‘ದುರದೃಷ್ಟವಶಾತ್ ಚೀನಾ ಸಹ ಈಗ ನಮ್ಮ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸಲು ಆರಂಭಿಸಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಇಡೀ ದೇಶ ನಮ್ಮ ಬೆಂಬಲಕ್ಕೆ ಬರದಿದ್ದಲ್ಲಿ, ಈ ಯುದ್ಧವನ್ನು ಗೆಲ್ಲುವುದು ಅಸಾಧ್ಯ’ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
‘ರಾಜ್ಯದಲ್ಲಿ ಕೋಮುಗಲಭೆ ಹುಟ್ಟುಹಾಕುವ ಉದ್ದೇಶದಿಂದಲೇ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲಾಗಿದೆ. ಆದರೆ, ಇಡೀ ದೇಶ ರಾಜ್ಯ ಸರ್ಕಾರದ ನೆರವಿಗೆ ಬಂತು. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಯಿತು’ ಎಂದರು.