ಇನ್ನು ಮುಂದೆ ನಾನು ಅವಹೇಳನಕಾರಿ ಹಾಗೂ ವ್ಯಕ್ತಿಗತ ವಾಗ್ದಾಳಿಗಳನ್ನು ನಡೆಸುವುದಿಲ್ಲ ಎಂದು ಚುನಾವಣಾ ಆಯೋಗಕ್ಕೆ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಮೇಲಿದ್ದ ನಿಷೇಧವನ್ನು ತೆರವು ಗೊಳಿಸಲಾಗಿದೆ ಎಂದು ಚುನಾವನಾ ಆಯೋಗ ತಿಳಿಸಿದೆ.
ಸಮಾಜವಾದಿ ಪಕ್ಷದ ಸಚಿವ ಅಜಂಖಾನ್ ಅವರ ಮೇಲಿನ ನಿಷೇಧ ಮುಂದುವರೆಯಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಅಮಿತ್ ಶಾ ಹಾಗೂ ಅಜಂಖಾನ್ ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರದ ವೇಳೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆಯೋಗ ಇವರ ಮೇಲೆ ಚುನಾವಣಾ ಪ್ರಚಾರ ನಡೆಸದಿರುವಂತೆ ನಿಷೇಧ ಹೇರಿತ್ತು.