ಕೊಯಮತ್ತೂರು (ಪಿಟಿಐ): ಐಎಸ್ ಉಗ್ರ ಸಂಘಟನೆಯ ಮೂವರು ಬೆಂಬಲಿಗರನ್ನುಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.ಇವರ ಮನೆಗಳ ಶೋಧ ನಡೆಸಿದ್ದು, ಡಿಜಿಟಲ್ ಸಾಧನಗಳು ಮತ್ತು ಹಲವು ಮಹತ್ವಪೂರ್ಣ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿದ್ದು,ನಂತರ ಪ್ರಧಾನ ಜಿಲ್ಲಾ ನ್ಯಾಯಾಧೀಶ ಆರ್. ಶಕ್ತಿವೇಲ್ ಅವರ ಮುಂದೆ ಹಾಜರುಪಡಿಸಲಾಯಿತು.ಆರೋಪಿಗಳನ್ನು ಜೂನ್ 28ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈಸ್ಟರ್ ದಿನದಂದು ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳವು ನಗರದ ಏಳು ಪ್ರದೇಶಗಳಲ್ಲಿ ಇತ್ತೀಚೆಗೆ ಶೋಧ ನಡೆಸಿತು.