<p><strong>ನವದೆಹಲಿ (ಪಿಟಿಐ): </strong>ಕೆ. ರೆಹಮಾನ ಖಾನ್ ಅವರ ನಿವೃತ್ತಿಯ ನಂತರ ತೆರವಾಗಿರುವ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಜೆ. ಕುರಿಯನ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆ.<br /> <br /> ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಅರುಣ್ ಜೈಟ್ಲಿ ಕುರಿಯನ್ ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವ ಕಾರಣ ಅವರ ಆಯ್ಕೆಯ ಹಾದಿ ಸುಗಮವಾದಂತಾಗಿದೆ. ಈ ತಿಂಗಳ 21ರಂದು ನಡೆಯುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು.<br /> <br /> ಆಡಳಿತಾರೂಢ ಯುಪಿಎ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಪಕ್ಷಗಳು ಕುರಿಯನ್ ಪರ ಇರುವುದರಿಂದಾಗಿ ರಾಜ್ಯಸಭೆಯ ಉಪಸಭಾಪತಿ ಸ್ಥಾನದ ಅಭ್ಯರ್ಥಿಯೊಬ್ಬರು ಇದೇ ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವಂತಾಗಿದೆ. <br /> <br /> `ಕುರಿಯನ್ ಎಲ್ಲ ಪಕ್ಷಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವ ಒಳ್ಳೆಯ ವ್ಯಕ್ತಿಯಾಗಿರುವುದರಿಂದ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ನಮ್ಮ ಅಭ್ಯರ್ಥಿ ಬಹುತೇಕ ಸ್ಪರ್ಧೆಗೆ ಇಳಿಯಲಾರರು~ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು. <br /> <br /> ಸಂಖ್ಯಾಬಲ ಇಲ್ಲದ ಪರಿಣಾಮ ಎಡ ಪಕ್ಷಗಳು ಹಾಗೂ ಇತರರು ಸಹ ಈ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ನಿಲ್ಲಿಸುವಲ್ಲಿ ಆಸಕ್ತಿ ತೋರಿಸಲಿಲ್ಲ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮಿತ್ರ ಪಕ್ಷ ಎನ್ಸಿಪಿ ನಾಯಕ ತಾರೀಕ್ ಅನ್ವರ್ ಅವರ ಹೆಸರೂ ಈ ಸ್ಥಾನಕ್ಕೆ ಕೇಳಿಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕೆ. ರೆಹಮಾನ ಖಾನ್ ಅವರ ನಿವೃತ್ತಿಯ ನಂತರ ತೆರವಾಗಿರುವ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಜೆ. ಕುರಿಯನ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆ.<br /> <br /> ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಅರುಣ್ ಜೈಟ್ಲಿ ಕುರಿಯನ್ ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವ ಕಾರಣ ಅವರ ಆಯ್ಕೆಯ ಹಾದಿ ಸುಗಮವಾದಂತಾಗಿದೆ. ಈ ತಿಂಗಳ 21ರಂದು ನಡೆಯುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು.<br /> <br /> ಆಡಳಿತಾರೂಢ ಯುಪಿಎ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಪಕ್ಷಗಳು ಕುರಿಯನ್ ಪರ ಇರುವುದರಿಂದಾಗಿ ರಾಜ್ಯಸಭೆಯ ಉಪಸಭಾಪತಿ ಸ್ಥಾನದ ಅಭ್ಯರ್ಥಿಯೊಬ್ಬರು ಇದೇ ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವಂತಾಗಿದೆ. <br /> <br /> `ಕುರಿಯನ್ ಎಲ್ಲ ಪಕ್ಷಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವ ಒಳ್ಳೆಯ ವ್ಯಕ್ತಿಯಾಗಿರುವುದರಿಂದ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ನಮ್ಮ ಅಭ್ಯರ್ಥಿ ಬಹುತೇಕ ಸ್ಪರ್ಧೆಗೆ ಇಳಿಯಲಾರರು~ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು. <br /> <br /> ಸಂಖ್ಯಾಬಲ ಇಲ್ಲದ ಪರಿಣಾಮ ಎಡ ಪಕ್ಷಗಳು ಹಾಗೂ ಇತರರು ಸಹ ಈ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ನಿಲ್ಲಿಸುವಲ್ಲಿ ಆಸಕ್ತಿ ತೋರಿಸಲಿಲ್ಲ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮಿತ್ರ ಪಕ್ಷ ಎನ್ಸಿಪಿ ನಾಯಕ ತಾರೀಕ್ ಅನ್ವರ್ ಅವರ ಹೆಸರೂ ಈ ಸ್ಥಾನಕ್ಕೆ ಕೇಳಿಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>