<p><strong>ಬಾದ್ವಾನ್ (ಪಿಟಿಐ):</strong> ರೌಡಿಗಳ ಪಟ್ಟಿಯಲ್ಲಿರುವ ಹೆಸರಿರುವ ವ್ಯಕ್ತಿ ಎಂದು ತಪ್ಪಾಗಿ ಭಾವಿಸಿ ರೈತನೊಬ್ಬನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯ ಪಡೆ (ಎಸ್ಟಿಎಫ್) ಹತ್ಯೆ ಮಾಡಿದ ಘಟನೆ ನಡೆದಿದೆ.</p>.<p>ಘಟನೆಯ ನಂತರ ಎಸ್ಟಿಎಫ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.</p>.<p>ರೌಡಿಗಳ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದ ಪೃಥ್ವಿರಾಜ್ ಎಂಬಾತ ಸಂಜರಾಪುರ ವಲಯದಲ್ಲಿ ಅವಿತಿರುವ ಸಾಧ್ಯತೆಯ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಲಖನೌದಿಂದ ಆಗಮಿಸಿದ ಎಟಿಎಫ್ ಸಿಬ್ಬಂದಿ ಆ ಪ್ರದೇಶವನ್ನು ಸುತ್ತುವರಿದಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಕುಮಾರ್ ರಾಣಾ ಹೇಳಿದ್ದಾರೆ.</p>.<p>ಆ ಪ್ರದೇಶದಲ್ಲಿದ್ದ ಗುಡಿಸಲೊಂದರಿಂದ ತೂರಿ ಬಂದ ಗುಂಡೊಂದು ಸಿಬ್ಬಂದಿಯೊಬ್ಬರ ಎದೆಗೆ ತಾಗಿತು. ದಾಳಿಗೆ ಪ್ರತಿಕ್ರಿಯೆಯಾಗಿ ಎಸ್ಟಿಎಫ್ ತಂಡ ಪ್ರತಿದಾಳಿ ನಡೆಸಿದ ಈ ಸಂದರ್ಭದಲ್ಲಿ ಗುಡಿಸಲಿಗೆ ಬೆಂಕಿ ಹಚ್ಚಿಕೊಂಡಿತು ಎಂದು ಅವರು ಹೇಳಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ತೆರಳಿದ ನಿವಾಸಿಗಳು ಆ ಗುಡಿಸಲಿನಲ್ಲಿ ಬ್ರಿಜ್ಪಾಲ್ ಸಿಂಗ್ ಎಂಬ ರೈತ ವಾಸಿಸುತ್ತಿದ್ದ ಎಂದು ಎಸ್ಟಿಎಫ್ಗೆ ತಿಳಿಸಿದರು. </p>.<p>ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ರೈತನ ದೇಹ ಸುಟ್ಟು ಕರಕಲಾಗಿತ್ತು. ಆತನ ಪತ್ನಿ ಹಾಗೂ ಪುತ್ರ ಬ್ರಿಜ್ಪಾಲ್ ಸಿಂಗ್ನ ಮೃತದೇಹವನ್ನು ಗುರುತಿಸಿದ್ದಾರೆ. ಆ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು.</p>.<p>ರೈತನ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬಾದ್ವಾನ್-ಆಗ್ರಾ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದರು.<br /> ಹತ್ಯೆಗೊಳಗಾದ ರೈತನ ಸಂಬಂಧಿಕರು ನೀಡಿದ ದೂರಿನ ಅನ್ವಯ ಪೊಲೀಸ್ ಸಿಬ್ಬಂದಿ ವಿರುದ್ಧ ಕೊಲೆ ಮಾಡಿದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ರಾಣಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದ್ವಾನ್ (ಪಿಟಿಐ):</strong> ರೌಡಿಗಳ ಪಟ್ಟಿಯಲ್ಲಿರುವ ಹೆಸರಿರುವ ವ್ಯಕ್ತಿ ಎಂದು ತಪ್ಪಾಗಿ ಭಾವಿಸಿ ರೈತನೊಬ್ಬನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯ ಪಡೆ (ಎಸ್ಟಿಎಫ್) ಹತ್ಯೆ ಮಾಡಿದ ಘಟನೆ ನಡೆದಿದೆ.</p>.<p>ಘಟನೆಯ ನಂತರ ಎಸ್ಟಿಎಫ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.</p>.<p>ರೌಡಿಗಳ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದ ಪೃಥ್ವಿರಾಜ್ ಎಂಬಾತ ಸಂಜರಾಪುರ ವಲಯದಲ್ಲಿ ಅವಿತಿರುವ ಸಾಧ್ಯತೆಯ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಲಖನೌದಿಂದ ಆಗಮಿಸಿದ ಎಟಿಎಫ್ ಸಿಬ್ಬಂದಿ ಆ ಪ್ರದೇಶವನ್ನು ಸುತ್ತುವರಿದಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಕುಮಾರ್ ರಾಣಾ ಹೇಳಿದ್ದಾರೆ.</p>.<p>ಆ ಪ್ರದೇಶದಲ್ಲಿದ್ದ ಗುಡಿಸಲೊಂದರಿಂದ ತೂರಿ ಬಂದ ಗುಂಡೊಂದು ಸಿಬ್ಬಂದಿಯೊಬ್ಬರ ಎದೆಗೆ ತಾಗಿತು. ದಾಳಿಗೆ ಪ್ರತಿಕ್ರಿಯೆಯಾಗಿ ಎಸ್ಟಿಎಫ್ ತಂಡ ಪ್ರತಿದಾಳಿ ನಡೆಸಿದ ಈ ಸಂದರ್ಭದಲ್ಲಿ ಗುಡಿಸಲಿಗೆ ಬೆಂಕಿ ಹಚ್ಚಿಕೊಂಡಿತು ಎಂದು ಅವರು ಹೇಳಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ತೆರಳಿದ ನಿವಾಸಿಗಳು ಆ ಗುಡಿಸಲಿನಲ್ಲಿ ಬ್ರಿಜ್ಪಾಲ್ ಸಿಂಗ್ ಎಂಬ ರೈತ ವಾಸಿಸುತ್ತಿದ್ದ ಎಂದು ಎಸ್ಟಿಎಫ್ಗೆ ತಿಳಿಸಿದರು. </p>.<p>ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ರೈತನ ದೇಹ ಸುಟ್ಟು ಕರಕಲಾಗಿತ್ತು. ಆತನ ಪತ್ನಿ ಹಾಗೂ ಪುತ್ರ ಬ್ರಿಜ್ಪಾಲ್ ಸಿಂಗ್ನ ಮೃತದೇಹವನ್ನು ಗುರುತಿಸಿದ್ದಾರೆ. ಆ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು.</p>.<p>ರೈತನ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬಾದ್ವಾನ್-ಆಗ್ರಾ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದರು.<br /> ಹತ್ಯೆಗೊಳಗಾದ ರೈತನ ಸಂಬಂಧಿಕರು ನೀಡಿದ ದೂರಿನ ಅನ್ವಯ ಪೊಲೀಸ್ ಸಿಬ್ಬಂದಿ ವಿರುದ್ಧ ಕೊಲೆ ಮಾಡಿದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ರಾಣಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>