<p><strong>ಡೆಹ್ರಾಡೂನ್ (ಐಎಎನ್ಎಸ್):</strong> ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗಿರುವ ದೀಢಿರ್ ಪ್ರವಾಹ ಹಾಗೂ ಭೂಕುಸಿತದ ಪರಿಣಾಮ ಉತ್ತರಖಾಂಡ್ದಲ್ಲಿ ಶನಿವಾರ ಆರು ಜನರು ಮೃತಪಟ್ಟಿದ್ದು, `ಚಾರ್ಧಾಮ್~ ಯಾತ್ರೆಗಾಗಿ ಆಗಮಿಸಿರುವ ಸಾವಿರಾರು ಭಕ್ತರು ತೊಂದರೆಗೆ ಸಿಲುಕಿ, ಕೆಲ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.<br /> <br /> ಹಿಮಾಲಯದ ಕೆಳ ರಾಜ್ಯಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯ ಪರಿಣಾಮ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಗಂಗೋತ್ರಿ, ಯಮನೋತ್ರಿ, ಬದರಿನಾಥ್ ಹಾಗೂ ಕೇದಾರನಾಥ್ ಕ್ಷೇತ್ರಗಳಿಗೆ ತೆರಳುವ ಮಾರ್ಗಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಈ ನಾಲ್ಕು ಕ್ಷೇತ್ರಗಳಿಗೆ ಭೇಟಿನೀಡಲು ಆಗಮಿಸಿರುವ ಸಾವಿರಾರು ಭಕ್ತರು ದಾರಿ ಮಧ್ಯೆ ತೊಂದರೆಗೆ ಸಿಲುಕಿದ್ದಾರೆ.<br /> <br /> ಗಂಗೋತ್ರಿಯ ಸಮೀಪದ ಭಾಗಿರಥಿ ನದಿ ತುಂಬಿ ಹರಿಯುತ್ತಿರುವ ಪರಿಣಾಮ 40ಕ್ಕೂ ಅಧಿಕ ಮನೆಗಳು ಸೇರಿದಂತೆ ಸೇತುವೆಯೊಂದು ಕೊಚ್ಚಿಕೊಂಡು ಹೋಗಿದ್ದು, ಈ ಪ್ರವಾಹದಲ್ಲಿ ಮೂವರು ಅಗ್ನಿಶಾಮಕ ದಳ ಸಿಬ್ಬಂದಿ ಮೃತಪಟ್ಟಿದ್ದಾರೆ. <br /> <br /> ಚಮೋಲಿಯಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದ ಪರಿಣಾಮ ಎರಡು ಮಕ್ಕಳು ಮೃತಪಟ್ಟರೆ, ಪೊಕ್ರಿಯಲ್ಲಿ ಮಗುವೊಂದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದರು.<br /> <br /> ಹವಾಮಾನ ಇಲಾಖೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ತಂಡ ಪರಿಸ್ಥಿತಿ ಕುರಿತು ಎಚ್ಚರಿಕೆ ನೀಡಿದ ಪರಿಣಾಮ ಸರ್ಕಾರ ರಾಜ್ಯದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಮುಖ್ಯಮಂತ್ರಿ ವಿಜಯ್ ಬಹುಗುಣ್ ಅವರು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್ (ಐಎಎನ್ಎಸ್):</strong> ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗಿರುವ ದೀಢಿರ್ ಪ್ರವಾಹ ಹಾಗೂ ಭೂಕುಸಿತದ ಪರಿಣಾಮ ಉತ್ತರಖಾಂಡ್ದಲ್ಲಿ ಶನಿವಾರ ಆರು ಜನರು ಮೃತಪಟ್ಟಿದ್ದು, `ಚಾರ್ಧಾಮ್~ ಯಾತ್ರೆಗಾಗಿ ಆಗಮಿಸಿರುವ ಸಾವಿರಾರು ಭಕ್ತರು ತೊಂದರೆಗೆ ಸಿಲುಕಿ, ಕೆಲ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.<br /> <br /> ಹಿಮಾಲಯದ ಕೆಳ ರಾಜ್ಯಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯ ಪರಿಣಾಮ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಗಂಗೋತ್ರಿ, ಯಮನೋತ್ರಿ, ಬದರಿನಾಥ್ ಹಾಗೂ ಕೇದಾರನಾಥ್ ಕ್ಷೇತ್ರಗಳಿಗೆ ತೆರಳುವ ಮಾರ್ಗಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಈ ನಾಲ್ಕು ಕ್ಷೇತ್ರಗಳಿಗೆ ಭೇಟಿನೀಡಲು ಆಗಮಿಸಿರುವ ಸಾವಿರಾರು ಭಕ್ತರು ದಾರಿ ಮಧ್ಯೆ ತೊಂದರೆಗೆ ಸಿಲುಕಿದ್ದಾರೆ.<br /> <br /> ಗಂಗೋತ್ರಿಯ ಸಮೀಪದ ಭಾಗಿರಥಿ ನದಿ ತುಂಬಿ ಹರಿಯುತ್ತಿರುವ ಪರಿಣಾಮ 40ಕ್ಕೂ ಅಧಿಕ ಮನೆಗಳು ಸೇರಿದಂತೆ ಸೇತುವೆಯೊಂದು ಕೊಚ್ಚಿಕೊಂಡು ಹೋಗಿದ್ದು, ಈ ಪ್ರವಾಹದಲ್ಲಿ ಮೂವರು ಅಗ್ನಿಶಾಮಕ ದಳ ಸಿಬ್ಬಂದಿ ಮೃತಪಟ್ಟಿದ್ದಾರೆ. <br /> <br /> ಚಮೋಲಿಯಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದ ಪರಿಣಾಮ ಎರಡು ಮಕ್ಕಳು ಮೃತಪಟ್ಟರೆ, ಪೊಕ್ರಿಯಲ್ಲಿ ಮಗುವೊಂದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದರು.<br /> <br /> ಹವಾಮಾನ ಇಲಾಖೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ತಂಡ ಪರಿಸ್ಥಿತಿ ಕುರಿತು ಎಚ್ಚರಿಕೆ ನೀಡಿದ ಪರಿಣಾಮ ಸರ್ಕಾರ ರಾಜ್ಯದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಮುಖ್ಯಮಂತ್ರಿ ವಿಜಯ್ ಬಹುಗುಣ್ ಅವರು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>