<p><strong>ಗುವಾಹಟಿ:</strong> ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯಕ್ಕೆ ನೀಡುವಂತೆ ಗುವಾಹಟಿ ಹೈಕೋರ್ಟ್ಗೆ ವಿನಂತಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಗುರುವಾರ ಹೇಳಿದರು. </p>.<p>‘ಗರ್ಗ್ ಅವರ ಕುಟುಂಬದ ವಿನಂತಿಯ ಮೇರೆಗೆ ಸಚಿವ ಸಂಪುಟವು ಈ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು. </p>.<p>ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಗರ್ಗ್ ಪತ್ನಿ ಗರಿಮಾ ಸೈಕಿಯಾ ‘ಜುಬೀನ್ ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳು ಅವರ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯನ್ನು ಬಯಸುತ್ತಿದ್ದಾರೆ. ನ್ಯಾಯಾಧೀಶರು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸುತ್ತಾರೆ ಎಂದು ಭಾವಿಸಿದ್ದೇವೆ’ ಎಂದು ಹೇಳಿದರು. </p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ವಿಶೇಷ ತನಿಖಾ ತಂಡವು, ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ 7 ಮಂದಿಯನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ. </p>.<p class="title">ಮೂರು ದಿನಗಳ ‘ನಾರ್ತ್ ಈಸ್ಟ್ ಫೆಸ್ಟಿವಲ್’ ಕಾರ್ಯಕ್ರಮದ ನಾಲ್ಕನೇ ಆವೃತ್ತಿಯಲ್ಲಿ ಭಾಗವಹಿಸಲು ಜುಬೀನ್ ಸಿಂಗಪುರಕ್ಕೆ ತೆರಳಿದ್ದರು. ಅದರ ಹಿಂದಿನ ದಿನ ಲಾಜರಸ್ ದ್ವೀಪದಲ್ಲಿ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ವೇಳೆ ಕಳೆದ ಸೆ.19ರಂದು ಸಾವಿಗೀಡಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯಕ್ಕೆ ನೀಡುವಂತೆ ಗುವಾಹಟಿ ಹೈಕೋರ್ಟ್ಗೆ ವಿನಂತಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಗುರುವಾರ ಹೇಳಿದರು. </p>.<p>‘ಗರ್ಗ್ ಅವರ ಕುಟುಂಬದ ವಿನಂತಿಯ ಮೇರೆಗೆ ಸಚಿವ ಸಂಪುಟವು ಈ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು. </p>.<p>ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಗರ್ಗ್ ಪತ್ನಿ ಗರಿಮಾ ಸೈಕಿಯಾ ‘ಜುಬೀನ್ ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳು ಅವರ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯನ್ನು ಬಯಸುತ್ತಿದ್ದಾರೆ. ನ್ಯಾಯಾಧೀಶರು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸುತ್ತಾರೆ ಎಂದು ಭಾವಿಸಿದ್ದೇವೆ’ ಎಂದು ಹೇಳಿದರು. </p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ವಿಶೇಷ ತನಿಖಾ ತಂಡವು, ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ 7 ಮಂದಿಯನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ. </p>.<p class="title">ಮೂರು ದಿನಗಳ ‘ನಾರ್ತ್ ಈಸ್ಟ್ ಫೆಸ್ಟಿವಲ್’ ಕಾರ್ಯಕ್ರಮದ ನಾಲ್ಕನೇ ಆವೃತ್ತಿಯಲ್ಲಿ ಭಾಗವಹಿಸಲು ಜುಬೀನ್ ಸಿಂಗಪುರಕ್ಕೆ ತೆರಳಿದ್ದರು. ಅದರ ಹಿಂದಿನ ದಿನ ಲಾಜರಸ್ ದ್ವೀಪದಲ್ಲಿ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ವೇಳೆ ಕಳೆದ ಸೆ.19ರಂದು ಸಾವಿಗೀಡಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>