<p>ನವದೆಹಲಿ, (ಪಿಟಿಐ): ಉದ್ದೇಶಿತ ಅಣು ಸ್ಥಾವರಗಳ ನಿರ್ಮಾಣಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ನಾಗರಿಕ ಸಮಿತಿ ಶುಕ್ರವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. <br /> <br /> ಮಾಜಿ ಆಡಳಿತಗಾರರು, ವಿಜ್ಞಾನಿಗಳು, ನೌಕಾದಳದ ನಿವೃತ್ತ ಮುಖ್ಯಸ್ಥರು ಹಾಗೂ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳನ್ನು ಒಳಗೊಂಡ ಸಮಿತಿ ಜಂಟಿಯಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. <br /> <br /> ಸ್ಥಾವರಗಳ ಸುರಕ್ಷಾ ಕ್ರಮಗಳ ಪುನರ್ ಪರಿಶೀಲನೆ, ಅಣುಶಕ್ತಿಯಿಂದಾಗುವ ಅನಾಹುತಗಳ ಅಧ್ಯಯನ ಪರಾಮರ್ಶೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿದೆ. ಅಣು ಸ್ಥಾವರಗಳ ಸ್ಥಾಪನೆಗೆ ಪರವಾನಗಿ, ಅನುಮತಿ ರದ್ದು ಅಧಿಕಾರದಂತಹ ಕಾರ್ಯಗಳು ಸಮಿತಿಯ ಮೇಲುಸ್ತುವಾರಿಯಲ್ಲಿ ನಡೆಯಬೇಕು ಎಂದು ಕೋರಲಾಗಿದೆ.<br /> <br /> ಮಾಜಿ ಸಂಪುಟ ಕಾರ್ಯದರ್ಶಿ ಟಿ.ಎಸ್.ಆರ್ ಸುಬ್ರಮಣಿಯನ್, ನೌಕಾದಳ ನಿವೃತ್ತ ಮುಖ್ಯಸ್ಥ ಎಲ್.ರಾಮದಾಸ್, ನಿವೃತ್ತ ಮುಖ್ಯ ಚುನಾವಣಾ ಅಧಿಕಾರಿ ಎನ್.ಗೋಪಾಲಸ್ವಾಮಿ, ಪ್ರಧಾನ ಮಂತ್ರಿಗಳ ಮಾಜಿ ಕಾರ್ಯದರ್ಶಿ ಕೆ.ಆರ್.ವೇಣುಗೋಪಾಲ ಮತ್ತು ಅಣು ವಿಜ್ಞಾನಿ ಪಿ.ಎಂ.ಭಾರ್ಗವ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, (ಪಿಟಿಐ): ಉದ್ದೇಶಿತ ಅಣು ಸ್ಥಾವರಗಳ ನಿರ್ಮಾಣಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ನಾಗರಿಕ ಸಮಿತಿ ಶುಕ್ರವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. <br /> <br /> ಮಾಜಿ ಆಡಳಿತಗಾರರು, ವಿಜ್ಞಾನಿಗಳು, ನೌಕಾದಳದ ನಿವೃತ್ತ ಮುಖ್ಯಸ್ಥರು ಹಾಗೂ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳನ್ನು ಒಳಗೊಂಡ ಸಮಿತಿ ಜಂಟಿಯಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. <br /> <br /> ಸ್ಥಾವರಗಳ ಸುರಕ್ಷಾ ಕ್ರಮಗಳ ಪುನರ್ ಪರಿಶೀಲನೆ, ಅಣುಶಕ್ತಿಯಿಂದಾಗುವ ಅನಾಹುತಗಳ ಅಧ್ಯಯನ ಪರಾಮರ್ಶೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿದೆ. ಅಣು ಸ್ಥಾವರಗಳ ಸ್ಥಾಪನೆಗೆ ಪರವಾನಗಿ, ಅನುಮತಿ ರದ್ದು ಅಧಿಕಾರದಂತಹ ಕಾರ್ಯಗಳು ಸಮಿತಿಯ ಮೇಲುಸ್ತುವಾರಿಯಲ್ಲಿ ನಡೆಯಬೇಕು ಎಂದು ಕೋರಲಾಗಿದೆ.<br /> <br /> ಮಾಜಿ ಸಂಪುಟ ಕಾರ್ಯದರ್ಶಿ ಟಿ.ಎಸ್.ಆರ್ ಸುಬ್ರಮಣಿಯನ್, ನೌಕಾದಳ ನಿವೃತ್ತ ಮುಖ್ಯಸ್ಥ ಎಲ್.ರಾಮದಾಸ್, ನಿವೃತ್ತ ಮುಖ್ಯ ಚುನಾವಣಾ ಅಧಿಕಾರಿ ಎನ್.ಗೋಪಾಲಸ್ವಾಮಿ, ಪ್ರಧಾನ ಮಂತ್ರಿಗಳ ಮಾಜಿ ಕಾರ್ಯದರ್ಶಿ ಕೆ.ಆರ್.ವೇಣುಗೋಪಾಲ ಮತ್ತು ಅಣು ವಿಜ್ಞಾನಿ ಪಿ.ಎಂ.ಭಾರ್ಗವ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>