ಕಲಾಪವನ್ನು ನಡೆಸಿಕೊಂಡು ಹೋಗಲು ಅನುವಾಗುವಂತೆ ಉಪ ಸಭಾಧ್ಯಕ್ಷ ಮನೋಹರ ನದೇಂದ್ಲಾ ಅವರು, ಬೆಳಿಗ್ಗೆ ಎರಡು ಬಾರಿ ಕಲಾಪವನ್ನು ಮುಂದೂಡಿದರು. ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆಯೆ ಗದ್ದಲ ಮತ್ತೆ ಮುಂದುವರೆಯಿತು, ಕೊನೆಗೆ ಉಪಸಭಾಧ್ಯಕ್ಷರು ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.
ಆಡಳಿತ ಪಕ್ಷವಾದ ಕಾಂಗ್ರೆಸ್ನ ತೆಲಂಗಾಣ ಶಾಸಕರು ಸಹ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ಸಿಪಿಐ ಶಾಸಕರರೊಂದಿಗೆ ಸೇರಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯ ಬೇಡಿಕೆಗೆ ತಮ್ಮ ಬೆಂಬಲ ಸೂಚಿಸಿದರು.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನೇ ಉದ್ದೇಶವಾಗಿಟ್ಟುಕೊಂಡಿರುವ ~ತೆಲಂಗಾಣ ರಾಷ್ಟ್ರ ಸಮಿತಿ~ಯ ಶಾಸಕರು ಸೋಮವಾರ ಕಲಾಪವನ್ನು ಬಹಿಷ್ಕರಿಸಿದ್ದರು