ಜಿಲ್ಲಾಧಿಕಾರಿ ಸೇರಿ ಸರ್ಕಾರದ ಆಡಳಿತ ನಿರ್ವಹಣೆಯ ಹೊಣೆ ಇರುವ ಅಧಿಕಾರಿಗಳಿಗೆ ಆಸ್ತಿ ವಿವಾದ ಪರಿಹರಿಸುವ ಅಧಿಕಾರ ಕೊಡುವುದು ಕಾನೂನು ವ್ಯವಸ್ಥೆಯನ್ನು ನಾಶಪಡಿಸುತ್ತದೆ. ಜಿಲ್ಲಾಧಿಕಾರಿಯು ಸರ್ಕಾರದ ಅಧಿಕಾರಿ. ಆಸ್ತಿ ವಿವಾದಗಳಿಗೆ ಸಂಬಂಧಿಸಿ ಜಿಲ್ಲಾಧಿಕಾರಿಗೆ ನಿರ್ದಿಷ್ಟ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಕಾನೂನಿನಲ್ಲಿ ಉಲ್ಲೇಖವಿದ್ದರೆ ಮಾತ್ರ ಆ ಅಧಿಕಾರವನ್ನು ಚಲಾಯಿ ಸಬಹುದು ಎಂದು ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ಚಂದ್ರಚೂಡ ಅವರ ಪೀಠ ಅಭಿಪ್ರಾಯಪಟ್ಟಿದೆ.