<p><strong>ಕೊಚ್ಚಿ/ ತಿರುವನಂತಪುರ: </strong>ಇಲ್ಲಿನ ಪೆರಂಬಾವೂರಿನಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಜಿಶಾ (30) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀರುಲ್ ಇಸ್ಲಾಂಗೆ ಎರ್ನಾಕುಲಂ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ.</p>.<p>ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 376ಎ (ಹಲ್ಲೆಯಿಂದಾಗಿ ಮೃತಪಡುವುದು), 376 (ಅತ್ಯಾಚಾರ), 449 (ಅತಿಕ್ರಮ ಪ್ರವೇಶ) ಮತ್ತು 342 (ಅಕ್ರಮ ಬಂಧನ) ಅಡಿ ಅಪರಾಧಗಳಿಗಾಗಿ ಕ್ರಮವಾಗಿ ಜೀವಾವಧಿ ಶಿಕ್ಷೆ, 10 ವರ್ಷಗಳ ಕಠಿಣ ಶಿಕ್ಷೆ, 7 ವರ್ಷಗಳು ಮತ್ತು 1 ವರ್ಷದ ಶಿಕ್ಷೆಯನ್ನೂ ಕೋರ್ಟ್ ನೀಡಿದೆ.</p>.<p>ಈ ಎಲ್ಲ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ಕೋರ್ಟ್ ಹೇಳಿದ್ದು, ಒಟ್ಟು ₹ 1 ಲಕ್ಷ ದಂಡ ಪಾವತಿಸಲು ಆದೇಶಿಸಿದೆ.</p>.<p>ಅಸ್ಸಾಂ ಮೂಲದ ವಲಸಿಗ ಕಾರ್ಮಿಕ ಅಮೀರುಲ್ ಇಸ್ಲಾಂ ತಪ್ಪಿತಸ್ಥ ಎಂದು ಎರ್ನಾಕುಲಂ ಪ್ರಧಾನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎನ್.ಅನಿಲ್ಕುಮಾರ್ ಮಂಗಳವಾರ ತಿಳಿಸಿದ್ದರು. ಆದರೆ, ಶಿಕ್ಷೆಯ ಪ್ರಮಾಣ ಪ್ರಕಟಿಸಿರಲಿಲ್ಲ.</p>.<p>‘ಅಮೀರುಲ್ಗೆ ತನ್ನ ಮಾತೃಭಾಷೆ ಬಿಟ್ಟರೆ ಬೇರೆ ಭಾಷೆ ತಿಳಿಯುವುದಿಲ್ಲ. ಪ್ರಕರಣದ ತನಿಖಾಧಿಕಾರಿಗಳು ಅಮೀರುಲ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಆದಕಾರಣ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ಅಮೀರುಲ್ ಪರ ವಕೀಲ ಬಿ.ಎ.ಆಲೂರ್ ಅವರು ಬುಧವಾರ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಧೀಶರು ಅರ್ಜಿ ವಜಾಗೊಳಿಸಿದರು.</p>.<p>‘ನವದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣದ ರೀತಿಯಲ್ಲಿಯೇ ಜಿಶಾ ಮೇಲೆ ಅತ್ಯಂತ ಬರ್ಬರವಾಗಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡಬೇಕು’ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.</p>.<p>‘ಅಮೀರುಲ್ ತಪ್ಪು ಮಾಡಿಲ್ಲ. ಅವನನ್ನು ಪ್ರಕರಣದಲ್ಲಿ ಸಿಕ್ಕಿಸಲಾಗಿದೆ. ಅಪರಾಧ ನಡೆದಿರುವುದಕ್ಕೆ ಯಾವುದೇ ಪ್ರತ್ಯಕ್ಷ ಸಾಕ್ಷ್ಯಗಳು ಇಲ್ಲ. ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ಗಲ್ಲುಶಿಕ್ಷೆ ನೀಡುವಂತಿಲ್ಲ’ ಎಂದು ಅಮೀರುಲ್ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ವಿವಿಧ ಆದೇಶಗಳನ್ನು ಉದಾಹರಿಸಿ ವಾದ ಮಂಡಿಸಿದರು.</p>.<p>ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ಅಮೀರುಲ್ ಇಸ್ಲಾಂಗೆ ಗಲ್ಲುಶಿಕ್ಷೆ ಘೋಷಿಸಿದರು. ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ವಕೀಲ ಬಿ.ಎ.ಆಲೂರ್ ಅವರು ಹೇಳಿದ್ದಾರೆ.</p>.<p><strong>ತಾಯಿ ಸ್ವಾಗತ:</strong> ಜಿಶಾ ತಾಯಿ ರಾಜೇಶ್ವರಿ ಅವರು ತೀರ್ಪನ್ನು ಸ್ವಾಗತಿಸಿದ್ದು, ಕೋರ್ಟ್ಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.</p>.<p><strong>ಘಟನೆ ವಿವರ:</strong> ಅತ್ಯಂತ ಕ್ರೂರವಾಗಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದ್ದ ಜಿಶಾ ಮೃತದೇಹ 2016ರ ಏಪ್ರಿಲ್ 28ರಲ್ಲಿ ಅವರ ಮನೆಯ ಕೊಠಡಿಯಲ್ಲಿ ಪತ್ತೆಯಾಗಿತ್ತು. ಮೃತದೇಹದ ಮೇಲೆ 38 ಗಾಯದ ಗುರುತುಗಳು ಪತ್ತೆಯಾಗಿದ್ದವು. ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು.</p>.<p>ಕೇರಳ ಎಲ್ಡಿಎಫ್ ನೇತೃತ್ವದ ಸರ್ಕಾರ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಸಂಧ್ಯಾ ನಾಯಕತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು.</p>.<p>*<br /> ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸರ್ಕಾರದ ನಿಲುವನ್ನು ಕೋರ್ಟ್ ಎತ್ತಿಹಿಡಿದಿದೆ.<br /> <em><strong>-ಪಿಣರಾಯಿ ವಿಜಯನ್, ಕೇರಳ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ/ ತಿರುವನಂತಪುರ: </strong>ಇಲ್ಲಿನ ಪೆರಂಬಾವೂರಿನಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಜಿಶಾ (30) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀರುಲ್ ಇಸ್ಲಾಂಗೆ ಎರ್ನಾಕುಲಂ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ.</p>.<p>ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 376ಎ (ಹಲ್ಲೆಯಿಂದಾಗಿ ಮೃತಪಡುವುದು), 376 (ಅತ್ಯಾಚಾರ), 449 (ಅತಿಕ್ರಮ ಪ್ರವೇಶ) ಮತ್ತು 342 (ಅಕ್ರಮ ಬಂಧನ) ಅಡಿ ಅಪರಾಧಗಳಿಗಾಗಿ ಕ್ರಮವಾಗಿ ಜೀವಾವಧಿ ಶಿಕ್ಷೆ, 10 ವರ್ಷಗಳ ಕಠಿಣ ಶಿಕ್ಷೆ, 7 ವರ್ಷಗಳು ಮತ್ತು 1 ವರ್ಷದ ಶಿಕ್ಷೆಯನ್ನೂ ಕೋರ್ಟ್ ನೀಡಿದೆ.</p>.<p>ಈ ಎಲ್ಲ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ಕೋರ್ಟ್ ಹೇಳಿದ್ದು, ಒಟ್ಟು ₹ 1 ಲಕ್ಷ ದಂಡ ಪಾವತಿಸಲು ಆದೇಶಿಸಿದೆ.</p>.<p>ಅಸ್ಸಾಂ ಮೂಲದ ವಲಸಿಗ ಕಾರ್ಮಿಕ ಅಮೀರುಲ್ ಇಸ್ಲಾಂ ತಪ್ಪಿತಸ್ಥ ಎಂದು ಎರ್ನಾಕುಲಂ ಪ್ರಧಾನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎನ್.ಅನಿಲ್ಕುಮಾರ್ ಮಂಗಳವಾರ ತಿಳಿಸಿದ್ದರು. ಆದರೆ, ಶಿಕ್ಷೆಯ ಪ್ರಮಾಣ ಪ್ರಕಟಿಸಿರಲಿಲ್ಲ.</p>.<p>‘ಅಮೀರುಲ್ಗೆ ತನ್ನ ಮಾತೃಭಾಷೆ ಬಿಟ್ಟರೆ ಬೇರೆ ಭಾಷೆ ತಿಳಿಯುವುದಿಲ್ಲ. ಪ್ರಕರಣದ ತನಿಖಾಧಿಕಾರಿಗಳು ಅಮೀರುಲ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಆದಕಾರಣ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ಅಮೀರುಲ್ ಪರ ವಕೀಲ ಬಿ.ಎ.ಆಲೂರ್ ಅವರು ಬುಧವಾರ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಧೀಶರು ಅರ್ಜಿ ವಜಾಗೊಳಿಸಿದರು.</p>.<p>‘ನವದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣದ ರೀತಿಯಲ್ಲಿಯೇ ಜಿಶಾ ಮೇಲೆ ಅತ್ಯಂತ ಬರ್ಬರವಾಗಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡಬೇಕು’ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.</p>.<p>‘ಅಮೀರುಲ್ ತಪ್ಪು ಮಾಡಿಲ್ಲ. ಅವನನ್ನು ಪ್ರಕರಣದಲ್ಲಿ ಸಿಕ್ಕಿಸಲಾಗಿದೆ. ಅಪರಾಧ ನಡೆದಿರುವುದಕ್ಕೆ ಯಾವುದೇ ಪ್ರತ್ಯಕ್ಷ ಸಾಕ್ಷ್ಯಗಳು ಇಲ್ಲ. ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ಗಲ್ಲುಶಿಕ್ಷೆ ನೀಡುವಂತಿಲ್ಲ’ ಎಂದು ಅಮೀರುಲ್ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ವಿವಿಧ ಆದೇಶಗಳನ್ನು ಉದಾಹರಿಸಿ ವಾದ ಮಂಡಿಸಿದರು.</p>.<p>ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ಅಮೀರುಲ್ ಇಸ್ಲಾಂಗೆ ಗಲ್ಲುಶಿಕ್ಷೆ ಘೋಷಿಸಿದರು. ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ವಕೀಲ ಬಿ.ಎ.ಆಲೂರ್ ಅವರು ಹೇಳಿದ್ದಾರೆ.</p>.<p><strong>ತಾಯಿ ಸ್ವಾಗತ:</strong> ಜಿಶಾ ತಾಯಿ ರಾಜೇಶ್ವರಿ ಅವರು ತೀರ್ಪನ್ನು ಸ್ವಾಗತಿಸಿದ್ದು, ಕೋರ್ಟ್ಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.</p>.<p><strong>ಘಟನೆ ವಿವರ:</strong> ಅತ್ಯಂತ ಕ್ರೂರವಾಗಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದ್ದ ಜಿಶಾ ಮೃತದೇಹ 2016ರ ಏಪ್ರಿಲ್ 28ರಲ್ಲಿ ಅವರ ಮನೆಯ ಕೊಠಡಿಯಲ್ಲಿ ಪತ್ತೆಯಾಗಿತ್ತು. ಮೃತದೇಹದ ಮೇಲೆ 38 ಗಾಯದ ಗುರುತುಗಳು ಪತ್ತೆಯಾಗಿದ್ದವು. ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು.</p>.<p>ಕೇರಳ ಎಲ್ಡಿಎಫ್ ನೇತೃತ್ವದ ಸರ್ಕಾರ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಸಂಧ್ಯಾ ನಾಯಕತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು.</p>.<p>*<br /> ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸರ್ಕಾರದ ನಿಲುವನ್ನು ಕೋರ್ಟ್ ಎತ್ತಿಹಿಡಿದಿದೆ.<br /> <em><strong>-ಪಿಣರಾಯಿ ವಿಜಯನ್, ಕೇರಳ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>