ದೇಶದ ವಿವಿಧ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಶುಕ್ರ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಇಸ್ರೋ ಕರೆ ನೀಡಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಇಸ್ರೋ ನಿರ್ದೇಶಕ ದೇವಿಪ್ರಸಾದ್ ಕಾರ್ಣಿಕ್, ‘ಶುಕ್ರ ಯೋಜನೆ ಕುರಿತ ಅಧಿಕೃತ ಘೋಷಣೆ ಇದಾಗಿದೆ. ವೈಜ್ಞಾನಿಕ ಅಧ್ಯಯನಕ್ಕೆ ಅಗತ್ಯವಿರುವ ಪೇಲೋಡ್ಗಳನ್ನು ವಿಜ್ಞಾನ ಸಂಸ್ಥೆಗಳು ಅಭಿವೃದ್ಧಿಪಡಿಸಬೇಕಾಗಿದೆ’ ಎಂದರು.