<p><strong>ಡೆಹ್ರಾಡೂನ್ (ಪಿಟಿಐ):</strong> ಬಹುಮತದ ಕೊರತೆ ಇದ್ದರೂ ಉತ್ತರಾಖಂಡದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮುಂದಿನ ಸರ್ಕಾರ ರಚಿಸುವ ಕಸರತ್ತು ಆರಂಭಿಸಿವೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ಬಿಎಸ್ಪಿ, ಉತ್ತರಾಖಂಡ ಕ್ರಾಂತಿ ದಳ (ಯುಕೆಡಿ) ಹಾಗೂ ಪಕ್ಷೇತರ ಶಾಸಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ.<br /> <br /> `ಬಿಎಸ್ಪಿ ಮತ್ತು ಕೆಲವು ಪಕ್ಷೇತರರು ನಮಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ~ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಬಹುಗುಣ ಹೇಳಿದ್ದಾರೆ.<br /> <br /> ಮಂಗಳವಾರ ರಾತ್ರಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರನ್ನು ಭೇಟಿ ಮಾಡಿದ ಉನ್ನತ ಮಟ್ಟದ ನಿಯೋಗವು, ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಉನ್ನತ ಮಟ್ಟದ ನಿಯೋಗವೊಂದು ಚುನಾವಣಾ ಉಸ್ತುವಾರಿ ಬೀರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ದೌಡಾಯಿಸಿದೆ. ಬಿಜೆಪಿ ಪಾಳಯದಲ್ಲೂ ಸರ್ಕಾರ ರಚನೆಗೆ ಕಸರತ್ತು ಮುಂದುವರಿದಿದೆ.<br /> <br /> `ನಾವು ಸನ್ನಿವೇಶವನ್ನು ಗಮನಿಸುತ್ತಿದ್ದೇವೆ. ಸರ್ಕಾರ ರಚಿಸುವುದು ಸೂಕ್ತ ಎನಿಸಿದಲ್ಲಿ ಖಂಡಿತವಾಗಿಯೂ ನಮ್ಮ ಹಕ್ಕು ಮಂಡಿಸುತ್ತೇವೆ. ಅಲ್ಲದೆ ಸರ್ಕಾರ ರಚನೆ ಬಗ್ಗೆ ನಾವು ಶಾಸಕರ ಅನಿಸಿಕೆಯನ್ನೂ ಕೇಳುತ್ತೇವೆ~ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಹೇಳಿದ್ದಾರೆ.<br /> <br /> ಈಗಾಗಲೇ ಪಕ್ಷದ ಘಟಾನುಘಟಿಗಳಾದ ರಾಜನಾಥ್ ಸಿಂಗ್ ಹಾಗೂ ಅನಂತ್ ಕುಮಾರ್ ಇಲ್ಲಿ ಸಮಾಲೋಚನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್ (ಪಿಟಿಐ):</strong> ಬಹುಮತದ ಕೊರತೆ ಇದ್ದರೂ ಉತ್ತರಾಖಂಡದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮುಂದಿನ ಸರ್ಕಾರ ರಚಿಸುವ ಕಸರತ್ತು ಆರಂಭಿಸಿವೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ಬಿಎಸ್ಪಿ, ಉತ್ತರಾಖಂಡ ಕ್ರಾಂತಿ ದಳ (ಯುಕೆಡಿ) ಹಾಗೂ ಪಕ್ಷೇತರ ಶಾಸಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ.<br /> <br /> `ಬಿಎಸ್ಪಿ ಮತ್ತು ಕೆಲವು ಪಕ್ಷೇತರರು ನಮಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ~ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಬಹುಗುಣ ಹೇಳಿದ್ದಾರೆ.<br /> <br /> ಮಂಗಳವಾರ ರಾತ್ರಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರನ್ನು ಭೇಟಿ ಮಾಡಿದ ಉನ್ನತ ಮಟ್ಟದ ನಿಯೋಗವು, ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಉನ್ನತ ಮಟ್ಟದ ನಿಯೋಗವೊಂದು ಚುನಾವಣಾ ಉಸ್ತುವಾರಿ ಬೀರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ದೌಡಾಯಿಸಿದೆ. ಬಿಜೆಪಿ ಪಾಳಯದಲ್ಲೂ ಸರ್ಕಾರ ರಚನೆಗೆ ಕಸರತ್ತು ಮುಂದುವರಿದಿದೆ.<br /> <br /> `ನಾವು ಸನ್ನಿವೇಶವನ್ನು ಗಮನಿಸುತ್ತಿದ್ದೇವೆ. ಸರ್ಕಾರ ರಚಿಸುವುದು ಸೂಕ್ತ ಎನಿಸಿದಲ್ಲಿ ಖಂಡಿತವಾಗಿಯೂ ನಮ್ಮ ಹಕ್ಕು ಮಂಡಿಸುತ್ತೇವೆ. ಅಲ್ಲದೆ ಸರ್ಕಾರ ರಚನೆ ಬಗ್ಗೆ ನಾವು ಶಾಸಕರ ಅನಿಸಿಕೆಯನ್ನೂ ಕೇಳುತ್ತೇವೆ~ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಹೇಳಿದ್ದಾರೆ.<br /> <br /> ಈಗಾಗಲೇ ಪಕ್ಷದ ಘಟಾನುಘಟಿಗಳಾದ ರಾಜನಾಥ್ ಸಿಂಗ್ ಹಾಗೂ ಅನಂತ್ ಕುಮಾರ್ ಇಲ್ಲಿ ಸಮಾಲೋಚನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>