ಮುಂಬೈ (ಪಿಟಿಐ): ನಗರದ ಹೊರವಲಯದಲ್ಲಿರುವ ಖಾಂಡಿವಿಲಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾಹಿತಿ ಹಕ್ಕು (ಆರ್ಟಿಐ) ಕಾರ್ಯಕರ್ತನ ಮೇಲೆ ದಾಳಿ ಮಾಡಿದ್ದು, ಇವರಲ್ಲಿ ಇಬ್ಬರು ಕ್ರಿಕೆಟ್ ಬುಕ್ಕಿಗಳೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮೆಹುಲ್ ಕಟಾರಿಯಾ (39) ಎಂಬಾತನ ಮೇಲೆ ನಾಲ್ವರು ಏಕಾಏಕಿ ಎರಗಿ, ಹಲ್ಲೆ ಮಾಡಿ, ನಂತರ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕಟಾರಿಯನ ತಲೆ ಮತ್ತು ಹೊಟ್ಟೆಗೆ ತೀವ್ರ ಗಾಯಗಳಾಗಿವೆ. ತಕ್ಷಣ ಸಾರ್ವಜನಿಕರೇ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ್ದಾರೆ.