ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ತಾನ ವಿರುದ್ಧದ ಭಷ್ಟಾಚಾರ ಪ್ರಕರಣ: ತನಿಖೆಯ ಕಾಲಾವಕಾಶ ವಿಸ್ತರಣೆ

Last Updated 31 ಮೇ 2019, 20:34 IST
ಅಕ್ಷರ ಗಾತ್ರ

ನವದೆಹಲಿ: ಸಿಬಿಐನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಿಬಿಐಗೆ ದೆಹಲಿ ಹೈಕೋರ್ಟ್ ಮತ್ತೆ ನಾಲ್ಕು ತಿಂಗಳ ಕಾಲಾವಕಾಶ ನೀಡಿದೆ.

ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಕಾಲಾವಕಾಶ ವಿಸ್ತರಣೆ ಮಾಡಿದ್ದಾರೆ.

ತನಿಖೆಯನ್ನು ಪೂರ್ಣಗೊಳಿಸಲುಈ ಹಿಂದೆ ಸಿಬಿಐಗೆ ನ್ಯಾಯಾಲಯವು 10 ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿತ್ತು.

ಭ್ರಷ್ಟಾಚಾರ ಆರೋಪದಲ್ಲಿ ಅಸ್ತಾನ, ಡಿಎಸ್‌ಪಿ ದೇವೇಂದರ್‌ ಕುಮಾರ್‌ ಮತ್ತು ಮಧ್ಯವರ್ತಿ ಮನೋಜ್‌ ಪ್ರಸಾದ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT