<p><strong>ಜಮ್ಮು (ಐಎಎನ್ಎಸ್</strong>): ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ವಾಪಸ್ ಪಡೆದ ಉತ್ತರ ಪ್ರದೇಶ ಸರ್ಕಾರಕ್ಕೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಧನ್ಯವಾದ ಸಲ್ಲಿಸಿದ್ದಾರೆ.<br /> <br /> ‘ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ವಾಪಸ್ ಪಡೆಯಲು ಸಹಕರಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಧನ್ಯವಾದಗಳು’ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.<br /> <br /> ಭಾರತದ ವಿರುದ್ಧ ಜಯಗಳಿಸಿದ ಪಾಕಿಸ್ತಾನ ಕ್ರಿಕೆಟ್ ತಂಡದ ಪರವಾಗಿ ವಿಜಯೋತ್ಸವ ಆಚರಿಸಿದ್ದ ಕಾರಣಕ್ಕಾಗಿ ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ಉತ್ತರಪ್ರದೇಶ ಸರ್ಕಾರ ದೇಶ ದ್ರೋಹದ ಪ್ರಕರಣ ದಾಖಲಿಸಿತ್ತು. ಇದನ್ನು ಖಂಡಿಸಿ ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ನಡೆದಿತ್ತು. <br /> <br /> ಗುರುವಾರ ಒಮರ್ ಅಬ್ದುಲ್ಲಾ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯುವಂತೆ ಅಖಿಲೇಶ್ ಯಾದವ್ ಅವರನ್ನು ಕೋರಿದ್ದರು.<br /> <br /> ‘ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಬಾರದಿತ್ತು. ಅನುಚಿತ ವರ್ತನೆ ತೋರಿದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರಹಾಕುವ ಹಕ್ಕು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಇದೆ ಎಂದೂ ಒಮರ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು (ಐಎಎನ್ಎಸ್</strong>): ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ವಾಪಸ್ ಪಡೆದ ಉತ್ತರ ಪ್ರದೇಶ ಸರ್ಕಾರಕ್ಕೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಧನ್ಯವಾದ ಸಲ್ಲಿಸಿದ್ದಾರೆ.<br /> <br /> ‘ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ವಾಪಸ್ ಪಡೆಯಲು ಸಹಕರಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಧನ್ಯವಾದಗಳು’ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.<br /> <br /> ಭಾರತದ ವಿರುದ್ಧ ಜಯಗಳಿಸಿದ ಪಾಕಿಸ್ತಾನ ಕ್ರಿಕೆಟ್ ತಂಡದ ಪರವಾಗಿ ವಿಜಯೋತ್ಸವ ಆಚರಿಸಿದ್ದ ಕಾರಣಕ್ಕಾಗಿ ಕಾಶ್ಮೀರದ 67 ವಿದ್ಯಾರ್ಥಿಗಳ ವಿರುದ್ಧ ಉತ್ತರಪ್ರದೇಶ ಸರ್ಕಾರ ದೇಶ ದ್ರೋಹದ ಪ್ರಕರಣ ದಾಖಲಿಸಿತ್ತು. ಇದನ್ನು ಖಂಡಿಸಿ ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ನಡೆದಿತ್ತು. <br /> <br /> ಗುರುವಾರ ಒಮರ್ ಅಬ್ದುಲ್ಲಾ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯುವಂತೆ ಅಖಿಲೇಶ್ ಯಾದವ್ ಅವರನ್ನು ಕೋರಿದ್ದರು.<br /> <br /> ‘ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಬಾರದಿತ್ತು. ಅನುಚಿತ ವರ್ತನೆ ತೋರಿದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರಹಾಕುವ ಹಕ್ಕು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಇದೆ ಎಂದೂ ಒಮರ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>