<p><strong>ಹೈದರಾಬಾದ್(ಪಿಟಿಐ): </strong>‘ತೆಲುಗು ಜನರ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯಲು’ ಹೊಸ ಪಕ್ಷ ರಚಿಸುವುದಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಗುರುವಾರ ಇಲ್ಲಿ ಘೋಷಿಸಿದರು.<br /> <br /> ತೆಲಂಗಾಣ ರಾಜ್ಯ ರಚನೆಯ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಆರಂಭದಿಂದಲೂ ಸಂಘರ್ಷ ಮಾಡುತ್ತಲೇ ಬಂದ ರೆಡ್ಡಿ ಈಚೆಗೆ ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.<br /> <br /> ‘ಪಕ್ಷದ ಹೆಸರು, ಅದರ ಸಿದ್ಧಾಂತಗಳು ಮತ್ತು ಇತರೆ ಮಾಹಿತಿಯನ್ನು ಮಾ.12ರಂದು ರಾಜಮಂಡ್ರಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪ್ರಕಟಿಸಲಾಗುವುದು’ ಎಂದು ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಈ ವೇಳೆ ಕಾಂಗ್ರೆಸ್ನಿಂದ ಅಮಾನತುಗೊಂಡ ಮೂವರು ಸಂಸದರೂ ಇದ್ದರು.<br /> <br /> ಹೊಸ ಪಕ್ಷವು ತೆಲುಗರ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಲಿದೆ. ಪಕ್ಷ ಸೀಮಾಂಧ್ರ ಮತ್ತು ತೆಲಂಗಾಣದವರಿಗೆ ಸೀಮಿತವಾಗಿರದೆ ಬೇರೆಡೆ ವಾಸಿಸುತ್ತಿರುವ ತೆಲುಗು ಜನರ ಅಭಿವೃದ್ಧಿಗೂ ಶ್ರಮಿಸಲಿದೆ ಎಂದು ರೆಡ್ಡಿ ಹೇಳಿದರು.<br /> <br /> ತೆಲುಗು ದೇಶಂ ಪಕ್ಷ ಮತ್ತು ವೈಎಸ್ಆರ್ ಕಾಂಗ್ರೆಸ್ ಕೂಡ ಆಂಧ್ರಪ್ರದೇಶವನ್ನು ವಿಭಜಿಸುವಲ್ಲಿ ಪಾತ್ರ ವಹಿಸಿವೆ. ಆದ್ದರಿಂದಲೇ ಹೊಸ ಪಕ್ಷ ಆರಂಭಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್(ಪಿಟಿಐ): </strong>‘ತೆಲುಗು ಜನರ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯಲು’ ಹೊಸ ಪಕ್ಷ ರಚಿಸುವುದಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಗುರುವಾರ ಇಲ್ಲಿ ಘೋಷಿಸಿದರು.<br /> <br /> ತೆಲಂಗಾಣ ರಾಜ್ಯ ರಚನೆಯ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಆರಂಭದಿಂದಲೂ ಸಂಘರ್ಷ ಮಾಡುತ್ತಲೇ ಬಂದ ರೆಡ್ಡಿ ಈಚೆಗೆ ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.<br /> <br /> ‘ಪಕ್ಷದ ಹೆಸರು, ಅದರ ಸಿದ್ಧಾಂತಗಳು ಮತ್ತು ಇತರೆ ಮಾಹಿತಿಯನ್ನು ಮಾ.12ರಂದು ರಾಜಮಂಡ್ರಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪ್ರಕಟಿಸಲಾಗುವುದು’ ಎಂದು ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಈ ವೇಳೆ ಕಾಂಗ್ರೆಸ್ನಿಂದ ಅಮಾನತುಗೊಂಡ ಮೂವರು ಸಂಸದರೂ ಇದ್ದರು.<br /> <br /> ಹೊಸ ಪಕ್ಷವು ತೆಲುಗರ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಲಿದೆ. ಪಕ್ಷ ಸೀಮಾಂಧ್ರ ಮತ್ತು ತೆಲಂಗಾಣದವರಿಗೆ ಸೀಮಿತವಾಗಿರದೆ ಬೇರೆಡೆ ವಾಸಿಸುತ್ತಿರುವ ತೆಲುಗು ಜನರ ಅಭಿವೃದ್ಧಿಗೂ ಶ್ರಮಿಸಲಿದೆ ಎಂದು ರೆಡ್ಡಿ ಹೇಳಿದರು.<br /> <br /> ತೆಲುಗು ದೇಶಂ ಪಕ್ಷ ಮತ್ತು ವೈಎಸ್ಆರ್ ಕಾಂಗ್ರೆಸ್ ಕೂಡ ಆಂಧ್ರಪ್ರದೇಶವನ್ನು ವಿಭಜಿಸುವಲ್ಲಿ ಪಾತ್ರ ವಹಿಸಿವೆ. ಆದ್ದರಿಂದಲೇ ಹೊಸ ಪಕ್ಷ ಆರಂಭಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>