<p><strong>ಗುವಾಹಟಿ:</strong> ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವದ (ನಾರ್ತ್ ಈಸ್ಟ್ ಇಂಡಿಯಾ ಫೆಸ್ಟಿವಲ್–ಎನ್ಇಐಎಫ್) ಆಯೋಜಕ ಶ್ಯಾಮಕಾನು ಮಹಾಂತ ಹಾಗೂ ಗರ್ಗ್ ಅವರ ವ್ಯವಸ್ಥಾಪಕ ಸಿದ್ಧಾರ್ಥ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಸಿಂಗಪುರದಿಂದ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಮಹಾಂತ ಅವರನ್ನು ಬಂಧಿಸಲಾಗಿದೆ. ಶರ್ಮಾ ಅವರನ್ನು ಗುರುಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ. ಬುಧವಾರ ಬೆಳಗಿನ ಜಾವ ಇಬ್ಬರನ್ನೂ ಗುವಾಹಟಿಗೆ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಈಶಾನ್ಯ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಜುಬೀನ್ ಸಿಂಗಪುರಕ್ಕೆ ತೆರಳಿದ್ದರು. ಸೆ.19ರಂದು ಅಲ್ಲಿ ಸ್ಕೂಬಾಡೈವಿಂಗ್ ಮಾಡುತ್ತಿದ್ದ ವೇಳೆ ಮೃತಪಟ್ಟಿದ್ದರು.</p>.ಜುಬಿನ್ ಸಾವು: ಅಸ್ಸಾಂನಲ್ಲಿ ಕಳೆಗುಂದಿದ ದುರ್ಗಾ ಪೂಜೆ ಸಂಭ್ರಮ .<p>ಅವರ ಸಾವಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದ್ದರು.</p>.ಗಾಯಕ ಜುಬೀನ್ ಸಾವು: ಎಸ್ಐಟಿ ರಚನೆಗೆ ಅಸ್ಸಾಂ ಸಿ.ಎಂ ಆದೇಶ.<p>ಸಿಂಗಪುರದಲ್ಲಿ ನಡೆದಿದ್ದ ಈಶಾನ್ಯ ಭಾರತ ಉತ್ಸವದ ಆಯೋಜಕರ ವಿರುದ್ಧ ಅಸ್ಸಾಂನಲ್ಲಿ 60ಕ್ಕೂ ಅಧಿಕ ದೂರುಗಳು ದಾಖಲಾಗಿರುವ ಕಾರಣ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ ಎಂದೂ ಅವರು ಹೇಳಿದ್ದರು.</p>.ಜುಬೀನ್ ಗರ್ಗ್ ಸಾವು ಪ್ರಕರಣ: ಇವೆಂಟ್ ಮ್ಯಾನೇಜರ್ ವಿರುದ್ಧ ಪ್ರತ್ಯೇಕ ತನಿಖೆ.<h2> ಲುಕ್ಔಟ್ ನೋಟಿಸ್</h2><p>ಮಹಾಂತ ಮತ್ತು ಶರ್ಮಾ ವಿರುದ್ಧ ಇಂಟರ್ಪೋಲ್ ಮೂಲಕ 'ಲುಕ್ಔಟ್ ನೋಟಿಸ್' ಹೊರಡಿಸಲಾಗಿದ್ದು, ಅಕ್ಟೋಬರ್ 6 ರೊಳಗೆ ಸಿಐಡಿ ಮುಂದೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವದ (ನಾರ್ತ್ ಈಸ್ಟ್ ಇಂಡಿಯಾ ಫೆಸ್ಟಿವಲ್–ಎನ್ಇಐಎಫ್) ಆಯೋಜಕ ಶ್ಯಾಮಕಾನು ಮಹಾಂತ ಹಾಗೂ ಗರ್ಗ್ ಅವರ ವ್ಯವಸ್ಥಾಪಕ ಸಿದ್ಧಾರ್ಥ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಸಿಂಗಪುರದಿಂದ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಮಹಾಂತ ಅವರನ್ನು ಬಂಧಿಸಲಾಗಿದೆ. ಶರ್ಮಾ ಅವರನ್ನು ಗುರುಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ. ಬುಧವಾರ ಬೆಳಗಿನ ಜಾವ ಇಬ್ಬರನ್ನೂ ಗುವಾಹಟಿಗೆ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಈಶಾನ್ಯ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಜುಬೀನ್ ಸಿಂಗಪುರಕ್ಕೆ ತೆರಳಿದ್ದರು. ಸೆ.19ರಂದು ಅಲ್ಲಿ ಸ್ಕೂಬಾಡೈವಿಂಗ್ ಮಾಡುತ್ತಿದ್ದ ವೇಳೆ ಮೃತಪಟ್ಟಿದ್ದರು.</p>.ಜುಬಿನ್ ಸಾವು: ಅಸ್ಸಾಂನಲ್ಲಿ ಕಳೆಗುಂದಿದ ದುರ್ಗಾ ಪೂಜೆ ಸಂಭ್ರಮ .<p>ಅವರ ಸಾವಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದ್ದರು.</p>.ಗಾಯಕ ಜುಬೀನ್ ಸಾವು: ಎಸ್ಐಟಿ ರಚನೆಗೆ ಅಸ್ಸಾಂ ಸಿ.ಎಂ ಆದೇಶ.<p>ಸಿಂಗಪುರದಲ್ಲಿ ನಡೆದಿದ್ದ ಈಶಾನ್ಯ ಭಾರತ ಉತ್ಸವದ ಆಯೋಜಕರ ವಿರುದ್ಧ ಅಸ್ಸಾಂನಲ್ಲಿ 60ಕ್ಕೂ ಅಧಿಕ ದೂರುಗಳು ದಾಖಲಾಗಿರುವ ಕಾರಣ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ ಎಂದೂ ಅವರು ಹೇಳಿದ್ದರು.</p>.ಜುಬೀನ್ ಗರ್ಗ್ ಸಾವು ಪ್ರಕರಣ: ಇವೆಂಟ್ ಮ್ಯಾನೇಜರ್ ವಿರುದ್ಧ ಪ್ರತ್ಯೇಕ ತನಿಖೆ.<h2> ಲುಕ್ಔಟ್ ನೋಟಿಸ್</h2><p>ಮಹಾಂತ ಮತ್ತು ಶರ್ಮಾ ವಿರುದ್ಧ ಇಂಟರ್ಪೋಲ್ ಮೂಲಕ 'ಲುಕ್ಔಟ್ ನೋಟಿಸ್' ಹೊರಡಿಸಲಾಗಿದ್ದು, ಅಕ್ಟೋಬರ್ 6 ರೊಳಗೆ ಸಿಐಡಿ ಮುಂದೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>