<p><span style="font-size: 26px;"><strong>ಭುವನೇಶ್ವರ (ಪಿಟಿಐ): </strong>ಬಂಗಾಳಕೊಲ್ಲಿಯಲ್ಲಿ ಬುಧವಾರ ಉಂಟಾಗಿರುವ ವಾಯಭಾರ ಕುಸಿತವು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಆಂಧ್ರ, ಒಡಿಶಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.</span></p>.<p>‘ಹುಡ್ಹುಡ್’ ಎಂದು ಹೆಸರಿಸಲಾದ ಈ ಚಂಡಮಾರುತ ಅಕ್ಟೋಬರ್ 12ರಂದು ವಿಶಾಖಪಟ್ಟಣಂ, ಕಳಿಂಗಪಟ್ಟಣಂ ಸೇರಿದಂತೆ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು ಕಟ್ಟೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.<br /> <br /> ಗೋಪಾಲಪುರ ಕಡಲ ದಂಡೆಯಿಂದ 1170 ಕೀ.ಮೀ ದೂರದಲ್ಲಿರುವ ಉತ್ತರ ಅಂಡಮಾನ್ ಸಾಗರದಲ್ಲಿ ವಾಯುಭಾರ ಕುಸಿತ ಕೇಂದ್ರೀಕೃತವಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ದಾಟುತ್ತಿದ್ದಂತೆ ಇದು ಗಂಟೆಗೆ 100ರಿಂದ 140 ಕೀ.ಮೀ ವೇಗದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.<br /> <br /> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /> <br /> ಕಳೆದ ವರ್ಷ ವಿನಾಶಕಾರಿ ‘ಫೈಲಿನ್’ ಚಂಡಮಾರುತ ಒಡಿಶಾ ಮತ್ತು ಆಂಧ್ರ ಕರಾವಳಿಯ ಸಾವಿರಾರು ಜನರನ್ನು ಬೀದಿಪಾಲು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಭುವನೇಶ್ವರ (ಪಿಟಿಐ): </strong>ಬಂಗಾಳಕೊಲ್ಲಿಯಲ್ಲಿ ಬುಧವಾರ ಉಂಟಾಗಿರುವ ವಾಯಭಾರ ಕುಸಿತವು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಆಂಧ್ರ, ಒಡಿಶಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.</span></p>.<p>‘ಹುಡ್ಹುಡ್’ ಎಂದು ಹೆಸರಿಸಲಾದ ಈ ಚಂಡಮಾರುತ ಅಕ್ಟೋಬರ್ 12ರಂದು ವಿಶಾಖಪಟ್ಟಣಂ, ಕಳಿಂಗಪಟ್ಟಣಂ ಸೇರಿದಂತೆ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು ಕಟ್ಟೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.<br /> <br /> ಗೋಪಾಲಪುರ ಕಡಲ ದಂಡೆಯಿಂದ 1170 ಕೀ.ಮೀ ದೂರದಲ್ಲಿರುವ ಉತ್ತರ ಅಂಡಮಾನ್ ಸಾಗರದಲ್ಲಿ ವಾಯುಭಾರ ಕುಸಿತ ಕೇಂದ್ರೀಕೃತವಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ದಾಟುತ್ತಿದ್ದಂತೆ ಇದು ಗಂಟೆಗೆ 100ರಿಂದ 140 ಕೀ.ಮೀ ವೇಗದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.<br /> <br /> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /> <br /> ಕಳೆದ ವರ್ಷ ವಿನಾಶಕಾರಿ ‘ಫೈಲಿನ್’ ಚಂಡಮಾರುತ ಒಡಿಶಾ ಮತ್ತು ಆಂಧ್ರ ಕರಾವಳಿಯ ಸಾವಿರಾರು ಜನರನ್ನು ಬೀದಿಪಾಲು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>