ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿಂತಿದ್ದ ಭುವನೇಶ್ವರ್ ರಾಜಧಾನಿ ಎಕ್ಸ್ಪ್ರಸ್ ರೈಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಘಟನೆಯಲ್ಲಿ ಆರು ಬೋಗಿಗಳು ಸುಟ್ಟು ಭಸ್ಮವಾಗಿದೆ.
ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ರೈಲು ಬೋಗಿಯೊಳಗೆ ಪ್ರಯಾಣಿಕರು ಇರಲಿಲ್ಲ ಹೀಗಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.