<p>ನವದೆಹಲಿ/ ಲಖನೌ (ಪಿಟಿಐ): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಅಖಿಲೇಶ್ ಸಿಂಗ್ ಯಾದವ್ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಅಭಿನಂದಿಸಿವೆ.<br /> <br /> ಅಖಿಲೇಶ್ ಅವರು ಮತದಾರರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾರೆ ಹಾಗೂ ಅನುಭವಗಳಿಂದ ಪಾಠ ಕಲಿಯುತ್ತಾರೆ ಎಂದು ನಂಬಿರುವುದಾಗಿ ಕಾಂಗ್ರೆಸ್ ವಕ್ತಾರ ರಶೀದ್ ಅಲ್ವಿ ದೆಹಲಿಯಲ್ಲಿ ಹೇಳಿದ್ದಾರೆ. <br /> <br /> ಹಿಂದೆ ಎಸ್ಪಿ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅಪರಾಧಿಗಳು ಮೇಲುಗೈ ಸಾಧಿಸಿದ್ದನ್ನು ಅವರು ಉಲ್ಲೇಖಿಸಿದ್ದಾರೆ. ಭ್ರಷ್ಟಾಚಾರ ಮಟ್ಟ ಹಾಕಿ ಜನರ ಆಶೋತ್ತರಗಳಿಗೆ ಯುವ ನಾಯಕ ಸ್ಪಂದಿಸಲಿ ಎಂದು ಬಿಜೆಪಿ ವಕ್ತಾರ ವಿಜಯ್ ಪಾಠಕ್ ಹೇಳಿದ್ದಾರೆ.<br /> <br /> <strong>ಮುಂದುವರಿದ ಹಿಂಸಾಚಾರ<br /> </strong>ಲಖನೌ (ಐಎಎನ್ಎಸ್): ನಿಯೋಜಿತ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರ ಮನವಿ ಮತ್ತು ಎಚ್ಚರಿಕೆಯ ಮಧ್ಯೆಯೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರ ಪ್ರದೇಶದಾದ್ಯಂತ ಹಿಂಸಾಚಾರ ಮುಂದುವರಿಸಿದ್ದಾರೆ. ಹರ್ದೋಯಿ ಜಿಲ್ಲೆಯಲ್ಲಿ ಶನಿವಾರ ಬಿಎಸ್ಪಿ ಕಾರ್ಯಕರ್ತನೊಬ್ಬನನ್ನು ಕೊಂದು ಹಾಕಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ/ ಲಖನೌ (ಪಿಟಿಐ): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಅಖಿಲೇಶ್ ಸಿಂಗ್ ಯಾದವ್ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಅಭಿನಂದಿಸಿವೆ.<br /> <br /> ಅಖಿಲೇಶ್ ಅವರು ಮತದಾರರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾರೆ ಹಾಗೂ ಅನುಭವಗಳಿಂದ ಪಾಠ ಕಲಿಯುತ್ತಾರೆ ಎಂದು ನಂಬಿರುವುದಾಗಿ ಕಾಂಗ್ರೆಸ್ ವಕ್ತಾರ ರಶೀದ್ ಅಲ್ವಿ ದೆಹಲಿಯಲ್ಲಿ ಹೇಳಿದ್ದಾರೆ. <br /> <br /> ಹಿಂದೆ ಎಸ್ಪಿ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅಪರಾಧಿಗಳು ಮೇಲುಗೈ ಸಾಧಿಸಿದ್ದನ್ನು ಅವರು ಉಲ್ಲೇಖಿಸಿದ್ದಾರೆ. ಭ್ರಷ್ಟಾಚಾರ ಮಟ್ಟ ಹಾಕಿ ಜನರ ಆಶೋತ್ತರಗಳಿಗೆ ಯುವ ನಾಯಕ ಸ್ಪಂದಿಸಲಿ ಎಂದು ಬಿಜೆಪಿ ವಕ್ತಾರ ವಿಜಯ್ ಪಾಠಕ್ ಹೇಳಿದ್ದಾರೆ.<br /> <br /> <strong>ಮುಂದುವರಿದ ಹಿಂಸಾಚಾರ<br /> </strong>ಲಖನೌ (ಐಎಎನ್ಎಸ್): ನಿಯೋಜಿತ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರ ಮನವಿ ಮತ್ತು ಎಚ್ಚರಿಕೆಯ ಮಧ್ಯೆಯೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರ ಪ್ರದೇಶದಾದ್ಯಂತ ಹಿಂಸಾಚಾರ ಮುಂದುವರಿಸಿದ್ದಾರೆ. ಹರ್ದೋಯಿ ಜಿಲ್ಲೆಯಲ್ಲಿ ಶನಿವಾರ ಬಿಎಸ್ಪಿ ಕಾರ್ಯಕರ್ತನೊಬ್ಬನನ್ನು ಕೊಂದು ಹಾಕಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>