತೃತ್ವದ ಅಸ್ಸಾಂ ಪೊಲೀಸ್ ತಂಡವನ್ನು ಅಕ್ಟೋಬರ್ 21ರಂದು ಸಿಂಗಪುರ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಲಿದ್ದಾರೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಬುಧವಾರ ನವದೆಹಲಿಯಲ್ಲಿ ಭಾರತದಲ್ಲಿನ ಸಿಂಗಪುರ ಹಂಗಾಮಿ ರಾಯಭಾರಿ ಆಲಿಸ್ ಚೆಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ, ಜುಬೀನ್ ಸಾವಿನ ತನಿಖೆಯನ್ನು ಮುಂದುವರಿಸಲು ರಾಜ್ಯದ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಕಳೆದ ತಿಂಗಳು ಮೃತಪಟ್ಟ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವಿನ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ, ಸಿಂಗಪುರ ಪೊಲೀಸ್ ಅಧಿಕಾರಿಗಳು ಅಕ್ಟೋಬರ್ 21ರಂದು ಅಸ್ಸಾಂ ಪೊಲೀಸ್ ತಂಡವನ್ನು ಭೇಟಿ ಮಾಡಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.</p>.<p>ಅದಾಗ್ಯೂ, ಅಸ್ಸಾಂ ಪೊಲೀಸ್ ತಂಡ ಸಿಂಗಪುರಕ್ಕೆ ಹೋಗುತ್ತದೆಯೆ ಅಥವಾ ಇಲ್ಲವೆ ಎಂಬುವುದನ್ನು ಅವರು ಉಲ್ಲೇಖಿಸಿಲ್ಲ.</p>.<p>‘ನಮ್ಮ ಪ್ರೀತಿಯ ಜುಬೀನ್ಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ. ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಮುನ್ನಾ ಗುಪ್ತಾ ನೇತೃತ್ವದ ಅಸ್ಸಾಂ ಪೊಲೀಸ್ ತಂಡವನ್ನು ಅಕ್ಟೋಬರ್ 21ರಂದು ಸಿಂಗಪುರ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಲಿದ್ದಾರೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಬುಧವಾರ ನವದೆಹಲಿಯಲ್ಲಿ ಭಾರತದಲ್ಲಿನ ಸಿಂಗಪುರ ಹಂಗಾಮಿ ರಾಯಭಾರಿ ಆಲಿಸ್ ಚೆಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ, ಜುಬೀನ್ ಸಾವಿನ ತನಿಖೆಯನ್ನು ಮುಂದುವರಿಸಲು ರಾಜ್ಯದ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>