<p><strong>ನವದೆಹಲಿ (ಐಎಎನ್ಎಸ್):</strong> ‘ನಾವು ದೆಹಲಿ ಕೇಂದ್ರಾಡಳಿತ ಪ್ರದೇಶದ ಸರ್ಕಾರ ರಚಿಸಬೇಕಿದ್ದರೆ ನಮ್ಮ 18 ಅಂಶಗಳ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ’. ಇದು ಕಾಂಗ್ರೆಸ್ </p>.<p>ಮತ್ತು ಬಿಜೆಪಿಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಹಾಕಿದ ಷರತ್ತು. <br /> <br /> ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಈ ಬಗ್ಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.<br /> ‘ನಾವು ಯಾರ ಬೆಂಬಲವನ್ನೂ ಕೇಳಿಲ್ಲ. ಆದರೂ ಬೆಂಬಲಿಸಲು ಮುಂದೆ ಬಂದಿರುವ ನಿಮ್ಮ ಉದ್ದೇಶ ಏನು?’ ಎಂದು ಎರಡೂ ಪಕ್ಷಗಳನ್ನು ಅವರು ಪ್ರಶ್ನಿಸಿದ್ದಾರೆ.<br /> <br /> ವಿಧಾನಸಭೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾದ ಆಮ್ ಆದ್ಮಿಗೆ ಸರ್ಕಾರ ರಚಿಸಲು ಬೇಷರತ್ ಬೆಂಬಲ ನೀಡುವುದಾಗಿ ಕಾಂಗ್ರೆಸ್ ತಿಳಿಸಿತ್ತು. ‘ಅವರು ಸರ್ಕಾರ ರಚಿಸಲು ನಮ್ಮ ಅಭ್ಯಂತರ ಇಲ್ಲ’ ಎಂದು ಬಿಜೆಪಿ ಹೇಳಿತ್ತು.<br /> <br /> <strong>ರಾಷ್ಟ್ರಪತಿಗೆ ಮಾಹಿತಿ: </strong>ಹೊಸ ಸರ್ಕಾರ ರಚನೆಯ ವಸ್ತುಸ್ಥಿತಿ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಲೆ. ಗವರ್ನರ್ ನಜೀಬ್ ಜಂಗ್ ಶನಿವಾರ ವರದಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ‘ನಾವು ದೆಹಲಿ ಕೇಂದ್ರಾಡಳಿತ ಪ್ರದೇಶದ ಸರ್ಕಾರ ರಚಿಸಬೇಕಿದ್ದರೆ ನಮ್ಮ 18 ಅಂಶಗಳ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ’. ಇದು ಕಾಂಗ್ರೆಸ್ </p>.<p>ಮತ್ತು ಬಿಜೆಪಿಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಹಾಕಿದ ಷರತ್ತು. <br /> <br /> ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಈ ಬಗ್ಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.<br /> ‘ನಾವು ಯಾರ ಬೆಂಬಲವನ್ನೂ ಕೇಳಿಲ್ಲ. ಆದರೂ ಬೆಂಬಲಿಸಲು ಮುಂದೆ ಬಂದಿರುವ ನಿಮ್ಮ ಉದ್ದೇಶ ಏನು?’ ಎಂದು ಎರಡೂ ಪಕ್ಷಗಳನ್ನು ಅವರು ಪ್ರಶ್ನಿಸಿದ್ದಾರೆ.<br /> <br /> ವಿಧಾನಸಭೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾದ ಆಮ್ ಆದ್ಮಿಗೆ ಸರ್ಕಾರ ರಚಿಸಲು ಬೇಷರತ್ ಬೆಂಬಲ ನೀಡುವುದಾಗಿ ಕಾಂಗ್ರೆಸ್ ತಿಳಿಸಿತ್ತು. ‘ಅವರು ಸರ್ಕಾರ ರಚಿಸಲು ನಮ್ಮ ಅಭ್ಯಂತರ ಇಲ್ಲ’ ಎಂದು ಬಿಜೆಪಿ ಹೇಳಿತ್ತು.<br /> <br /> <strong>ರಾಷ್ಟ್ರಪತಿಗೆ ಮಾಹಿತಿ: </strong>ಹೊಸ ಸರ್ಕಾರ ರಚನೆಯ ವಸ್ತುಸ್ಥಿತಿ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಲೆ. ಗವರ್ನರ್ ನಜೀಬ್ ಜಂಗ್ ಶನಿವಾರ ವರದಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>