<p><strong>ನವದೆಹಲಿ (ಪಿಟಿಐ):</strong> ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ರಾಜಕೀಯ ಪಕ್ಷಗಳನ್ನು ತರುವ ಕೇಂದ್ರೀಯ ಮಾಹಿತಿ ಆಯೋಗದ ಆದೇಶವನ್ನು ಅನೂರ್ಜಿತಗೊಳಿಸುವ ಪ್ರಯತ್ನದ ಅಂಗವಾಗಿ, ಕಾಯ್ದೆ ತಿದ್ದುಪಡಿಗೆ ಮಸೂದೆಯೊಂದನ್ನು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.<br /> <br /> ಈ ಬಗ್ಗೆ ಸುಗ್ರೀವಾಜ್ಞೆ ತರಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿತ್ತು. ಆದರೆ ಮಳೆಗಾಲದ ಅಧಿವೇಶನ ದಿನ ನಿಗದಿ ಮಾಡಿದ್ದು ಹಾಗೂ ಹಲವು ಪಕ್ಷಗಳು ಸುಗ್ರೀವಾಜ್ಞೆಗೆ ಬೆಂಬಲ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.<br /> <br /> ಎಲ್ಲ ರಾಜಕೀಯ ಪಕ್ಷಗಳ ಜತೆ ಸರ್ಕಾರ ಈಗಾಗಲೇ ಈ ಕುರಿತು ಮಾತುಕತೆ ನಡೆಸಿದೆ. ತಾವು ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳು ಸ್ಪಷ್ಟಪಡಿಸಿದ್ದು, ಮಸೂದೆ ರೂಪದಲ್ಲಿ ತರುವ ತಿದ್ದುಪಡಿಯನ್ನು ಬೆಂಬಲಿಸುವುದಾಗಿ ಪ್ರಕಟಿಸಿವೆ.<br /> <br /> ರಾಜಕೀಯ ವಿರೋಧಿಗಳು ದುರುದ್ದೇಶಕ್ಕೆ ಈ ಕಾಯ್ದೆಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಅನೇಕ ರಾಜಕೀಯ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಕಾಯ್ದೆ ವ್ಯಾಪ್ತಿಗೆ ರಾಜಕೀಯ ಪಕ್ಷಗಳನ್ನು ತರುವುದು ಆ ಪಕ್ಷಗಳ ಆಂತರಿಕ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತದೆ ಎಂದೂ ಹೇಳಿವೆ.<br /> <br /> ರಾಜಕೀಯ ಪಕ್ಷಗಳ ಹಣಕಾಸಿನ ವ್ಯವಸ್ಥೆ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆ ಹಾಗೂ ಆದಾಯ ತೆರಿಗೆ ಕಾಯ್ದೆ ಸಮರ್ಥವಾಗಿವೆ ಎಂದು ರಾಜಕೀಯ ಪಕ್ಷಗಳು ಪ್ರತಿಪಾದಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ರಾಜಕೀಯ ಪಕ್ಷಗಳನ್ನು ತರುವ ಕೇಂದ್ರೀಯ ಮಾಹಿತಿ ಆಯೋಗದ ಆದೇಶವನ್ನು ಅನೂರ್ಜಿತಗೊಳಿಸುವ ಪ್ರಯತ್ನದ ಅಂಗವಾಗಿ, ಕಾಯ್ದೆ ತಿದ್ದುಪಡಿಗೆ ಮಸೂದೆಯೊಂದನ್ನು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.<br /> <br /> ಈ ಬಗ್ಗೆ ಸುಗ್ರೀವಾಜ್ಞೆ ತರಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿತ್ತು. ಆದರೆ ಮಳೆಗಾಲದ ಅಧಿವೇಶನ ದಿನ ನಿಗದಿ ಮಾಡಿದ್ದು ಹಾಗೂ ಹಲವು ಪಕ್ಷಗಳು ಸುಗ್ರೀವಾಜ್ಞೆಗೆ ಬೆಂಬಲ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.<br /> <br /> ಎಲ್ಲ ರಾಜಕೀಯ ಪಕ್ಷಗಳ ಜತೆ ಸರ್ಕಾರ ಈಗಾಗಲೇ ಈ ಕುರಿತು ಮಾತುಕತೆ ನಡೆಸಿದೆ. ತಾವು ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳು ಸ್ಪಷ್ಟಪಡಿಸಿದ್ದು, ಮಸೂದೆ ರೂಪದಲ್ಲಿ ತರುವ ತಿದ್ದುಪಡಿಯನ್ನು ಬೆಂಬಲಿಸುವುದಾಗಿ ಪ್ರಕಟಿಸಿವೆ.<br /> <br /> ರಾಜಕೀಯ ವಿರೋಧಿಗಳು ದುರುದ್ದೇಶಕ್ಕೆ ಈ ಕಾಯ್ದೆಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಅನೇಕ ರಾಜಕೀಯ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಕಾಯ್ದೆ ವ್ಯಾಪ್ತಿಗೆ ರಾಜಕೀಯ ಪಕ್ಷಗಳನ್ನು ತರುವುದು ಆ ಪಕ್ಷಗಳ ಆಂತರಿಕ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತದೆ ಎಂದೂ ಹೇಳಿವೆ.<br /> <br /> ರಾಜಕೀಯ ಪಕ್ಷಗಳ ಹಣಕಾಸಿನ ವ್ಯವಸ್ಥೆ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆ ಹಾಗೂ ಆದಾಯ ತೆರಿಗೆ ಕಾಯ್ದೆ ಸಮರ್ಥವಾಗಿವೆ ಎಂದು ರಾಜಕೀಯ ಪಕ್ಷಗಳು ಪ್ರತಿಪಾದಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>