<p><strong>ಲಖನೌ (ಪಿಟಿಐ/ಐಎಎನ್ಎಸ್):</strong> ಉತ್ತರಪ್ರದೇಶದಲ್ಲಿ ಮಾಯಾವತಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಮುಂದಾದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್ ಅವರ ಪುತ್ರ ಸಂಸದ ಅಖಿಲೇಶ್ ಯಾದವ್ ಅವರನ್ನು ಇಲ್ಲಿನ ವಿಮಾನನಿಲ್ದಾಣದಲ್ಲಿ ಬಂಧಿಸಲಾಯಿತು.</p>.<p>~ಬಿಎಸ್ ಪಿ ಹಠಾವೋ, ಯಪಿ ಬಚಾವೋ~ ಎಂಬ ಘೋಷ ವಾಕ್ಯದೊಂದಿಗೆ ಮೂರುದಿನಗಳ ಪ್ರತಿಭಟನೆಗೆ ಸಮಾಜವಾದಿ ಪಕ್ಷ ಕರೆಕೊಟ್ಟಿದೆ. ಇದರ ಅಂಗವಾಗಿ ಅಖಿಲೇಶ್ ಅವರು ಸಮಾಜವಾದಿ ಪಕ್ಷದ ಲಖನೌ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ಕಾರ್ಯಕ್ರಮವಿತ್ತು.</p>.<p>ಮಾಯಾವತಿ ಅವರ ಸರ್ಕಾರ ನಿರಂಕುಶ ಧೋರಣೆ ಹೊಂದಿದ್ದು, ತಮ್ಮ ಬಂಧನವು ಇದನ್ನು ಸಾಬೀತು ಮಾಡಿದೆ ಎಂದು ಅಖಿಲೇಶ್ ಅವರು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ತಾವು ಅಖಿಲೇಶ್ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಹಲವೆಡೆ ಉದ್ರಿಕ್ತ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದರು. ಕೆಲವೆಡೆ ಪೊಲೀಸರು ಲಾಠಿಪ್ರಹಾರ ಮಾಡಿ ಗುಂಪನ್ನು ಚದುರಿಸಿದ್ದಾರೆ. ಇದರಿಂದಾಗಿ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ/ಐಎಎನ್ಎಸ್):</strong> ಉತ್ತರಪ್ರದೇಶದಲ್ಲಿ ಮಾಯಾವತಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಮುಂದಾದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್ ಅವರ ಪುತ್ರ ಸಂಸದ ಅಖಿಲೇಶ್ ಯಾದವ್ ಅವರನ್ನು ಇಲ್ಲಿನ ವಿಮಾನನಿಲ್ದಾಣದಲ್ಲಿ ಬಂಧಿಸಲಾಯಿತು.</p>.<p>~ಬಿಎಸ್ ಪಿ ಹಠಾವೋ, ಯಪಿ ಬಚಾವೋ~ ಎಂಬ ಘೋಷ ವಾಕ್ಯದೊಂದಿಗೆ ಮೂರುದಿನಗಳ ಪ್ರತಿಭಟನೆಗೆ ಸಮಾಜವಾದಿ ಪಕ್ಷ ಕರೆಕೊಟ್ಟಿದೆ. ಇದರ ಅಂಗವಾಗಿ ಅಖಿಲೇಶ್ ಅವರು ಸಮಾಜವಾದಿ ಪಕ್ಷದ ಲಖನೌ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ಕಾರ್ಯಕ್ರಮವಿತ್ತು.</p>.<p>ಮಾಯಾವತಿ ಅವರ ಸರ್ಕಾರ ನಿರಂಕುಶ ಧೋರಣೆ ಹೊಂದಿದ್ದು, ತಮ್ಮ ಬಂಧನವು ಇದನ್ನು ಸಾಬೀತು ಮಾಡಿದೆ ಎಂದು ಅಖಿಲೇಶ್ ಅವರು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ತಾವು ಅಖಿಲೇಶ್ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಹಲವೆಡೆ ಉದ್ರಿಕ್ತ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದರು. ಕೆಲವೆಡೆ ಪೊಲೀಸರು ಲಾಠಿಪ್ರಹಾರ ಮಾಡಿ ಗುಂಪನ್ನು ಚದುರಿಸಿದ್ದಾರೆ. ಇದರಿಂದಾಗಿ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>