<p><strong>ನವದೆಹಲಿ (ಪಿಟಿಐ):</strong> 2ಜಿ ಹಗರಣ ಕುರಿತಂತೆ ಅನಿಲ್ ಅಂಬಾನಿ ನೇತೃತ್ವದ ಆರ್ಎಡಿಎಜಿ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದ್ದು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ಸಿಬಿಐ ಸ್ಪಷ್ಟನೆ ನೀಡಿದೆ. <br /> <br /> ಸ್ಪೆಕ್ಟ್ರಂ ಪರವಾನಗಿ ಪಡೆದ ಸ್ವಾನ್ ಟೆಲಿಕಾಂಗೆ ಸಂಬಂಧಿಸಿದಂತೆ ವಿವಿಧ ಕಂಪೆನಿಗಳನ್ನು ಹುಟ್ಟು ಹಾಕಿ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎನ್ನುವ ಮೂಲಕ ಸಿಬಿಐ ಅನಿಲ್ ಅಂಬಾನಿಗೆ `ಕ್ಲೀನ್ ಚಿಟ್~ ನೀಡಿದೆ ಎಂಬ ವರದಿಯನ್ನು ಸಿಬಿಐ ವಕ್ತಾರರು ತಳ್ಳಿಹಾಕಿದ್ದಾರೆ.<br /> <br /> <strong>ನಾಗಾರ್ಜುನ ವಿರುದ್ಧ ಪ್ರಕರಣ<br /> ಹೈದರಾಬಾದ್(ಐಎಎನ್ಎಸ್): </strong>ಪತ್ರಕರ್ತೆಯನ್ನು ನಿಂದಿಸಿ ಆಕೆಗೆ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ತೆಲುಗು ಚಿತ್ರ ನಟ ಅಕ್ಕಿನೇನಿ ನಾಗಾರ್ಜುನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.<br /> <br /> ಹವ್ಯಾಸಿ ಪತ್ರಕರ್ತೆ ಸುನಿತಾ ತಾವು ಕೆಲ ತಿಂಗಳ ಹಿಂದೆ ನಾಗಾರ್ಜುನ ಬಗ್ಗೆ ಬರೆದ ಲೇಖನಕ್ಕೆ ಸಂಬಂಧಪಟ್ಟಂತೆ ಅನ್ನಪೂರ್ಣ ಸ್ಟುಡಿಯೊದಲ್ಲಿ ತಮ್ಮನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2ಜಿ ಹಗರಣ ಕುರಿತಂತೆ ಅನಿಲ್ ಅಂಬಾನಿ ನೇತೃತ್ವದ ಆರ್ಎಡಿಎಜಿ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದ್ದು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ಸಿಬಿಐ ಸ್ಪಷ್ಟನೆ ನೀಡಿದೆ. <br /> <br /> ಸ್ಪೆಕ್ಟ್ರಂ ಪರವಾನಗಿ ಪಡೆದ ಸ್ವಾನ್ ಟೆಲಿಕಾಂಗೆ ಸಂಬಂಧಿಸಿದಂತೆ ವಿವಿಧ ಕಂಪೆನಿಗಳನ್ನು ಹುಟ್ಟು ಹಾಕಿ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎನ್ನುವ ಮೂಲಕ ಸಿಬಿಐ ಅನಿಲ್ ಅಂಬಾನಿಗೆ `ಕ್ಲೀನ್ ಚಿಟ್~ ನೀಡಿದೆ ಎಂಬ ವರದಿಯನ್ನು ಸಿಬಿಐ ವಕ್ತಾರರು ತಳ್ಳಿಹಾಕಿದ್ದಾರೆ.<br /> <br /> <strong>ನಾಗಾರ್ಜುನ ವಿರುದ್ಧ ಪ್ರಕರಣ<br /> ಹೈದರಾಬಾದ್(ಐಎಎನ್ಎಸ್): </strong>ಪತ್ರಕರ್ತೆಯನ್ನು ನಿಂದಿಸಿ ಆಕೆಗೆ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ತೆಲುಗು ಚಿತ್ರ ನಟ ಅಕ್ಕಿನೇನಿ ನಾಗಾರ್ಜುನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.<br /> <br /> ಹವ್ಯಾಸಿ ಪತ್ರಕರ್ತೆ ಸುನಿತಾ ತಾವು ಕೆಲ ತಿಂಗಳ ಹಿಂದೆ ನಾಗಾರ್ಜುನ ಬಗ್ಗೆ ಬರೆದ ಲೇಖನಕ್ಕೆ ಸಂಬಂಧಪಟ್ಟಂತೆ ಅನ್ನಪೂರ್ಣ ಸ್ಟುಡಿಯೊದಲ್ಲಿ ತಮ್ಮನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>