<p><strong>ಬಾಲಸೋರ್ (ಒಡಿಶಾ):</strong> ಈಗಾಗಲೇ ಸೇನಾ ಪಡೆಗೆ ಸೇರ್ಪಡೆಯಾಗಿರುವ ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅಗ್ನಿ-2 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿ ನಡೆಯಿತು.<br /> <br /> ನೆಲದಿಂದ ನೆಲಕ್ಕೆ 2000 ಕಿ.ಮೀ. ದೂರದವರೆಗೂ ಚಿಮ್ಮಬಲ್ಲ ಈ ಕ್ಷಿಪಣಿಯ ಪರೀಕ್ಷೆಯು ಒಡಿಶಾ ಕಡಲ ತೀರದ ವ್ಹೀಲರ್ ದ್ವೀಪದಲ್ಲಿ ನಡೆಯಿತು. ಇಲ್ಲಿನ ಸಮಗ್ರ ಪರೀಕ್ಷಾ ವಲಯದ (ಐಟಿಆರ್) 4ನೇ ಉಡಾವಣಾ ಸಂಕೀರ್ಣದಿಂದ ಬೆಳಿಗ್ಗೆ 8.48ಕ್ಕೆ ಚಿಮ್ಮಿದ ಕ್ಷಿಪಣಿ ಯಶಸ್ವಿಯಾಗಿ ಗುರಿ ತಲುಪಿತು ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.<br /> <br /> ಎಲ್ಲ ಅಪೇಕ್ಷಿತ ಮಾನದಂಡಗಳಿಗೆ ಅನುಗುಣವಾಗಿ ಕ್ಷಿಪಣಿಯ ಪರೀಕ್ಷೆ ಸಂಪೂರ್ಣ ಯಶಸ್ವಿಯಾಯಿತು ಎಂದು ಐಟಿಆರ್ ನಿರ್ದೇಶಕ ಎಂ.ವಿ.ಕೆ.ವಿ. ಪ್ರಸಾದ್ ಹರ್ಷ ವ್ಯಕ್ತಪಡಿಸಿದ್ದಾರೆ,ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ನೆರವಿನೊಂದಿಗೆ ಸೇನಾಪಡೆಯ ಸ್ಟ್ರಾಟಜಿಕ್ ಫೋರ್ಸ್ಸ್ ಕಮಾಂಡ್ (ಎಸ್ಎಫ್ಸಿ) ಈ ಪರೀಕ್ಷೆ ನಡೆಸಿತು. ಸೇನಾ ಪಡೆಗಳ ತರಬೇತಿಯ ಅಂಗವಾಗಿ ಈ ಪರೀಕ್ಷೆ ಏರ್ಪಡಿಸಲಾಗಿತ್ತು ಎಂದು ಡಿಆರ್ಡಿಒ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.<br /> <br /> ಗುರಿಯತ್ತ ಚಿಮ್ಮಿದ ಕ್ಷಿಪಣಿಯ ಸಂಪೂರ್ಣ ಪಥವನ್ನು ರೇಡಾರ್, ಟೆಲಿಮೆಟ್ರಿ ವೀಕ್ಷಣಾ ಸ್ಟೇಷನ್ಗಳು, ಎಲೆಕ್ಟ್ರೊ- ಆಪ್ಟಿಕ್ ಉಪಕರಣಗಳು ಹಾಗೂ ನೌಕಾಪಡೆಯ ಹಡಗುಗಳ ನೆರವಿನಿಂದ ದಾಖಲಿಸಿಕೊಳ್ಳಲಾಯಿತು. <br /> ಎರಡು ಹಂತಗಳಿಂದ ಕೂಡಿದ ದ್ರವ ರಾಕೆಟ್ ಇಂಧನದಿಂದ ನೂಕು ಬಲ ಪಡೆಯುವ ಈ ಕ್ಷಿಪಣಿಯು 20 ಮೀಟರ್ ಉದ್ದ ಹಾಗೂ 17 ಟನ್ ತೂಕ ಹೊಂದಿದೆ. ಗರಿಷ್ಠ 1000 ಕಿ.ಮೀ. ತೂಕವನ್ನು ಗುರಿಯತ್ತ ಕೊಂಡೊಯ್ಯುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಲಸೋರ್ (ಒಡಿಶಾ):</strong> ಈಗಾಗಲೇ ಸೇನಾ ಪಡೆಗೆ ಸೇರ್ಪಡೆಯಾಗಿರುವ ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅಗ್ನಿ-2 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿ ನಡೆಯಿತು.<br /> <br /> ನೆಲದಿಂದ ನೆಲಕ್ಕೆ 2000 ಕಿ.ಮೀ. ದೂರದವರೆಗೂ ಚಿಮ್ಮಬಲ್ಲ ಈ ಕ್ಷಿಪಣಿಯ ಪರೀಕ್ಷೆಯು ಒಡಿಶಾ ಕಡಲ ತೀರದ ವ್ಹೀಲರ್ ದ್ವೀಪದಲ್ಲಿ ನಡೆಯಿತು. ಇಲ್ಲಿನ ಸಮಗ್ರ ಪರೀಕ್ಷಾ ವಲಯದ (ಐಟಿಆರ್) 4ನೇ ಉಡಾವಣಾ ಸಂಕೀರ್ಣದಿಂದ ಬೆಳಿಗ್ಗೆ 8.48ಕ್ಕೆ ಚಿಮ್ಮಿದ ಕ್ಷಿಪಣಿ ಯಶಸ್ವಿಯಾಗಿ ಗುರಿ ತಲುಪಿತು ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.<br /> <br /> ಎಲ್ಲ ಅಪೇಕ್ಷಿತ ಮಾನದಂಡಗಳಿಗೆ ಅನುಗುಣವಾಗಿ ಕ್ಷಿಪಣಿಯ ಪರೀಕ್ಷೆ ಸಂಪೂರ್ಣ ಯಶಸ್ವಿಯಾಯಿತು ಎಂದು ಐಟಿಆರ್ ನಿರ್ದೇಶಕ ಎಂ.ವಿ.ಕೆ.ವಿ. ಪ್ರಸಾದ್ ಹರ್ಷ ವ್ಯಕ್ತಪಡಿಸಿದ್ದಾರೆ,ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ನೆರವಿನೊಂದಿಗೆ ಸೇನಾಪಡೆಯ ಸ್ಟ್ರಾಟಜಿಕ್ ಫೋರ್ಸ್ಸ್ ಕಮಾಂಡ್ (ಎಸ್ಎಫ್ಸಿ) ಈ ಪರೀಕ್ಷೆ ನಡೆಸಿತು. ಸೇನಾ ಪಡೆಗಳ ತರಬೇತಿಯ ಅಂಗವಾಗಿ ಈ ಪರೀಕ್ಷೆ ಏರ್ಪಡಿಸಲಾಗಿತ್ತು ಎಂದು ಡಿಆರ್ಡಿಒ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.<br /> <br /> ಗುರಿಯತ್ತ ಚಿಮ್ಮಿದ ಕ್ಷಿಪಣಿಯ ಸಂಪೂರ್ಣ ಪಥವನ್ನು ರೇಡಾರ್, ಟೆಲಿಮೆಟ್ರಿ ವೀಕ್ಷಣಾ ಸ್ಟೇಷನ್ಗಳು, ಎಲೆಕ್ಟ್ರೊ- ಆಪ್ಟಿಕ್ ಉಪಕರಣಗಳು ಹಾಗೂ ನೌಕಾಪಡೆಯ ಹಡಗುಗಳ ನೆರವಿನಿಂದ ದಾಖಲಿಸಿಕೊಳ್ಳಲಾಯಿತು. <br /> ಎರಡು ಹಂತಗಳಿಂದ ಕೂಡಿದ ದ್ರವ ರಾಕೆಟ್ ಇಂಧನದಿಂದ ನೂಕು ಬಲ ಪಡೆಯುವ ಈ ಕ್ಷಿಪಣಿಯು 20 ಮೀಟರ್ ಉದ್ದ ಹಾಗೂ 17 ಟನ್ ತೂಕ ಹೊಂದಿದೆ. ಗರಿಷ್ಠ 1000 ಕಿ.ಮೀ. ತೂಕವನ್ನು ಗುರಿಯತ್ತ ಕೊಂಡೊಯ್ಯುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>